ಸಿ.ಸಿ.ಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಿನಾಂಕ ೧೯/೧೦/೨೦೨೨ ರಂದು ಮೈಸೂರು ನಗರದ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ಹುಣಸೂರು ಮುಖ್ಯರಸ್ತೆ, ಆದಿತ್ಯಾ ಬಡಾವಣೆಯಲ್ಲಿರುವ ಯಶಸ್ವಿನಿ ಚೌಲ್ಟಿç ಬಳಿ ಇರುವ ಆಟೋಗ್ಯಾರೇಜ್ ಹಿಂಭಾಗದಲ್ಲಿರುವ ಕೊಠಡಿಯಲ್ಲಿ ಕಾನೂನು ಬಾಹಿರವಾಗಿ ಹಣವನ್ನು ಪಣವನ್ನಾಗಿಟ್ಟುಕೊಂಡು ಅಂದರ್ ಬಾಹರ್ ಎಂಬ ಇಸ್ವೀಟ್ ಜೂಜಾಟ ಆಡುತ್ತಿದ್ದವರ ಮೇಲೆ ದಾಳಿ ಮಾಡಿ, ಇಸ್ವೀಟ್ ಜೂಜಾಟದಲ್ಲಿ ತೊಡಗಿದ್ದ ೩೨ ಜನರನ್ನು ವಶಕ್ಕೆ ಪಡೆದು, ಪಣವಾಗಿದ್ದ ಇಟ್ಟಿದ್ದ ರೂ ೧೭, ೨೪,೦೦೦/- ನಗದು ಹಣ, ಹಣ ಎಣಿಕೆ ಮಾಡಲು ಉಪಯೋಗಿಸಿದ್ದ ಯಂತ್ರ ಹಾಗೂ ಜೂಜಾಟಕ್ಕೆ ಬಳಸಿದ್ದ ೫೨ ಇಸ್ವೀಟ್ ಎಲೆಗಳನ್ನು ವಶಪಡಿಸಿಕೊಂಡಿದ್ದು ಈ ಸಂಬAಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಡಿಸಿಪಿ, ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ವಿಭಾಗ ರವರಾದ ಶ್ರೀಮತಿ ಗೀತ ಎಂ.ಎಸ್, ಐ.ಪಿ.ಎಸ್ ಹಾಗೂ ಸಿ.ಸಿ.ಬಿ ಘಟಕದ ಎ.ಸಿ.ಪಿ ರವರಾದ ಶ್ರೀ ಸಿ.ಕೆ. ಅಶ್ವಥನಾರಾಯಣ ರವರ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಜಿ.ಶೇಖರ್ ಹಾಗೂ ಸಿಬ್ಬಂದಿಗಳಾದ ರವಿಕುಮಾರ್, ಸಲೀಂಖಾನ್, ರಾಮಸ್ವಾಮಿ, ಲಕ್ಷಿö್ಮÃಕಾಂತ.ಪಿ.ಎನ್, ಆನಂದ, ಯಾಕೂಬ್ ಷರೀಫ್, ಪವನ್, ನಬೀಪಟೇಲ್, ಮಹೇಶ್, ಚಂದ್ರಶೇಖರ್, ಗೌತಮ್ ರವರುಗಳು ಮಾಡಿರುತ್ತಾರೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ: ಚಂದ್ರಗುಪ್ತ, ಐ.ಪಿ.ಎಸ್. ರವರು ಪ್ರಶಂಸಿಸಿರುತ್ತಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…