Latest

ಆಸ್ತಿ ವೈಷಮ್ಯ; ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ- ಗುಪ್ತಾಂಗಕ್ಕೆ ರಾಡ್‌!

ಐವರು ಸೇರಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.
‘ಘಟನೆ ನಡೆಯುವುದಕ್ಕೂ ಒಂದು ದಿನ ಮೊದಲು ನಾನು ನನ್ನ ಸಹೋದರನ ಹುಟ್ಟುಹಬ್ಬದ ಆಚರಣೆಗಾಗಿ ಗುರುಗ್ರಾಮಕ್ಕೆ ಹೋಗಿದ್ದೆ.  ಆಚರಣೆ ಮುಗಿದ ಮೇಲೆ, ಬಸ್‌ ನಿಲ್ದಾಣದ ವರೆಗೂ ನನ್ನ ಸಹೋದರ ಬಿಟ್ಟು ಹೋದ. ಅಲ್ಲಿಂದ ನನಗೆ ಗೊತ್ತಿರುವವರೇ ಎಲ್ಲಿಗೋ ಕರೆದುಕೊಂಡು ಹೋದರು’ ಎಂದು ಸಂತ್ರಸ್ತ ಮಹಿಳೆಯು ಹೇಳಿಕೆ ನೀಡಿದ್ದಾರೆ ಎಂದು ನಿಪುನ್‌ ಅಗರ್ವಾಲ್‌ ತಿಳಿಸಿದರು.

‘ಮಹಿಳೆಯೊಬ್ಬರು ಆಶ್ರಮ್‌ ರಸ್ತೆಯಲ್ಲಿ ಅನಾಥವಾಗಿ ಬಿದ್ದಿದ್ದಾರೆ ಎಂದು ನಂದ್‌ಗ್ರಾಮ್‌ ಠಾಣೆಯ ತುರ್ತು ಸಂಖ್ಯೆಗೆ ಮಂಗಳವಾರ (ಅ.18) ಬೆಳಿಗ್ಗೆ 3.30ರ ಸುಮಾರಿಗೆ ಕರೆ ಬಂತು. ನಂತರ ಮಹಿಳೆಯನ್ನು ಗುರು ತೇಜ್‌ ಬಹದ್ದೂರ್ ಆಸ್ಪತ್ರೆಗೆ ದಾಖಲಿಸಿದ್ದೇವೆ’ ಎಂದು ಗಾಜಿಯಬಾದ್‌ನ ಪೊಲೀಸ್‌ ವರಿಷ್ಠಾಧಿಕಾರಿ ನಿಪುನ್‌ ಅಗರ್ವಾಲ್‌ ಮಾಹಿತಿ ನೀಡಿದರು.

‘ಈ ವೇಳೆ ಸರ್ಕಾರಿ ಆಸ್ಪತ್ರೆಗೆ ಬೇಡ, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಎಂದು ಸಂತ್ರಸ್ತ ಮಹಿಳೆಯು ಹೇಳಿದ್ದರಿಂದ ಗುರು ತೇಜ್‌ ಆಸ್ಪತ್ರೆಗೆ ದಾಖಲಿಸಲಾಯಿತು’ ಎಂದರು.
ಐವರಲ್ಲಿ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಬುಧವಾರ ಹೇಳಿದರು.

‘ಮಹಿಳೆಯ ಕೈ-ಕಾಲುಗಳನ್ನು ಕಟ್ಟಿ, ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡನ್ನು ತುರುಕಿ, ಆಕೆಯನ್ನು ಗೋಣಿಚೀಲದಲ್ಲಿ ಸುತ್ತಿದ ಸ್ಥಿತಿಯಲ್ಲಿ ಮಹಿಳೆ ಪತ್ತೆಯಾಗಿದ್ದಾರೆ’ ಎಂದು ದೆಹಲಿ ಮಹಿಳಾ ಆಯೋಗ ಆರೋಪಿಸಿದೆ. ಘಟನೆಯನ್ನು ಆಯೋಗ ಖಂಡಿಸಿದೆ. ಈ ಸಂಬಂಧ ಗಾಜಿಯಬಾದ್‌ ಪೊಲೀಸರಿಗೆ ಆಯೋಗದ ಮುಖ್ಯಸ್ಥೆ ಸ್ವಾತಿ ಮಾಲೀವಾಲ್‌ ನೋಟಿಸ್‌ ನೀಡಿದ್ದಾರೆ.

‘ಅ.16 (ಭಾನುವಾರ) ತನ್ನ ಸಹೋದರನ ಹುಟ್ಟುಹಬ್ಬದ ಆಚರಣೆಗೆ ತೆರಳಲು ಗಾಜಿಯಬಾದ್‌ನಲ್ಲಿ ಆಟೊರಿಕ್ಷಾಗಾಗಿ ಮಹಿಳೆ ಕಾಯುತ್ತಿದ್ದರು. ಈ ವೇಳೆ ಎಸ್‌ಯವಿಯಲ್ಲಿ ಬಂದ ನಾಲ್ವರು ಆರೋಪಿಗಳು, ಆಕೆಯನ್ನು ಅಪಹರಿಸಿದ್ದಾರೆ. ಈ ನಾಲ್ವರು ಮತ್ತೊಬ್ಬ ವ್ಯಕ್ತಿಯೊಂದಿಗೆ ಸೇರಿ ಎರಡು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ’ ಎಂದು ಮಹಿಳಾ ಆಯೋಗವು ಗಂಭೀರ ಆರೋಪ ಮಾಡಿದೆ.

‘ಮಹಿಳೆಯನ್ನು ದೆಹಲಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಕೆಯ ಸ್ಥಿತಿ ಗಂಭೀರವಾಗಿದೆ’ ಎಂದು ದೆಹಲಿ ಮಹಿಳಾ ಆಯೋಗ ಹೇಳಿದೆ. ಆದರೆ, ‘ಮಂಗಳವಾರ ಬೆಳಿಗ್ಗೆ ಮಹಿಳೆಯನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಮಹಿಳೆ ಸ್ಥಿತಿ ಸ್ಥಿರವಾಗಿದೆ. ಆಕೆಗೆ ಯಾವುದೇ ರೀತಿ ಆಂತರಿಕ ಗಾಯಗಳಾಗಿರುವುದು ಕಂಡುಬಂದಿಲ್ಲ’ ಎಂದು ಗುರು ತೇಜ್‌ ಬಹದ್ದೂರ್‌ ಆಸ್ಪತ್ರೆಯಮಾಧ್ಯಮ ವಕ್ತಾರ ಡಾ. ರಜತ್‌ ಜಾಂಬಾ ತಿಳಿಸಿದ್ದಾರೆ.

ಆದರೆ, ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆಗಿರುವ ಕುರುಹುಗಳಿವೆ. ಜೊತೆಗೆ ಆಕೆಯ ದೇಹದೊಳಗೆ ವಸ್ತುವೊಂದು ಪತ್ತೆಯಾಗಿದೆ ಎಂದು ಆಸ್ಪತ್ರೆಯ ಮೂಲಗಳು ಹೇಳಿವೆ.

ಭ್ರಷ್ಟರ ಬೇಟೆ

Recent Posts

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

1 hour ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

1 hour ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

1 hour ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

1 hour ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

6 hours ago

300ಕ್ಕೆ ಲಭ್ಯವೆಂದು ಪೋಸ್ಟ್ ಹಾಕಿ ಗೃಹಿಣಿಗೆ ಕಿರುಕುಳ: 30 ಲಕ್ಷಕ್ಕೆ ಬೇಡಿಕೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…

6 hours ago