ನಿಡಗುಂದಿ: ತಾಲೂಕಿನ ಹೆಬ್ಬಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಾಲಿಯಾಳ ಗ್ರಾಮದ ರಸ್ತೆಯೆಲ್ಲ ಚರಂಡಿಮಯ ಆಗಿದ್ದರು, ಅಧಿಕಾರಿಗಳು ಇತ್ತ ಕಡೆ ಗಮನ ಹರಿಸದೆ ಇರುವುದು ಶೋಷನಿಯ ವಿಷಯ. ಇಲ್ಲಿನ ಗ್ರಾಮದ ಜನರು ದಿನಾಲೂ ಸಂಚರಿಸಲು ಹರ ಸಾಹಸ ಪಡುವ ಸ್ಥಿತಿ ನಿರ್ಮಾಣವಾಗಿದೆ,ಗ್ರಾಮದ ಎಸ್ ಸಿ ಕಾಲೊನಿ ಹದಗೆಟ್ಟು ಹೋಗಿದ್ದು ಗ್ರಾಮ ಪಂಚಾಯಿತಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಗ್ರಾಮದ ತುಂಬೆಲ್ಲಾ ರಸ್ತೆಗಳು ಹದಗೆಟ್ಟಿದ್ದು, ಸರಿಯಾಗಿ ಸಿಸಿ ರಸ್ತೆ ಕೂಡಾ ನಿರ್ಮಿಸಿಲ್ಲ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಗ್ರಾಮದ ಕಡೆ ಬರೋದೇ ಇಲ್ಲ. ತಾವು ಆಯಿತು ತಮ್ಮ ಕೆಲಸ ಆಯ್ತು ಎನ್ನುವ ರೀತಿಯಲ್ಲಿ ಇದ್ದಾರೆ. ಪಂಚಾಯತಿ ಅಲ್ಲಿ ದುಡ್ಡು ಹೊಡೆಯುವ ಕೆಲಸ ಮಾತ್ರ ಮಾಡುತ್ತಾರೆ. ಇಂತಹ ಜನಪರ ಕೆಲಸ ಅವರಿಗೆ ಅಸಾದ್ಯ ಎಂದು ಗ್ರಾಮದ ಜನರು ಅಲ್ಲಲ್ಲಿ ಪಿಸುಗುಡುತ್ತಾರೆ. ವರದಿ ಕಂಡ ಮೇಲಾದರೂ ಸಂಬಂಧಪಟ್ಟ ಮೇಲಾಧಿಕಾರಿಗಳು ಇತ್ತ ಕಡೆ ಗಮನ ಹರಿಸಿ ಬೇಜಾವಾಬ್ದಾರಿ ಅಧಿಕಾರಿಗಳಿಗೆ ಬಿಸಿ ತಟ್ಟಿಸಿ, ಗ್ರಾಮೀಣ ಜನರಿಗೆ ಅನುಕೂಲ ಮಾಡಿಕೊಡುತ್ತಾರೋ ಇಲ್ಲವೋ ಕಾದು ನೋಡೋಣ.
ವರದಿ:ಸಂಗಪ್ಪ ಚಲವಾದಿ
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…