Latest

ಚಾಂಪಿಯನ್ಸ್ ಟ್ರೋಫಿ ಕುರಿತು ಗಂಭೀರ್ ಬಾಯಲ್ಲಿ ಬಂತು ಕೆ ಎಲ್ ರಾಹುಲ್ ಬಗ್ಗೆ ಒಳ್ಳೆ ಮಾತು..!

ಇಂಗ್ಲೆಂಡ್ ವಿರುದ್ಧ ಮೂರನೇ ಏಕದಿನ ಪಂದ್ಯ ಗೆದ್ದ ಬಳಿಕ ಭಾರತದ ಮುಖ್ಯ ಕೋಚ್ ಗೌತಮ್ ಗಂಭೀರ್ ಸುದ್ದಿಗೋಷ್ಠಿ ನಡೆಸಿದರು. ಈ ಸಂದರ್ಭ, ವಿಕೆಟ್ ಕೀಪರ್ ಆಯ್ಕೆ ಕುರಿತ ಪ್ರಶ್ನೆಗೆ ಸ್ಪಷ್ಟನೆ ನೀಡಿದರು.
“ತಂಡದಲ್ಲಿ ಇಬ್ಬರು ವಿಕೆಟ್ ಕೀಪರ್​ಗಳಿದ್ದಾರೆ. ಆದರೆ ಇಬ್ಬರನ್ನೂ ಒಂದೇ ವೇಳೆ ಆಡಿಸಲು ಸಾಧ್ಯವಿಲ್ಲ. ಚಾಂಪಿಯನ್ಸ್ ಟ್ರೋಫಿಗಾಗಿ ನಮ್ಮ ಮೊದಲ ಆದ್ಯತೆ ಕೆ.ಎಲ್. ರಾಹುಲ್. ನಾವು ಅವರನ್ನೇ ಆಡಿಸಲು ಬಯಸುತ್ತೇವೆ. ಇದು ಎಂದಾದರೂ ರಿಷಭ್ ಪಂತ್‌ಗೆ ಅವಕಾಶ ಸಿಗಬಾರದು ಎಂದರ್ಥವಲ್ಲ. ಅವಶ್ಯಕತೆ ಬಂದರೆ ಅವರನ್ನೂ ಬಳಸುತ್ತೇವೆ,” ಎಂದು ಗಂಭೀರ್ ತಿಳಿಸಿದರು.
ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಪಂದ್ಯಗಳಲ್ಲಿ ಕೆ.ಎಲ್. ರಾಹುಲ್ ಆಡಿರಲಿಲ್ಲ. ಇದರಿಂದಾಗಿ ಅವರನ್ನು ಆಯ್ಕೆ ಮಾಡುವ ಬಗ್ಗೆ ಟೀಕೆಗಳು ಕೇಳಿಬಂದಿದ್ದವು. ಆದರೆ ಮೂರನೇ ಪಂದ್ಯದಲ್ಲಿ ರಾಹುಲ್ ಉತ್ತಮ ಪ್ರದರ್ಶನ ನೀಡಿದ್ದರಿಂದ, ಚಾಂಪಿಯನ್ಸ್ ಟ್ರೋಫಿಯಲ್ಲಿ ಅವರ ಸ್ಥಾನ ಪ್ರಾಯೋಗಿಕವಾಗಿ ಖಚಿತವಾಗಿದೆ. ಈ ಮೂಲಕ ಕನ್ನಡಿಗ ರಾಹುಲ್ ಮತ್ತೆ ತಂಡದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

19 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

23 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

23 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

23 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

23 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

1 day ago