Crime

ಭಟ್ಕಳದ ಶಿರಾಲಿಯಲ್ಲಿ 26 ಜನರ ವಿರುದ್ಧ ಜೂಜಾಟ ಪ್ರಕರಣ ದಾಖಲು

ಭಟ್ಕಳ ತಾಲ್ಲೂಕಿನ ಶಿರಾಲಿ ಗ್ರಾಮದ ಕೇಶವಮೂರ್ತಿ ಹಿತ್ಲು ಪ್ರದೇಶದಲ್ಲಿ ಮಾಚ್ 15ರ ರಾತ್ರಿ ಅಕ್ರಮ ಜೂಜಾಟ ನಡೆಯುತ್ತಿದ್ದ ಸ್ಥಳದಲ್ಲಿ ಭಟ್ಕಳ ಗ್ರಾಮೀಣ ಪೊಲೀಸರು ದಾಳಿ ನಡೆಸಿ 26 ಮಂದಿಯನ್ನು ಬಂಧಿಸಿದ್ದಾರೆ.

ರಾತ್ರಿ 11.30ರ ಸುಮಾರಿಗೆ, ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ರನ್ನಗೌಡ ಪಾಟೀಲ್ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಅಲ್ಲಿ ಗರ್ ಗರ್ ಮಂಡ್ಲ ಎಂಬ ಜೂಜಾಟ ನಡೆಯುತ್ತಿತ್ತು. ಪ್ರಭಾವಿ ವ್ಯಕ್ತಿಗಳ ಮೇಲೂ ಯಾವುದೇ ಅನುಕಂಪ ತೋರದೆ, ಎಲ್ಲಾ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಪ್ರಕರಣ ದಾಖಲಾಗಿರುವವರು:

  • ಮುಂಡಳ್ಳಿ ಹೊಸ್ಮನೆ: ಜಗದೀಶ ಶನಿಯಾರ ನಾಯ್ಕ (30), ನಿತ್ಯಾನಂದ ನಾರಾಯಣ ನಾಯ್ಕ (28), ದೇವೇಂದ್ರ ಜಟ್ಟಪ್ಪ ನಾಯ್ಕ (36).
  • ಮುಂಡಳ್ಳಿ ಸತ್ಯನಾರಾಯಣ ನಗರ: ಹನುಮಂತ ಶನಿಯಾರ ನಾಯ್ಕ (36), ಹನುಮಂತ ಶನಿಯಾರ ನಾಯ್ಕ.
  • ಮುಂಡಳ್ಳಿ: ನಾಗೇಶ ದುರ್ಗಪ್ಪ ನಾಯ್ಕ (30), ನಾಗರಾಜ ಲಚ್ಮಯ್ಯ ನಾಯ್ಕ.
  • ಮುಟ್ಟಳ್ಳಿ ತಲಾಂದ: ವಿನೋದ ಮಂಜಯ್ಯ ನಾಯ್ಕ (40), ಮಾದೇವ ನಾಯ್ಕ, ಮಂಗಳ ಗೊಂಡ, ಶ್ರೀನಿವಾಸ ತಿಮ್ಮಯ್ಯ ನಾಯ್ಕ, ಮಾದೇವ ನಾಗಪ್ಪ ನಾಯ್ಕ (48).
  • ಶಿರಾಲಿ ಚಿತ್ರಾಪುರ: ಗಣಪತಿ ದುರ್ಗಪ್ಪ ಬಾಕಡ (50), ಮಾದೇವ ಬಾಕಡ, ಶ್ರೀಪಾದ ಬಾಕಡ, ರಾಮಚಂದ್ರ ನಾರಾಯಣ ಬಾಕಡ.
  • ಭಟ್ಕಳ ಹಳೇ ಬಸ್ ನಿಲ್ದಾಣ: ಅಬ್ದುಲ್ ಗಫೂರ್ ಕೊಚ್ಚಪ್ಪ ಇಕ್ಕೇರಿ.
  • ಮುಂಡಳ್ಳಿ ನೀರಗದ್ದೆ: ಅನಿಲ ನಾಯ್ಕ.
  • ಚೌತನಿ: ವಿನಾಯಕ ಪಾಂಡುರಂಗ ನಾಯ್ಕ, ರಾಮಚಂದ್ರ ನಾಯ್ಕ, ವಿಠ್ಠಲ ನಾಯ್ಕ, ಮಾಸ್ತಯ್ಯ ನಾಯ್ಕ, ಭರತ ರಾಮಾ ನಾಯ್ಕ.
  • ಮುಂಡಳ್ಳಿ ಚರ್ಚ್ ಕ್ರಾಸ್: ಸದಾಶಿವ ನಾಗಪ್ಪ ನಾಯ್ಕ.

ಪೊಲೀಸರು ಈ ಪ್ರಕರಣದ ಕುರಿತು ಮುಂದಿನ ತನಿಖೆಯನ್ನು ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

2 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

9 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

9 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago