ರಾಣೆಬೆನ್ನೂರು ತಾಲೂಕು ಮಾಕನೂರು ಗ್ರಾಮದ ಸಮೀಪದ ಲಾಟೇರ್ ಜಮೀನಿನ ಬಳಿ ನಿರ್ಮಾಣದಲ್ಲಿರುವ ಮನೆಯೊಂದರಲ್ಲಿ ನಡೆಯುತ್ತಿದ್ದ ಜೂಜಾಟಕ್ಕೆ ಪೊಲೀಸರು ಸೋಮವಾರ ರಾತ್ರಿ ದಾಳಿ ನಡೆಸಿದ್ದಾರೆ. ಈ ವೇಳೆ ₹1.74 ಲಕ್ಷ ನಗದುವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಅಲ್ಲದೆ, ಜೂಜಾಟದಲ್ಲಿ ತೊಡಗಿದ್ದ 18 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕುಮಾರಪಟ್ಟಣ ಪೊಲೀಸರು, ಅಕ್ರಮ ಚಟುವಟಿಕೆಗೆ ತೊಡಗಿದ್ದವರನ್ನು ಸ್ಥಳದಲ್ಲೇ ವಶಕ್ಕೆ ಪಡೆದುಕೊಂಡರು. ಈ ದಾಳಿಯನ್ನು ಡಿಎಸ್ಪಿ ಲೋಕೇಶ್ ಜೆ ಮತ್ತು ಸಿಪಿಐ ಪ್ರವೀಣ್ ಕುಮಾರ್ ಅವರ ಮಾರ್ಗದರ್ಶನದಲ್ಲಿ, ಪಿಎಸ್ಐ ಪ್ರವೀಣ್ಕುಮಾರ್ ವಾಲೀಕಾರ ನೇತೃತ್ವದ ತಂಡ ಯಶಸ್ವಿಯಾಗಿ ನಡೆಸಿತು.
ಈ ಸಂಬಂಧ ಕುಮಾರಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ. ಗ್ರಾಮೀಣ ಪ್ರದೇಶದಲ್ಲಿ ಇಂತಹ ಅಕ್ರಮ ಜೂಜಾಟಗಳನ್ನು ನಿಯಂತ್ರಿಸಲು ಪೊಲೀಸರು ಕ್ರಮ ಕೈಗೊಂಡಿದ್ದು, ಸಾರ್ವಜನಿಕರ ಸಹಕಾರವೂ ಅಗತ್ಯವಿದೆ ಎಂಬುದು ಅಧಿಕಾರಿಗಳ ಅಭಿಪ್ರಾಯ.
***
“ಭ್ರಷ್ಟರ ಬೇಟೆ” ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8088070392
ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…