ರಾಣೆಬೆನ್ನೂರು ತಾಲೂಕು ಮಾಕನೂರು ಗ್ರಾಮದ ಸಮೀಪದ ಲಾಟೇರ್ ಜಮೀನಿನ ಬಳಿ ನಿರ್ಮಾಣದಲ್ಲಿರುವ ಮನೆಯೊಂದರಲ್ಲಿ ನಡೆಯುತ್ತಿದ್ದ ಜೂಜಾಟಕ್ಕೆ ಪೊಲೀಸರು ಸೋಮವಾರ ರಾತ್ರಿ ದಾಳಿ ನಡೆಸಿದ್ದಾರೆ. ಈ ವೇಳೆ ₹1.74 ಲಕ್ಷ ನಗದುವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಅಲ್ಲದೆ, ಜೂಜಾಟದಲ್ಲಿ ತೊಡಗಿದ್ದ 18 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕುಮಾರಪಟ್ಟಣ ಪೊಲೀಸರು, ಅಕ್ರಮ ಚಟುವಟಿಕೆಗೆ ತೊಡಗಿದ್ದವರನ್ನು ಸ್ಥಳದಲ್ಲೇ ವಶಕ್ಕೆ ಪಡೆದುಕೊಂಡರು. ಈ ದಾಳಿಯನ್ನು ಡಿಎಸ್ಪಿ ಲೋಕೇಶ್ ಜೆ ಮತ್ತು ಸಿಪಿಐ ಪ್ರವೀಣ್ ಕುಮಾರ್ ಅವರ ಮಾರ್ಗದರ್ಶನದಲ್ಲಿ, ಪಿಎಸ್ಐ ಪ್ರವೀಣ್ಕುಮಾರ್ ವಾಲೀಕಾರ ನೇತೃತ್ವದ ತಂಡ ಯಶಸ್ವಿಯಾಗಿ ನಡೆಸಿತು.
ಈ ಸಂಬಂಧ ಕುಮಾರಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ. ಗ್ರಾಮೀಣ ಪ್ರದೇಶದಲ್ಲಿ ಇಂತಹ ಅಕ್ರಮ ಜೂಜಾಟಗಳನ್ನು ನಿಯಂತ್ರಿಸಲು ಪೊಲೀಸರು ಕ್ರಮ ಕೈಗೊಂಡಿದ್ದು, ಸಾರ್ವಜನಿಕರ ಸಹಕಾರವೂ ಅಗತ್ಯವಿದೆ ಎಂಬುದು ಅಧಿಕಾರಿಗಳ ಅಭಿಪ್ರಾಯ.
***
“ಭ್ರಷ್ಟರ ಬೇಟೆ” ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8088070392
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…