ಆಗಸ್ಟ್ 1 ರಿಂದ ನಂದಿನಿ ಹಾಲಿನ ದರ 3 ರೂ ಹೆಚ್ಚಳವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸ್ಪಷ್ಟನೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ನಂದಿನಿ ಹಾಲಿನ ದರ 3 ರೂ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ.
ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಾಲಿನ ಬೆಲೆ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಆಗಸ್ಟ್ 1 ರಿಂದ ನೂತನ ದರ ಜಾರಿಗೆ ಬರಲಿದೆ ಎಂದರು. ರೈತರು ಪಶುಸಂಗೋಪನೆ ಮಾಡಲು ಬಹಳ ತೊಂದರೆಯಾಗುತ್ತಿದೆ, ಸಾಕಷ್ಟು ರೈತರು ಹಸು ಮಾರಾಟಕ್ಕೆ ಮುಂದಾಗಿದ್ದಾರೆ , ಆದ್ದರಿಂದ ನಂದಿನಿ ಹಾಲಿಗೆ ಹೆಚ್ಚುವರಿಯಾಗಿ ಬರುವ ಹಣವನ್ನು ನೇರವಾಗಿ ರೈತರಿಗೆ ನೀಡಲಾಗುತ್ತದೆ ಎಂದರು.
ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ಮೂರು ರೂಪಾಯಿ ಹೆಚ್ಚಳ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಆಗಸ್ಟ್ 1 ರಿಂದ ನಂದಿನಿ ಹಾಲಿನ ದರ ಹೆಚ್ಚಳ ಜಾರಿಗೆ ಬರಲಿದೆ. ಯಾವುದಕ್ಕೆ ಎಷ್ಟು ದರ ಎಂಬ ಮಾಹಿತಿಯನ್ನು ನೋಡುವುದಾದರೆ, ಹೋಮೋಜಿನೈಸ್ಟ್ ಟೋನ್ಡ್ ಹಾಲು 40 ರೂ ದಿಂದ 43 ರೂ. ಶುಭಂ ಹಾಲು 45 ರೂ ದಿಂದ 48 ರೂ. ಮೊಸರು- 47- 50 ರೂ. ಟೋನ್ಡ್ ಹಾಲು- 39 ರೂದಿಂದ 42 ರೂ. ಶುಭಂ ಹಾಲು (ಹಸಿರು)- 45 ರೂದಿಂದ 48 ರೂ. ಸ್ಪೆಷಲ್ ಹಾಲು (ಆರೆಂಜ್) 45 ರೂ ದಿಂದ 48 ರೂ. ಸಮೃದ್ದಿ ಹಾಲು 50 ರೂ ದಿಂದ 53 ರೂ. ಸಂತೃಪ್ತಿ ಹಾಲು 52 ರೂ ದಿಂದ 55 ರೂ. ಆಗಿದೆ.
ಪ್ರತಿ ಲೀಟರ್ ಹಾಲಿನ ದರ 5 ರೂಪಾಯಿ ಹೆಚ್ಚಳ ಮಾಡುವಂತೆ ಕೆಎಂಎಫ್ ಪ್ರಸ್ತಾವನೆ ಸಲ್ಲಿಸಿದ್ದು, ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆ ನಡೆಸಿ 5 ರೂಪಾಯಿ ಬದಲಿಗೆ 3 ರೂ. ಹೆಚ್ಚಳಕ್ಕೆ ಸರ್ಕಾರ ಸಮ್ಮತಿ ನೀಡಿದೆ. ಹಾಲು ಒಕ್ಕೂಟದ ನಷ್ಟ ಸರಿದೂಗಿಸಲು ದರ ಹೆಚ್ಚಳಕ್ಕೆ ಸಮ್ಮತಿ ನೀಡಲಾಗಿದೆ ಎಂದು ಹೇಳಲಾಗಿದೆ. ಸಭೆಯಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶು ಸಂಗೋಪನಾ ಇಲಾಖೆ ಸಚಿವ ಕೆ. ವೆಂಕಟೇಶ್, ಕೆಎಂಎಫ್ ಅಧ್ಯಕ್ಷ ಭೀಮನಾಯ್ಕ್, ಕೆಎಂಎಫ್ ವ್ಯವಸ್ಥಾಪಕ ಜಗದೀಶ್, ನಿರ್ದೇಶಕರಾದ ಹೆಚ್.ಡಿ. ರೇವಣ್ಣ, ಮಾಲೂರು ಶಾಸಕ ನಂಜೇಗೌಡ, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಪಶು ಸಂಗೋಪನ ಇಲಾಖೆ ಕಾರ್ಯದರ್ಶಿ ಸಲ್ಮಾ, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಮೊದಲಾದವರು ಭಾಗವಹಿಸಿದ್ದರು.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…