ಬೆಳಗಾವಿ: ಕೆಲವು ತಿಂಗಳುಗಳ ಹಿಂದೆ ಎಸ್ ಸಿ ಕೋಟಾದಲ್ಲಿ ಡಿ ದರ್ಜೆಯ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ನಿವಾಸಿಯಾದ ಸಂತೋಷ್ ಹವಳೆವ್ವಗೋಳ ಎಂಬಾತನ ಬಳಿ 4ಲಕ್ಷ ರೂಪಾಯಿಗಳನ್ನು ಮೂಡಲಗಿ ತಾಲೂಕಿನ ಹಾಳೂರ ಗ್ರಾಮದ ಸ್ವಾಮೀಜಿ ಅಲ್ಲಮ ಪ್ರಭು ಹಿರೇಮಠ ಪಡೆದಿರುತ್ತಾನೆ. ಕೆಲಸ ಸಿಗದೆ ಇದ್ದಾಗ ಸಂತೋಷ್ ಆಗಸ್ಟ್ ೧೫ ರಂದು ಹಣ ವಾಪಾಸ್ ಕೇಳಿರುತ್ತಾನೆ.
ಈ ಸಂದರ್ಭದಲ್ಲಿ ಸ್ವಾಮೀಜಿಯು ತನ್ನ ಸ್ನೇಹಿತರೊಂದಿಗೆ ಸೇರಿ ಸಂತೋಷನ ಬೆನ್ನಿಗೆ ಮತ್ತು ಕಾಲಿಗೆ ಚಾಕುವಿನಿಂದ ಚುಚ್ಚಿ ಗಾಯ ಮಾಡಿರುತ್ತಾನೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅಲ್ಲಮ ಪ್ರಭು ಹಿರೇಮಠ ನನ್ನು ಬಂಧಿಸಿದ್ದಾರೆ.
ಈ ವಿಚಾರದ ಬೆನ್ನಲ್ಲೇ ಈ ಸ್ವಾಮೀಜಿ ಬೆಂಗಳೂರಿನ ಬಿಬಿಎಂಪಿ ಚುನಾವಣೆಯನ್ನು ಹ್ಯಾಕ್ ಮಾಡಿ ಗೆಲ್ಲಿಸುವುದಾಗಿ 5ಲಕ್ಷ ರೂಪಾಯಿಗಳನ್ನು ಪಡೆದು ವಂಚಿಸಿರುವ ವಿಚಾರವೂ ಸಹ ಬೆಳಕಿಗೆ ಬಂದಿದೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…