Categories: CrimeLatest

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 15.45 ಕೋಟಿ ದೋಚಿದ ವಂಚಕರು: ಉದ್ಯಮಿಗೆ ಸಿಬಿಐ ಹೆಸರಿನಲ್ಲಿ ಬಲೆ

ರಾಜ್ಯದಲ್ಲಿ ದಿನೇ ದಿನೇ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಉದ್ಯಮಿಯೊಬ್ಬರನ್ನು ಭಯಭೀತಿಗೊಳಿಸಿ 15 ಕೋಟಿ 45 ಲಕ್ಷ ರೂಪಾಯಿ ದೋಚಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಸೈಬರ್ ಕಮಾಂಡ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಹೈದರಾಬಾದ್ ಮೂಲದ ವೆಂಕಟೇಶ್ ಶರತ್ ನಾಯಕ್ ಮತ್ತು ಡೆವಗತ್ ಶ್ರೀಪಾದ್ ನಾಯಕ್ ಎಂದು ಗುರುತಿಸಲಾಗಿದೆ.

ಬೆಳಗಾವಿ ಮೂಲದ ಉದ್ಯಮಿ ಅಜಿತ್ ಗೋಪಾಲಕೃಷ್ಣ ಅವರಿಗೆ ಫೆಬ್ರವರಿ 7 ರಂದು ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿತ್ತು. ಕರೆ ಮಾಡಿದ ವ್ಯಕ್ತಿ ತನ್ನನ್ನು ಸಿಬಿಐ ನಿರ್ದೇಶಕ ಎಂದು ಪರಿಚಯಿಸಿಕೊಂಡು, “ನಿಮ್ಮ ಹೆಸರಿನಲ್ಲಿರುವ ಸಿಮ್ ಕಾರ್ಡ್‌ಗಳು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಿಲುಕಿಕೊಂಡಿವೆ. ನಿಮ್ಮ ಖಾತೆಯಿಂದ 25 ಲಕ್ಷ ರೂ. ವರ್ಗಾವಣೆ ಆಗಿದ್ದು, ಅದರಲ್ಲಿ 5 ಲಕ್ಷ ರೂ. ಕಮಿಷನ್ ಪಡೆದಿದ್ದೀರಿ” ಎಂದು ಬೆದರಿಕೆ ಹಾಕಿದ್ದಾನೆ.

ಈ ಮೂಲಕ ಉದ್ಯಮಿಯನ್ನು ಮಾನಸಿಕವಾಗಿ ಒತ್ತಡಕ್ಕೆ ಒಳಪಡಿಸಿದ ವಂಚಕರು, ವಿಡಿಯೋ ಕಾಲ್ ಮೂಲಕ ಸುಮಾರು 30 ದಿನಗಳ ಕಾಲ ನಿರಂತರವಾಗಿ ಕಣ್ಗಾವಲಿನಲ್ಲಿ ಇಟ್ಟು ‘ಡಿಜಿಟಲ್ ಅರೆಸ್ಟ್’ ನಡೆಸಿದ್ದಾರೆ. ತನಿಖೆಗೆ ಸಹಕರಿಸದಿದ್ದರೆ ಜೈಲಿಗೆ ಹಾಕುವುದಾಗಿ ಬೆದರಿಸಿ, ಫೆಬ್ರವರಿ 9 ರಂದು ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು 15.45 ಕೋಟಿ ರೂಪಾಯಿಗಳನ್ನು RTGS ಮೂಲಕ ವರ್ಗಾಯಿಸಿಕೊಂಡಿದ್ದಾರೆ.

ವಂಚನೆಗೆ ಒಳಗಾದ ಬಳಿಕ ಅಜಿತ್ ಗೋಪಾಲಕೃಷ್ಣ ಅವರು ಬೆಳಗಾವಿ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ಸೈಬರ್ ಕಮಾಂಡ್ ಡಿಜಿಪಿ ಪ್ರಣವ್ ಮೋಹಂತಿ ಅವರ ಮಾರ್ಗದರ್ಶನದಲ್ಲಿ ತನಿಖೆ ನಡೆಸಿದ ಸಿಸಿಬಿಯ ಸೈಬರ್ ವಿಭಾಗದ ತಂಡ, ಆರೋಪಿಗಳು ಬಳಸಿದ್ದ 10ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಪತ್ತೆಹಚ್ಚಿದೆ.

ತನಿಖೆಯ ಭಾಗವಾಗಿ ಹೈದರಾಬಾದ್‌ನ ಗಚ್ಚಿಬೌಲಿ ಪ್ರದೇಶದ ಹಾಸ್ಟೆಲ್‌ನಲ್ಲಿ ಅಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಸುಮಾರು 2 ಕೋಟಿ ರೂಪಾಯಿ ಹಣವನ್ನು ಫ್ರೀಜ್ ಮಾಡಲಾಗಿದೆ. ಈ ಪ್ರಕರಣದ ಮುಖ್ಯ ಆರೋಪಿ ಸದ್ಯ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಈ ಘಟನೆ, ಸೈಬರ್ ವಂಚಕರು ಹೊಸ ಹೊಸ ವಿಧಾನಗಳನ್ನು ಬಳಸಿ ಸಾಮಾನ್ಯ ಜನರಿಂದ ಹಿಡಿದು ಉದ್ಯಮಿಗಳವರೆಗೆ ಹೇಗೆ ಮೋಸ ಮಾಡುತ್ತಿದ್ದಾರೆ ಎಂಬುದಕ್ಕೆ ಮತ್ತೊಂದು ಸ್ಪಷ್ಟ ಉದಾಹರಣೆಯಾಗಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

18 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

18 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

18 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

18 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

18 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

18 hours ago