ಜೂಜಿನ ಚಟಕೆ ಬಿದ್ದು ಟೆಕ್ ಉದ್ಯೋಗಿ ಒಬ್ಬನು 18 ಲಕ್ಷ ಮೌಲ್ಯದ ಚಿನ್ನ ಕಳ್ಳತನ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೂರ್ತಿ ಎಂಬ ವ್ಯಕ್ತಿ ಬಿಸಿಎ ಪದವಿ ಪೂರ್ಣಗೊಳಿಸಿ ಐಟಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ. ಆದರೆ, ಜೂಜಿನ ಚಟ ಪ್ರಾರಂಭವಾಗಿ, ಮೈತುಂಬ ಸಾಲ ಮಾಡಿಕೊಂಡು, ಕೊನೆಗೆ ಕಳ್ಳತನದ ಹಾದಿ ಹಿಡಿದಿದ್ದಾನೆ.
ಸಾಲ ತೀರಿಸಲು, ಬೆಗೂರು ಪ್ರದೇಶದ ಒಂದು ಮನೆಯಲ್ಲಿ ಬೀಗ ಮುರಿದು 18 ಲಕ್ಷ ಮೌಲ್ಯದ ಚಿನ್ನ ಕದ್ದಿದ್ದಾನೆ. ಆದರೆ, ಬೀಗ ಮುರಿದ ಕೃತ್ಯ ಬೆಳಕಿಗೆ ಬಂದ ತಕ್ಷಣ, ಬೆಗೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪೊಲೀಸರು ಆರೋಪಿಯಿಂದ 261 ಗ್ರಾಂ ಚಿನ್ನ (ಮೌಲ್ಯ ₹15 ಲಕ್ಷ) ವಶಪಡಿಸಿಕೊಂಡಿದ್ದಾರೆ. ಮೂರ್ತಿ ಈ ಹಿಂದೆ ರಾಜಗೋಪಾಲ ನಗರ ಮತ್ತು ಸಿ.ಕೆ. ಅಚ್ಚುಕಟ್ಟು ಠಾಣೆಗಳಲ್ಲಿ ಕಳ್ಳತನ ಪ್ರಕರಣಗಳಲ್ಲಿ ಜೈಲು ಸೇರಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಾರಿ ಮತ್ತೆ ಬಂಧಿತನಾಗಿ ಪೊಲೀಸರ ಅತಿಥಿಯಾಗಿದ್ದಾನೆ.
ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…
ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…
ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…
ಪಾವಗಡ: ಕರ್ನಾಟಕ ಮತ್ತು ಆಂಧ್ರಪ್ರದೇಶದ ವಿವಿಧ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದು, ಅವರಿಂದ 21…
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ 2026–27ನೇ ಸಾಲಿನಲ್ಲಿ ಸರ್ಕಾರದಿಂದ ವಿತರಿಸಲಾಗಿರುವ ಶೂ ಮತ್ತು ಸ್ಯಾಂಡಲ್ಗಳ…