ಚಿತ್ರದುರ್ಗ: ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ಗ್ರಾಮದ ಹತ್ತಿರ ನಡೆದ ವಿಶಿಷ್ಟ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಸಾಧುಗಳ ವೇಷ ತಾಳಿ ರೈತರ ವಿಶ್ವಾಸ ಗೆದ್ದು ಚಿನ್ನದ ಉಂಗುರ ದೋಚಿದ್ದ ಐವರ ತಂಡವನ್ನು ತುರುವನೂರು ಠಾಣೆ ಪೊಲೀಸರು ಸಿಕ್ಕಿಬಿದ್ದಿದ್ದಾರೆ.
ಘಟನೆಯ ವಿವರ ಹೀಗಿದೆ: ರಾಷ್ಟ್ರೀಯ ಹೆದ್ದಾರಿ 50ರ ಸಮೀಪ ರೈತ ರವಿಕುಮಾರ್ ಅವರ ಜಮೀನಿಗೆ ಕಾರಿನಲ್ಲಿ ಬಂದ ಆರೋಪಿಗಳು ಮೊದಲು ಮೆಕ್ಕೆಜೋಳದ ತೆನೆ ಚೆನ್ನಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ “ಒಂದೆರಡು ತೆನೆಗಳನ್ನು ಮುರಿದುಕೊಳ್ಳೋಣ” ಎಂದು ಹೇಳಿ ರೈತರೊಂದಿಗೆ ಮಾತುಕತೆ ಮುಂದುವರೆಸಿದರು.
ಆಮೇಲೆ ಭವಿಷ್ಯ ಹೇಳುವುದಾಗಿ ನಂಬಿಸಿ ರವಿಕುಮಾರ್ ಅವರನ್ನು ಕಾರಿನೊಳಗೆ ಕೂರಿಸಿಕೊಂಡು, ಅವರ ಕೈಯಲ್ಲಿದ್ದ ಚಿನ್ನದ ಉಂಗುರವನ್ನು ತೆಗೆದು ಬಾಯಲ್ಲಿ ಹಾಕಿಕೊಂಡರು. ತಕ್ಷಣ ರೈತನನ್ನು ಕೆಳಗಿಳಿಸಿ ಕಾರಿನಲ್ಲಿ ಪರಾರಿಯಾದರು.
ಈ ಕುರಿತು ರವಿಕುಮಾರ್ ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಪೊಲೀಸರು ತನಿಖೆ ನಡೆಸಿ, ಸಾಧುಗಳ ವೇಷದಲ್ಲಿದ್ದ ನಾಲ್ವರು ಕಳ್ಳರು ಮತ್ತು ಕಾರು ಚಾಲಕನನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಪ್ರಕರಣದಲ್ಲಿ ಬಳಸಿದ ಕಾರು ಹಾಗೂ ಕಳವು ಮಾಡಿದ ಚಿನ್ನವನ್ನು ವಶಪಡಿಸಿಕೊಳ್ಳಲು ಕ್ರಮ ಜರುಗಿದೆ.
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…
ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…
ರೈಲಿನ ಶೌಚಾಲಯದಲ್ಲಿ ಚಿತ್ರೀಕರಿಸಲ್ಪಟ್ಟಿರುವ ಒಂದು ವಿಡಿಯೊ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೊದಲ್ಲಿ ಮೊದಲು ಮಾಸ್ಕ್ ಧರಿಸಿರುವ ವ್ಯಕ್ತಿಯೊಬ್ಬ ಶೌಚಾಲಯದಿಂದ…