Latest

ಆಸ್ತಿ ವೈಷಮ್ಯ; ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ- ಗುಪ್ತಾಂಗಕ್ಕೆ ರಾಡ್‌!

ಐವರು ಸೇರಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.
‘ಘಟನೆ ನಡೆಯುವುದಕ್ಕೂ ಒಂದು ದಿನ ಮೊದಲು ನಾನು ನನ್ನ ಸಹೋದರನ ಹುಟ್ಟುಹಬ್ಬದ ಆಚರಣೆಗಾಗಿ ಗುರುಗ್ರಾಮಕ್ಕೆ ಹೋಗಿದ್ದೆ.  ಆಚರಣೆ ಮುಗಿದ ಮೇಲೆ, ಬಸ್‌ ನಿಲ್ದಾಣದ ವರೆಗೂ ನನ್ನ ಸಹೋದರ ಬಿಟ್ಟು ಹೋದ. ಅಲ್ಲಿಂದ ನನಗೆ ಗೊತ್ತಿರುವವರೇ ಎಲ್ಲಿಗೋ ಕರೆದುಕೊಂಡು ಹೋದರು’ ಎಂದು ಸಂತ್ರಸ್ತ ಮಹಿಳೆಯು ಹೇಳಿಕೆ ನೀಡಿದ್ದಾರೆ ಎಂದು ನಿಪುನ್‌ ಅಗರ್ವಾಲ್‌ ತಿಳಿಸಿದರು.

‘ಮಹಿಳೆಯೊಬ್ಬರು ಆಶ್ರಮ್‌ ರಸ್ತೆಯಲ್ಲಿ ಅನಾಥವಾಗಿ ಬಿದ್ದಿದ್ದಾರೆ ಎಂದು ನಂದ್‌ಗ್ರಾಮ್‌ ಠಾಣೆಯ ತುರ್ತು ಸಂಖ್ಯೆಗೆ ಮಂಗಳವಾರ (ಅ.18) ಬೆಳಿಗ್ಗೆ 3.30ರ ಸುಮಾರಿಗೆ ಕರೆ ಬಂತು. ನಂತರ ಮಹಿಳೆಯನ್ನು ಗುರು ತೇಜ್‌ ಬಹದ್ದೂರ್ ಆಸ್ಪತ್ರೆಗೆ ದಾಖಲಿಸಿದ್ದೇವೆ’ ಎಂದು ಗಾಜಿಯಬಾದ್‌ನ ಪೊಲೀಸ್‌ ವರಿಷ್ಠಾಧಿಕಾರಿ ನಿಪುನ್‌ ಅಗರ್ವಾಲ್‌ ಮಾಹಿತಿ ನೀಡಿದರು.

‘ಈ ವೇಳೆ ಸರ್ಕಾರಿ ಆಸ್ಪತ್ರೆಗೆ ಬೇಡ, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಎಂದು ಸಂತ್ರಸ್ತ ಮಹಿಳೆಯು ಹೇಳಿದ್ದರಿಂದ ಗುರು ತೇಜ್‌ ಆಸ್ಪತ್ರೆಗೆ ದಾಖಲಿಸಲಾಯಿತು’ ಎಂದರು.
ಐವರಲ್ಲಿ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಬುಧವಾರ ಹೇಳಿದರು.

‘ಮಹಿಳೆಯ ಕೈ-ಕಾಲುಗಳನ್ನು ಕಟ್ಟಿ, ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡನ್ನು ತುರುಕಿ, ಆಕೆಯನ್ನು ಗೋಣಿಚೀಲದಲ್ಲಿ ಸುತ್ತಿದ ಸ್ಥಿತಿಯಲ್ಲಿ ಮಹಿಳೆ ಪತ್ತೆಯಾಗಿದ್ದಾರೆ’ ಎಂದು ದೆಹಲಿ ಮಹಿಳಾ ಆಯೋಗ ಆರೋಪಿಸಿದೆ. ಘಟನೆಯನ್ನು ಆಯೋಗ ಖಂಡಿಸಿದೆ. ಈ ಸಂಬಂಧ ಗಾಜಿಯಬಾದ್‌ ಪೊಲೀಸರಿಗೆ ಆಯೋಗದ ಮುಖ್ಯಸ್ಥೆ ಸ್ವಾತಿ ಮಾಲೀವಾಲ್‌ ನೋಟಿಸ್‌ ನೀಡಿದ್ದಾರೆ.

‘ಅ.16 (ಭಾನುವಾರ) ತನ್ನ ಸಹೋದರನ ಹುಟ್ಟುಹಬ್ಬದ ಆಚರಣೆಗೆ ತೆರಳಲು ಗಾಜಿಯಬಾದ್‌ನಲ್ಲಿ ಆಟೊರಿಕ್ಷಾಗಾಗಿ ಮಹಿಳೆ ಕಾಯುತ್ತಿದ್ದರು. ಈ ವೇಳೆ ಎಸ್‌ಯವಿಯಲ್ಲಿ ಬಂದ ನಾಲ್ವರು ಆರೋಪಿಗಳು, ಆಕೆಯನ್ನು ಅಪಹರಿಸಿದ್ದಾರೆ. ಈ ನಾಲ್ವರು ಮತ್ತೊಬ್ಬ ವ್ಯಕ್ತಿಯೊಂದಿಗೆ ಸೇರಿ ಎರಡು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ’ ಎಂದು ಮಹಿಳಾ ಆಯೋಗವು ಗಂಭೀರ ಆರೋಪ ಮಾಡಿದೆ.

‘ಮಹಿಳೆಯನ್ನು ದೆಹಲಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಕೆಯ ಸ್ಥಿತಿ ಗಂಭೀರವಾಗಿದೆ’ ಎಂದು ದೆಹಲಿ ಮಹಿಳಾ ಆಯೋಗ ಹೇಳಿದೆ. ಆದರೆ, ‘ಮಂಗಳವಾರ ಬೆಳಿಗ್ಗೆ ಮಹಿಳೆಯನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಮಹಿಳೆ ಸ್ಥಿತಿ ಸ್ಥಿರವಾಗಿದೆ. ಆಕೆಗೆ ಯಾವುದೇ ರೀತಿ ಆಂತರಿಕ ಗಾಯಗಳಾಗಿರುವುದು ಕಂಡುಬಂದಿಲ್ಲ’ ಎಂದು ಗುರು ತೇಜ್‌ ಬಹದ್ದೂರ್‌ ಆಸ್ಪತ್ರೆಯಮಾಧ್ಯಮ ವಕ್ತಾರ ಡಾ. ರಜತ್‌ ಜಾಂಬಾ ತಿಳಿಸಿದ್ದಾರೆ.

ಆದರೆ, ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆಗಿರುವ ಕುರುಹುಗಳಿವೆ. ಜೊತೆಗೆ ಆಕೆಯ ದೇಹದೊಳಗೆ ವಸ್ತುವೊಂದು ಪತ್ತೆಯಾಗಿದೆ ಎಂದು ಆಸ್ಪತ್ರೆಯ ಮೂಲಗಳು ಹೇಳಿವೆ.

ಭ್ರಷ್ಟರ ಬೇಟೆ

Recent Posts

ಡಾ. ರಾಜ್‌ಕುಮಾರ್ ಸಮಾಧಿ ಭೂಮಿ ವಿವಾದ: ನಟ ಚೇತನ್ ಪೋಸ್ಟ್‌ಗೆ ಆಕ್ರೋಶ, ಪರ-ವಿರೋಧ ಚರ್ಚೆ ತೀವ್ರ

ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್‌ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…

10 hours ago

ಪ್ರೇಮ ವಿಚಾರಕ್ಕೆ ರಕ್ತರಂಜಿತ ತಿರುವು: ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಭೀಕರ ದಾಳಿ

ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…

10 hours ago

ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಪ್ರೇಮ ತ್ರಿಕೋನ ಡ್ರಾಮಾ: ನಡುರಸ್ತೆಯಲ್ಲಿ ಯುವಕರ ಗಲಾಟೆ ವೈರಲ್

ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…

10 hours ago

ಮಾದಕ ವ್ಯಸನದ ಬೆನ್ನೇರಿ ಮಗನಿಂದ ತಾಯಿ ಹತ್ಯೆ: ಕಣ್ಣೂರಿನಲ್ಲಿ ಹೃದಯ ಕಲಕುವ ಘಟನೆ

ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೇಳಕಂ ಸಮೀಪದ ಕಾಣಿಚಾರ್‌ನಲ್ಲಿ ಮನಕಲಕುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮಾದಕ ವ್ಯಸನಕ್ಕೆ ಒಳಗಾಗಿದ್ದ…

10 hours ago

ಟಿಪ್ಪರ್ ಡಿಕ್ಕಿ, ನಂತರ ಗುಂಡಿನ ದಾಳಿ: ವಿಜಯಪುರದಲ್ಲಿ ಸಿನಿಮಾ ಶೈಲಿಯ ಹತ್ಯೆ ಪ್ರಕರಣ

ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…

19 hours ago

ವಿದೇಶಿ ಮಹಿಳೆ ಮೇಲೆ ದೌರ್ಜನ್ಯ ಆರೋಪ: ಕೊಡಗಿನಲ್ಲಿ ಹೋಂಸ್ಟೇ ಪರವಾನಗಿ ರದ್ದು

ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…

19 hours ago