Latest

ಆಗಸ್ಟ್ 1 ರಿಂದ ನಂದಿನಿ ಹಾಲಿನ ದರ 3 ರೂ. ಹೆಚ್ಚಳ : ‘ಕೆಎಂಎಫ್’ ಅಧ್ಯಕ್ಷ ಭೀಮಾನಾಯ್ಕ್ ಸ್ಪಷ್ಟನೆ

ಆಗಸ್ಟ್ 1 ರಿಂದ ನಂದಿನಿ ಹಾಲಿನ ದರ 3 ರೂ ಹೆಚ್ಚಳವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸ್ಪಷ್ಟನೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ನಂದಿನಿ ಹಾಲಿನ ದರ 3 ರೂ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ.
ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಾಲಿನ ಬೆಲೆ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಆಗಸ್ಟ್ 1 ರಿಂದ ನೂತನ ದರ ಜಾರಿಗೆ ಬರಲಿದೆ ಎಂದರು. ರೈತರು ಪಶುಸಂಗೋಪನೆ ಮಾಡಲು ಬಹಳ ತೊಂದರೆಯಾಗುತ್ತಿದೆ, ಸಾಕಷ್ಟು ರೈತರು ಹಸು ಮಾರಾಟಕ್ಕೆ ಮುಂದಾಗಿದ್ದಾರೆ , ಆದ್ದರಿಂದ ನಂದಿನಿ ಹಾಲಿಗೆ ಹೆಚ್ಚುವರಿಯಾಗಿ ಬರುವ ಹಣವನ್ನು ನೇರವಾಗಿ ರೈತರಿಗೆ ನೀಡಲಾಗುತ್ತದೆ ಎಂದರು.
ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ಮೂರು ರೂಪಾಯಿ ಹೆಚ್ಚಳ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಆಗಸ್ಟ್ 1 ರಿಂದ ನಂದಿನಿ ಹಾಲಿನ ದರ ಹೆಚ್ಚಳ ಜಾರಿಗೆ ಬರಲಿದೆ. ಯಾವುದಕ್ಕೆ ಎಷ್ಟು ದರ ಎಂಬ ಮಾಹಿತಿಯನ್ನು ನೋಡುವುದಾದರೆ, ಹೋಮೋಜಿನೈಸ್ಟ್ ಟೋನ್ಡ್ ಹಾಲು 40 ರೂ ದಿಂದ 43 ರೂ. ಶುಭಂ ಹಾಲು 45 ರೂ ದಿಂದ 48 ರೂ. ಮೊಸರು- 47- 50 ರೂ. ಟೋನ್ಡ್ ಹಾಲು- 39 ರೂದಿಂದ 42 ರೂ. ಶುಭಂ ಹಾಲು (ಹಸಿರು)- 45 ರೂದಿಂದ 48 ರೂ. ಸ್ಪೆಷಲ್ ಹಾಲು (ಆರೆಂಜ್) 45 ರೂ ದಿಂದ 48 ರೂ. ಸಮೃದ್ದಿ ಹಾಲು 50 ರೂ ದಿಂದ 53 ರೂ. ಸಂತೃಪ್ತಿ ಹಾಲು 52 ರೂ ದಿಂದ 55 ರೂ. ಆಗಿದೆ.
ಪ್ರತಿ ಲೀಟರ್ ಹಾಲಿನ ದರ 5 ರೂಪಾಯಿ ಹೆಚ್ಚಳ ಮಾಡುವಂತೆ ಕೆಎಂಎಫ್ ಪ್ರಸ್ತಾವನೆ ಸಲ್ಲಿಸಿದ್ದು, ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆ ನಡೆಸಿ 5 ರೂಪಾಯಿ ಬದಲಿಗೆ 3 ರೂ. ಹೆಚ್ಚಳಕ್ಕೆ ಸರ್ಕಾರ ಸಮ್ಮತಿ ನೀಡಿದೆ. ಹಾಲು ಒಕ್ಕೂಟದ ನಷ್ಟ ಸರಿದೂಗಿಸಲು ದರ ಹೆಚ್ಚಳಕ್ಕೆ ಸಮ್ಮತಿ ನೀಡಲಾಗಿದೆ ಎಂದು ಹೇಳಲಾಗಿದೆ. ಸಭೆಯಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶು ಸಂಗೋಪನಾ ಇಲಾಖೆ ಸಚಿವ ಕೆ. ವೆಂಕಟೇಶ್, ಕೆಎಂಎಫ್ ಅಧ್ಯಕ್ಷ ಭೀಮನಾಯ್ಕ್, ಕೆಎಂಎಫ್ ವ್ಯವಸ್ಥಾಪಕ ಜಗದೀಶ್, ನಿರ್ದೇಶಕರಾದ ಹೆಚ್.ಡಿ. ರೇವಣ್ಣ, ಮಾಲೂರು ಶಾಸಕ ನಂಜೇಗೌಡ, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಪಶು ಸಂಗೋಪನ ಇಲಾಖೆ ಕಾರ್ಯದರ್ಶಿ ಸಲ್ಮಾ, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಮೊದಲಾದವರು ಭಾಗವಹಿಸಿದ್ದರು.

ಭ್ರಷ್ಟರ ಬೇಟೆ

Recent Posts

ಚಲಿಸುವ ರೈಲು ಕೆಳಗೆ ಸಿಲುಕಿದ ತಂದೆ-ಮಗು: ಅದಮ್ಯ ಧೈರ್ಯದಿಂದ ಪಾರಾದ ಜೀವಗಳು!

ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…

14 hours ago

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಅಥಣಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…

14 hours ago

ಬಿಜೆಪಿ ಯುವ ಮೋರ್ಚಾ ನಾಯಕ ವೆಂಕಟೇಶ್ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…

14 hours ago

66ರ ವೃದ್ಧನಿಗೆ 35ರ ಯುವತಿಯೊಂದಿಗೆ ಮದುವೆ! ವಯಸ್ಸು ಕೇವಲ ಸಂಖ್ಯೆ ಮಾತ್ರವೇ?

66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…

15 hours ago

ವಿಮೆ-ಆಸ್ತಿ ಲಾಭಕ್ಕಾಗಿ ಗಂಡನ ಕೊಲೆ: ಹರಿಯಾಣದಲ್ಲಿ ಪ್ರಿಯಕರ ನೊಂದಿಗೆ ಪತ್ನಿ ರಚಿಸಿದ್ದ ಸಂಚು ಬಯಲು.!

ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…

15 hours ago

ಬೆಂಗಳೂರು ಡ್ರಗ್ಸ್ ಜಾಲದ ಮೇಲೆ ಭಾರೀ ದಾಳಿ: ₹36 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, 16 ಮಂದಿ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…

20 hours ago