ನಗರದಲ್ಲಿ ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದ ನಾಲ್ಕು ಮಕ್ಕಳ ತಾಯಿಯೊಬ್ಬರ ಮೇಲೆ ದೆಹಲಿ ಮೂಲದ ಮಹಿಳೆಯೊಂದಿಗೆ ನಾಲ್ವರು ವ್ಯಕ್ತಿಗಳು ಪೈಶಾಚಿಕ ಕೃತ್ಯ ಎಸಗಿದ ಘಟನೆ ನಡೆದಿದೆ.
ಪೊಲೀಸರ ಪ್ರಕಾರ, ಆರೋಪಿಗಳು ಮಹಿಳೆಯನ್ನು ಹೋಟೆಲ್ ಟೆರೆಸ್ಗೆ ಕರೆದುಕೊಂಡು ಹೋಗಿ ಊಟ ನೀಡುವ ನೆಪದಲ್ಲಿ ಆಕೆಯ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಮಾನವೀಯತೆಯ ಕನಿಷ್ಠ ಅಂಶವನ್ನೂ ಮರೆತು, ಆಕೆಯ ಮುಖ ಪರಚಿ ಕ್ರೂರವಾಗಿ ವರ್ತಿಸಿದ್ದಾರೆ.
ಅತ್ಯಾಚಾರದ ಸಮಯದಲ್ಲಿ ಮಹಿಳೆ ಮರಿಯಾದಂತೆ ಕಣ್ಣೀರಿಟ್ಟು, “ದಯವಿಟ್ಟು ಬಿಡಿ” ಎಂದು ಹಿಂದಿಯಲ್ಲಿ ಬೇಡಿಕೊಂಡರೂ ಕಾಮುಕರು ನಿರ್ದಯವಾಗಿ ಬೆಳಗಿನ ಜಾವದವರೆಗೆ ಆಕೆಯನ್ನು ಹಿಂಸಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಬಳಿಕ, ಈ ಘಟನೆಯ ಬಗ್ಗೆ ಯಾರಿಗೂ ಹೇಳದಂತೆ ಬೆದರಿಸಿ, ಆಕೆಯನ್ನು ಬಿಟ್ಟು ಪರಾರಿಯಾದರು. ಈ ಸಂದರ್ಭ ಮಹಿಳೆಯ ಮೊಬೈಲ್ ಫೋನ್ ಕಳವಾಗಿದ್ದರಿಂದ, ಅವರು ತಕ್ಷಣವೇ 112 ತುರ್ತುಸೇವೆಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದರು.
ಘಟನೆ ತಿಳಿದ ಕೂಡಲೇ ಪೊಲೀಸರು ಶೋಧ ಕಾರ್ಯ ಆರಂಭಿಸಿ, ಆರೋಪಿ ಅಜಿತ್, ವಿಶು, ಶಿಬುಲ್ ಮತ್ತು ಶೋಭನ್ಎಂಬವರನ್ನು ತಕ್ಷಣವೇ ಬಂಧಿಸಿದರು. ಪಶ್ಚಿಮ ಬಂಗಾಳ ಮತ್ತು ಉತ್ತರಾಖಂಡ್ ಮೂಲದ ಈ ನಾಲ್ವರು ಅಪರಾಧಿಗಳನ್ನು ತಮ್ಮ ರಾಜ್ಯಕ್ಕೆ ಪಲಾಯನ ಮಾಡುವ ಮುನ್ನವೇ ಕಟ್ಟು ನಿಲ್ಲಿಸಲಾಯಿತು.
ಸಂತ್ರಸ್ತ ಮಹಿಳೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ಪರೀಕ್ಷೆ ನಡೆಸಿ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಪ್ರಸ್ತುತ, ಆಕೆಯ ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಭೀಕರ ಘಟನೆಯು ನಾಗರಿಕ ಸಮಾಜಕ್ಕೆ ದೊಡ್ಡ ಎಚ್ಚರಿಕೆಯಾಗಿದ್ದು, ಮಹಿಳೆಯರ ಸುರಕ್ಷತೆ ಸಂಬಂಧ ಹೊಸ ಚರ್ಚೆ ಹುಟ್ಟುಹಾಕಿದೆ. ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲು ಮುಂದಾಗಿದ್ದಾರೆ.
ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…
ನಾಸಿಕ್ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್ಆರ್…
ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…
ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…
ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…
ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…