Categories: CinemaLatest

ದಿನಕ್ಕೆ 500 ರೂ. ಸಂಬಳದಿಂದ ಸ್ಟಾರ್ ನಟಿಯವರೆಗೆ: ಸಮಂತಾ ಜೀವನದ ರೋಚಕ ಕಥೆ ಬಹಿರಂಗ!

ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ರುತ್ ಪ್ರಭು ತಮ್ಮ ವೃತ್ತಿಜೀವನದ ಆರಂಭಿಕ ದಿನಗಳ ಕುರಿತಾಗಿ ಹಲವು ಆಸಕ್ತಿಕರ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಇಂದು ಚಿತ್ರರಂಗದ ಅಗ್ರ ನಟಿಯರಲ್ಲಿ ಒಬ್ಬರಾಗಿರುವ ಸಮಂತಾ, ತಮ್ಮ ಬಾಲ್ಯದ ಕನಸು ನನಸಾಗಿದ್ದರೆ ಸಿನಿರಂಗಕ್ಕೆ ಕಾಲಿಡುತ್ತಿರಲಿಲ್ಲ ಎಂಬ ಅಚ್ಚರಿಯ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ.

ತಾವು ನಿರ್ಮಿಸಿ ನಟಿಸಿರುವ ‘ಮಾ ಇಂಟಿ ಬಂಗಾರಂ’ ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ನಿರೂಪಕಿ ಸುಮಾ ಕನಕಾಲ ನಡೆಸಿದ ವಿಶೇಷ ಸಂಭಾಷಣೆಯಲ್ಲಿ ಸಮಂತಾ ತಮ್ಮ ಹಳೆಯ ದಿನಗಳನ್ನು ನೆನಪಿಸಿಕೊಂಡರು. ಈ ವೇಳೆ ನಿರ್ದೇಶಕಿ ನಂದಿನಿ ರೆಡ್ಡಿ ಕೂಡ ಉಪಸ್ಥಿತರಿದ್ದರು.

ಪಾಕೆಟ್ ಮನಿಗಾಗಿ ಕೆಲಸ

ಕಾಲೇಜು ದಿನಗಳಲ್ಲಿ ಆರ್ಥಿಕವಾಗಿ ಸ್ವಾವಲಂಬಿಯಾಗಲು ಸಣ್ಣಪುಟ್ಟ ಕೆಲಸಗಳನ್ನು ಮಾಡುತ್ತಿದ್ದೆ ಎಂದು ಸಮಂತಾ ತಿಳಿಸಿದರು. ಹೋಟೆಲ್‌ಗಳಲ್ಲಿ ನಡೆಯುವ ಮದುವೆ ಹಾಗೂ ವಿವಿಧ ಸಮಾರಂಭಗಳಲ್ಲಿ ಅತಿಥಿಗಳನ್ನು ಸ್ವಾಗತಿಸುವ ಕೆಲಸವನ್ನು ನಿರ್ವಹಿಸುತ್ತಿದ್ದ ಅವರು, ದಿನಕ್ಕೆ 500 ರೂಪಾಯಿ ಸಂಭಾವನೆ ಪಡೆಯುತ್ತಿದ್ದರು.

“ಆ 500 ರೂಪಾಯಿಗಾಗಿ ಸುಮಾರು ಎಂಟು ಗಂಟೆಗಳ ಕಾಲ ನಿರಂತರವಾಗಿ ನಿಂತಿರಬೇಕಾಗುತ್ತಿತ್ತು. ಆರ್ಥಿಕ ಸಂಕಷ್ಟಗಳಿದ್ದರೂ ಜೀವನದಲ್ಲಿ ಏನಾದರೂ ಸಾಧಿಸಬೇಕೆಂಬ ದೃಢ ಸಂಕಲ್ಪ ನನ್ನಲ್ಲಿತ್ತು,” ಎಂದು ಅವರು ಹೇಳಿದ್ದಾರೆ.

ಆಸ್ಟ್ರೇಲಿಯಾ ಕನಸು ಕೈತಪ್ಪಿತ್ತು

ಉನ್ನತ ಶಿಕ್ಷಣಕ್ಕಾಗಿ ಆಸ್ಟ್ರೇಲಿಯಾಕ್ಕೆ ತೆರಳುವ ಕನಸನ್ನು ಸಮಂತಾ ಹೊಂದಿದ್ದರು. ಆದರೆ ಕುಟುಂಬದ ಆರ್ಥಿಕ ಪರಿಸ್ಥಿತಿ ಆ ಕನಸಿಗೆ ಅಡ್ಡಿಯಾಯಿತು.

“ನಾನು ವಿದೇಶದಲ್ಲಿ ಓದಬೇಕೆಂದು ತುಂಬಾ ಆಸೆಪಟ್ಟಿದ್ದೆ. ಆದರೆ ಮನೆಯ ಪರಿಸ್ಥಿತಿ ಅದಕ್ಕೆ ಅವಕಾಶ ನೀಡಲಿಲ್ಲ. ಬಳಿಕ ಮಾಡೆಲಿಂಗ್ ಕ್ಷೇತ್ರದತ್ತ ಗಮನಹರಿಸಿ ಆಡಿಷನ್‌ಗಳಲ್ಲಿ ಭಾಗವಹಿಸಲು ಆರಂಭಿಸಿದೆ. ಒಂದು ವೇಳೆ ಆಸ್ಟ್ರೇಲಿಯಾಕ್ಕೆ ಹೋಗಿದ್ದರೆ ಇಂದು ಚಿತ್ರರಂಗದಲ್ಲಿರುತ್ತಿರಲಿಲ್ಲ,” ಎಂದು ಸಮಂತಾ ನೆನಪಿಸಿಕೊಂಡರು.

ಸವಾಲುಗಳ ನಡುವೆಯೂ ಯಶಸ್ಸಿನ ಪಯಣ

ನಟ ನಾಗ ಚೈತನ್ಯ ಅವರೊಂದಿಗೆ ವಿಚ್ಛೇದನದ ಬಳಿಕ ಸಮಂತಾ ‘ಮಯೋಸೈಟಿಸ್’ ಎಂಬ ಅಪರೂಪದ ಕಾಯಿಲೆಯಿಂದ ಬಳಲಿದ್ದರು. ಚಿಕಿತ್ಸೆ ಪಡೆದು ಚೇತರಿಸಿಕೊಂಡ ಬಳಿಕ ಮತ್ತೆ ತಮ್ಮ ವೃತ್ತಿಜೀವನದಲ್ಲಿ ಸಕ್ರಿಯರಾಗಿದ್ದಾರೆ.

ಪ್ರಸ್ತುತ ಅವರು ತಮ್ಮದೇ ‘ತ್ರಲಾಲಾ ಮೂವಿಂಗ್ ಪಿಕ್ಚರ್ಸ್’ ನಿರ್ಮಾಣ ಸಂಸ್ಥೆಯ ಮೂಲಕ ಸಿನಿಮಾಗಳನ್ನು ನಿರ್ಮಿಸುವುದರ ಜೊತೆಗೆ ನಟನೆಯನ್ನೂ ಮುಂದುವರಿಸಿದ್ದಾರೆ. ಅವರ ಅಭಿನಯದ ‘ಮಾ ಇಂಟಿ ಬಂಗಾರಂ’ ಸಿನಿಮಾ ಜೂನ್ 19ರಂದು ಬಿಡುಗಡೆಯಾಗಲಿದ್ದು, ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಮೂಡಿದೆ.

ಸಾಮಾನ್ಯ ಕುಟುಂಬದಿಂದ ಬಂದ ಹುಡುಗಿ ತನ್ನ ಪರಿಶ್ರಮ, ಆತ್ಮವಿಶ್ವಾಸ ಮತ್ತು ಕನಸುಗಳ ಬೆನ್ನಟ್ಟಿದ ಫಲವಾಗಿ ಇಂದು ಭಾರತೀಯ ಚಿತ್ರರಂಗದ ಯಶಸ್ವಿ ನಟಿಯರಲ್ಲಿ ಒಬ್ಬರಾಗಿರುವುದು ಸಮಂತಾ ಅವರ ಬದುಕಿನ ದೊಡ್ಡ ಸಾಧನೆಯಾಗಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

11 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

11 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

12 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

12 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

12 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

12 hours ago