Crime

ಸಾಧುಗಳ ವೇಷ ತಾಳಿ ರೈತನ ಚಿನ್ನದ ಉಂಗುರ ದೋಚಿದ ಐವರ ಗ್ಯಾಂಗ್‌ ಬಂಧನ”

ಚಿತ್ರದುರ್ಗ: ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ಗ್ರಾಮದ ಹತ್ತಿರ ನಡೆದ ವಿಶಿಷ್ಟ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಸಾಧುಗಳ ವೇಷ ತಾಳಿ ರೈತರ ವಿಶ್ವಾಸ ಗೆದ್ದು ಚಿನ್ನದ ಉಂಗುರ ದೋಚಿದ್ದ ಐವರ ತಂಡವನ್ನು ತುರುವನೂರು ಠಾಣೆ ಪೊಲೀಸರು ಸಿಕ್ಕಿಬಿದ್ದಿದ್ದಾರೆ.

ಘಟನೆಯ ವಿವರ ಹೀಗಿದೆ: ರಾಷ್ಟ್ರೀಯ ಹೆದ್ದಾರಿ 50ರ ಸಮೀಪ ರೈತ ರವಿಕುಮಾರ್ ಅವರ ಜಮೀನಿಗೆ ಕಾರಿನಲ್ಲಿ ಬಂದ ಆರೋಪಿಗಳು ಮೊದಲು ಮೆಕ್ಕೆಜೋಳದ ತೆನೆ ಚೆನ್ನಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ “ಒಂದೆರಡು ತೆನೆಗಳನ್ನು ಮುರಿದುಕೊಳ್ಳೋಣ” ಎಂದು ಹೇಳಿ ರೈತರೊಂದಿಗೆ ಮಾತುಕತೆ ಮುಂದುವರೆಸಿದರು.

ಆಮೇಲೆ ಭವಿಷ್ಯ ಹೇಳುವುದಾಗಿ ನಂಬಿಸಿ ರವಿಕುಮಾರ್ ಅವರನ್ನು ಕಾರಿನೊಳಗೆ ಕೂರಿಸಿಕೊಂಡು, ಅವರ ಕೈಯಲ್ಲಿದ್ದ ಚಿನ್ನದ ಉಂಗುರವನ್ನು ತೆಗೆದು ಬಾಯಲ್ಲಿ ಹಾಕಿಕೊಂಡರು. ತಕ್ಷಣ ರೈತನನ್ನು ಕೆಳಗಿಳಿಸಿ ಕಾರಿನಲ್ಲಿ ಪರಾರಿಯಾದರು.

ಈ ಕುರಿತು ರವಿಕುಮಾರ್ ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಪೊಲೀಸರು ತನಿಖೆ ನಡೆಸಿ, ಸಾಧುಗಳ ವೇಷದಲ್ಲಿದ್ದ ನಾಲ್ವರು ಕಳ್ಳರು ಮತ್ತು ಕಾರು ಚಾಲಕನನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಪ್ರಕರಣದಲ್ಲಿ ಬಳಸಿದ ಕಾರು ಹಾಗೂ ಕಳವು ಮಾಡಿದ ಚಿನ್ನವನ್ನು ವಶಪಡಿಸಿಕೊಳ್ಳಲು ಕ್ರಮ ಜರುಗಿದೆ.

nazeer ahamad

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

9 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

11 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

22 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

22 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

22 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

23 hours ago