ಸಿ.ಸಿ.ಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಿನಾಂಕ ೧೯/೧೦/೨೦೨೨ ರಂದು ಮೈಸೂರು ನಗರದ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ಹುಣಸೂರು ಮುಖ್ಯರಸ್ತೆ, ಆದಿತ್ಯಾ ಬಡಾವಣೆಯಲ್ಲಿರುವ ಯಶಸ್ವಿನಿ ಚೌಲ್ಟಿç ಬಳಿ ಇರುವ ಆಟೋಗ್ಯಾರೇಜ್ ಹಿಂಭಾಗದಲ್ಲಿರುವ ಕೊಠಡಿಯಲ್ಲಿ ಕಾನೂನು ಬಾಹಿರವಾಗಿ ಹಣವನ್ನು ಪಣವನ್ನಾಗಿಟ್ಟುಕೊಂಡು ಅಂದರ್ ಬಾಹರ್ ಎಂಬ ಇಸ್ವೀಟ್ ಜೂಜಾಟ ಆಡುತ್ತಿದ್ದವರ ಮೇಲೆ ದಾಳಿ ಮಾಡಿ, ಇಸ್ವೀಟ್ ಜೂಜಾಟದಲ್ಲಿ ತೊಡಗಿದ್ದ ೩೨ ಜನರನ್ನು ವಶಕ್ಕೆ ಪಡೆದು, ಪಣವಾಗಿದ್ದ ಇಟ್ಟಿದ್ದ ರೂ ೧೭, ೨೪,೦೦೦/- ನಗದು ಹಣ, ಹಣ ಎಣಿಕೆ ಮಾಡಲು ಉಪಯೋಗಿಸಿದ್ದ ಯಂತ್ರ ಹಾಗೂ ಜೂಜಾಟಕ್ಕೆ ಬಳಸಿದ್ದ ೫೨ ಇಸ್ವೀಟ್ ಎಲೆಗಳನ್ನು ವಶಪಡಿಸಿಕೊಂಡಿದ್ದು ಈ ಸಂಬAಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಡಿಸಿಪಿ, ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ವಿಭಾಗ ರವರಾದ ಶ್ರೀಮತಿ ಗೀತ ಎಂ.ಎಸ್, ಐ.ಪಿ.ಎಸ್ ಹಾಗೂ ಸಿ.ಸಿ.ಬಿ ಘಟಕದ ಎ.ಸಿ.ಪಿ ರವರಾದ ಶ್ರೀ ಸಿ.ಕೆ. ಅಶ್ವಥನಾರಾಯಣ ರವರ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಜಿ.ಶೇಖರ್ ಹಾಗೂ ಸಿಬ್ಬಂದಿಗಳಾದ ರವಿಕುಮಾರ್, ಸಲೀಂಖಾನ್, ರಾಮಸ್ವಾಮಿ, ಲಕ್ಷಿö್ಮÃಕಾಂತ.ಪಿ.ಎನ್, ಆನಂದ, ಯಾಕೂಬ್ ಷರೀಫ್, ಪವನ್, ನಬೀಪಟೇಲ್, ಮಹೇಶ್, ಚಂದ್ರಶೇಖರ್, ಗೌತಮ್ ರವರುಗಳು ಮಾಡಿರುತ್ತಾರೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ: ಚಂದ್ರಗುಪ್ತ, ಐ.ಪಿ.ಎಸ್. ರವರು ಪ್ರಶಂಸಿಸಿರುತ್ತಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…