ಆಗಸ್ಟ್ 1 ರಿಂದ ನಂದಿನಿ ಹಾಲಿನ ದರ 3 ರೂ ಹೆಚ್ಚಳವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸ್ಪಷ್ಟನೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ನಂದಿನಿ ಹಾಲಿನ ದರ 3 ರೂ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ.
ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಾಲಿನ ಬೆಲೆ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಆಗಸ್ಟ್ 1 ರಿಂದ ನೂತನ ದರ ಜಾರಿಗೆ ಬರಲಿದೆ ಎಂದರು. ರೈತರು ಪಶುಸಂಗೋಪನೆ ಮಾಡಲು ಬಹಳ ತೊಂದರೆಯಾಗುತ್ತಿದೆ, ಸಾಕಷ್ಟು ರೈತರು ಹಸು ಮಾರಾಟಕ್ಕೆ ಮುಂದಾಗಿದ್ದಾರೆ , ಆದ್ದರಿಂದ ನಂದಿನಿ ಹಾಲಿಗೆ ಹೆಚ್ಚುವರಿಯಾಗಿ ಬರುವ ಹಣವನ್ನು ನೇರವಾಗಿ ರೈತರಿಗೆ ನೀಡಲಾಗುತ್ತದೆ ಎಂದರು.
ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ಮೂರು ರೂಪಾಯಿ ಹೆಚ್ಚಳ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಆಗಸ್ಟ್ 1 ರಿಂದ ನಂದಿನಿ ಹಾಲಿನ ದರ ಹೆಚ್ಚಳ ಜಾರಿಗೆ ಬರಲಿದೆ. ಯಾವುದಕ್ಕೆ ಎಷ್ಟು ದರ ಎಂಬ ಮಾಹಿತಿಯನ್ನು ನೋಡುವುದಾದರೆ, ಹೋಮೋಜಿನೈಸ್ಟ್ ಟೋನ್ಡ್ ಹಾಲು 40 ರೂ ದಿಂದ 43 ರೂ. ಶುಭಂ ಹಾಲು 45 ರೂ ದಿಂದ 48 ರೂ. ಮೊಸರು- 47- 50 ರೂ. ಟೋನ್ಡ್ ಹಾಲು- 39 ರೂದಿಂದ 42 ರೂ. ಶುಭಂ ಹಾಲು (ಹಸಿರು)- 45 ರೂದಿಂದ 48 ರೂ. ಸ್ಪೆಷಲ್ ಹಾಲು (ಆರೆಂಜ್) 45 ರೂ ದಿಂದ 48 ರೂ. ಸಮೃದ್ದಿ ಹಾಲು 50 ರೂ ದಿಂದ 53 ರೂ. ಸಂತೃಪ್ತಿ ಹಾಲು 52 ರೂ ದಿಂದ 55 ರೂ. ಆಗಿದೆ.
ಪ್ರತಿ ಲೀಟರ್ ಹಾಲಿನ ದರ 5 ರೂಪಾಯಿ ಹೆಚ್ಚಳ ಮಾಡುವಂತೆ ಕೆಎಂಎಫ್ ಪ್ರಸ್ತಾವನೆ ಸಲ್ಲಿಸಿದ್ದು, ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆ ನಡೆಸಿ 5 ರೂಪಾಯಿ ಬದಲಿಗೆ 3 ರೂ. ಹೆಚ್ಚಳಕ್ಕೆ ಸರ್ಕಾರ ಸಮ್ಮತಿ ನೀಡಿದೆ. ಹಾಲು ಒಕ್ಕೂಟದ ನಷ್ಟ ಸರಿದೂಗಿಸಲು ದರ ಹೆಚ್ಚಳಕ್ಕೆ ಸಮ್ಮತಿ ನೀಡಲಾಗಿದೆ ಎಂದು ಹೇಳಲಾಗಿದೆ. ಸಭೆಯಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶು ಸಂಗೋಪನಾ ಇಲಾಖೆ ಸಚಿವ ಕೆ. ವೆಂಕಟೇಶ್, ಕೆಎಂಎಫ್ ಅಧ್ಯಕ್ಷ ಭೀಮನಾಯ್ಕ್, ಕೆಎಂಎಫ್ ವ್ಯವಸ್ಥಾಪಕ ಜಗದೀಶ್, ನಿರ್ದೇಶಕರಾದ ಹೆಚ್.ಡಿ. ರೇವಣ್ಣ, ಮಾಲೂರು ಶಾಸಕ ನಂಜೇಗೌಡ, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಪಶು ಸಂಗೋಪನ ಇಲಾಖೆ ಕಾರ್ಯದರ್ಶಿ ಸಲ್ಮಾ, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಮೊದಲಾದವರು ಭಾಗವಹಿಸಿದ್ದರು.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…