ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದಲ್ಲಿ ಪಾರ್ಟಿ ವಿಚಾರವಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಬೆಳಕಿಗೆ ಬಂದಿದೆ. ಹನುಮಂತಪ್ಪ ಇಟಗಿ ಹತ್ಯೆಯಾದ ವ್ಯಕ್ತಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಸ್ನೇಹಿತ ವಿಶ್ವನಾಥ್ ವಿರುದ್ಧ ಆರೋಪ ಕೇಳಿಬಂದಿದೆ.
ಹನುಮಂತಪ್ಪ ಊರಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡು ವಯಸ್ಸಾದ ತಂದೆ-ತಾಯಿಯನ್ನು ನೋಡಿಕೊಳ್ಳುತ್ತಿದ್ದನು. ವಿಶ್ವನಾಥ್ ಹಾಗೂ ಹನುಮಂತಪ್ಪ ಇಬ್ಬರೂ ಒಂದೇ ಗ್ರಾಮದವರಾಗಿದ್ದು, ಆಪ್ತ ಸ್ನೇಹಿತರಾಗಿದ್ದರು.
ಐದು ತಿಂಗಳ ಹಿಂದೆ ವಿಶ್ವನಾಥ್ಗೆ ಗಂಡು ಮಗು ಹುಟ್ಟಿತ್ತು. ಇದೇ ಖುಷಿಗೆ ಪಾರ್ಟಿ ಕೊಡಿಸುವಂತೆ ಹನುಮಂತಪ್ಪ ಹಲವು ಬಾರಿ ಕೇಳುತ್ತಿದ್ದನು ಎನ್ನಲಾಗಿದೆ. ಬಳಿಕ ವಿಶ್ವನಾಥ್ ಹೊಸ ಬೈಕ್ ಖರೀದಿಸಿದ ಸಂದರ್ಭದಲ್ಲೂ ಪಾರ್ಟಿ ವಿಚಾರ ಪ್ರಸ್ತಾಪಿಸಿ ಸ್ನೇಹಿತರ ಎದುರಲ್ಲೇ ಹನುಮಂತಪ್ಪ ಗೇಲಿ ಮಾಡುತ್ತಿದ್ದನೆಂದು ತಿಳಿದುಬಂದಿದೆ.
ಎರಡು ದಿನಗಳ ಹಿಂದೆ ಗ್ರಾಮದಲ್ಲಿ ಮೋಹರಂ ಹಬ್ಬದ ಸಂಭ್ರಮ ನಡೆಯುತ್ತಿದ್ದ ವೇಳೆ ಮತ್ತೆ ಪಾರ್ಟಿ ವಿಚಾರವಾಗಿ ಮಾತುಕತೆ ಆರಂಭವಾಗಿದೆ. ಮಾತಿಗೆ ಮಾತು ಬೆಳೆದು ಇಬ್ಬರ ನಡುವೆ ಜಗಳ ನಡೆದಿದೆ. ಈ ವೇಳೆ ಹನುಮಂತಪ್ಪನ ಕೈ ವಿಶ್ವನಾಥ್ ಕಣ್ಣಿಗೆ ತಾಗಿದ್ದರಿಂದ ಆತ ಕೋಪಗೊಂಡಿದ್ದಾನೆ ಎನ್ನಲಾಗಿದೆ.
ಕೋಪದ ಭರದಲ್ಲಿ ವಿಶ್ವನಾಥ್ ಹನುಮಂತಪ್ಪನನ್ನು ನೆಲಕ್ಕುರುಳಿಸಿ ಹಲ್ಲೆ ನಡೆಸಿದ್ದಾನೆ. ಬಳಿಕ ಅಲ್ಲೇ ಇದ್ದ ಕಲ್ಲಿನಿಂದ ತಲೆಗೆ ಹೊಡೆದ ಪರಿಣಾಮ ಹನುಮಂತಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಈಶ್ವರಹಳ್ಳಿ–ಕೂಡಿಗೆ ಸರ್ಕಲ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಡಳಿತ…
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಟಗೇರಿ ಗ್ರಾಮದಲ್ಲಿ ಅನುಮಾನದಿಂದ ದಾರುಣ ಘಟನೆ ಸಂಭವಿಸಿದೆ. ಪತ್ನಿಯ ಮೇಲೆ ಅನುಮಾನ ಹೊಂದಿದ್ದ ವ್ಯಕ್ತಿಯೊಬ್ಬ…
ಬೆಂಗಳೂರು: ನಗರದಲ್ಲಿ ಪ್ರೇಮ ಸಂಬಂಧ ದಾರುಣ ಅಂತ್ಯ ಕಂಡ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮದುವೆಗೆ…
ರಾಜ್ಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿರುವ ಬೆಳಗಾವಿ ವಿಭಾಗದ ಹೆಚ್ಚುವರಿ ಅಬಕಾರಿ ಆಯುಕ್ತ ವೈ. ಮಂಜುನಾಥ್ ವಿರುದ್ಧದ ಭ್ರಷ್ಟಾಚಾರದ ಆರೋಪಗಳು ದಿನದಿಂದ…
ಭಟ್ಕಳ: ಉದ್ಯೋಗ ನಿಮಿತ್ತ ಕಳೆದ ಕೆಲವು ತಿಂಗಳುಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದ ಭಟ್ಕಳ ಮೂಲದ ಯುವತಿಯೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ…