ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಜೈಸನ್ ಡಿಸೋಜಾ ಮತ್ತು ಲವೀನಾ ಎಂದು ಗುರುತಿಸಲಾಗಿದೆ. ಇವರು ನಿರುದ್ಯೋಗಿಗಳು ಹಾಗೂ ಖಾಸಗಿ ಕಂಪನಿಗಳಲ್ಲಿ ಕಡಿಮೆ ಸಂಬಳಕ್ಕೆ ಕೆಲಸ ಮಾಡುತ್ತಿದ್ದ ಯುವಕರನ್ನು ಟಾರ್ಗೆಟ್ ಮಾಡಿ, ಕೋರ್ಟ್ನಲ್ಲಿ ಡಿ-ಗ್ರೂಪ್ ಹುದ್ದೆ ಕೊಡಿಸುತ್ತೇವೆ ಎಂದು ನಂಬಿಸುತ್ತಿದ್ದರು.
ಈ ಮೂಲಕ ಒಬ್ಬೊಬ್ಬರಿಂದ 10 ಲಕ್ಷದಿಂದ 25 ಲಕ್ಷ ರೂಪಾಯಿವರೆಗೆ ಹಣ ವಸೂಲಿ ಮಾಡುತ್ತಿದ್ದರು. ಹಲವು ಮಂದಿಯಿಂದ ಹಣ ಪಡೆದು ಉದ್ಯೋಗ ನೀಡದೆ ಮೋಸ ಮಾಡಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.
ಬಸವೇಶ್ವರನಗರ ಸೇರಿದಂತೆ ವಿವಿಧ ಠಾಣೆಗಳಲ್ಲಿ ಆರೋಪಿಗಳ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಪ್ರಾಥಮಿಕ ತನಿಖೆಯ ಪ್ರಕಾರ, 500ಕ್ಕೂ ಹೆಚ್ಚು ಜನರಿಂದ 25 ಕೋಟಿ ರೂಪಾಯಿಗೂ ಅಧಿಕ ಹಣ ದೋಚಿರುವ ಶಂಕೆ ವ್ಯಕ್ತವಾಗಿದೆ.
ಇದೇ ದಂಪತಿ 2024ರಲ್ಲೂ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಹೇಳಿ ವಂಚನೆ ನಡೆಸಿ ಜೈಲು ಸೇರಿದ್ದರು. ಆದರೆ ಜೈಲಿನಿಂದ ಬಿಡುಗಡೆಯಾದ ಬಳಿಕವೂ ತಮ್ಮ ಕೃತ್ಯಗಳನ್ನು ಮುಂದುವರೆಸಿರುವುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಪ್ರಸ್ತುತ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ಮುಂದುವರೆಸಿದ್ದು, ಇನ್ನಷ್ಟು ಮಾಹಿತಿ ಹೊರಬರುವ ಸಾಧ್ಯತೆ ಇದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…