Latest

ಬಾಲಕಿಯರ ಮೇಲೆ ಗ್ಯಾಂಗ್​​ ರೇಪ್: ಗೋವಾಕ್ಕೆ ಬರಬೇಕು ಇಲ್ಲವಾದರೆ ವಿಡಿಯೋ ಹೊರಬಿಡುತ್ತೇವೆ ಎಂದಿದ್ದ ಆರೋಪಿಗಳು.!

ಬೆಳಗಾವಿ, ಜನವರಿ 15: ರಾಯಬಾಗ ತಾಲ್ಲೂಕಿನ ಸವಸುದ್ದಿ ಗ್ರಾಮದ ಸಮೀಪದಲ್ಲಿ ಗ್ಯಾಂಗ್ ರೇಪ್‌ ಪ್ರಕರಣವು ನಡೆಯಿದ್ದು, ಮೂವರು ಆರೋಪಿಗಳು ಬಂಧಿತನಾಗಿದ್ದಾರೆ. ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ ಆರೋಪಿಗಳು ಅಭಿಷೇಕ್, ಆದಿಲ್ ಜಮಾದಾರ್ ಮತ್ತು ಚಾಲಕ ಕೌತುಕ್ ಬಡಿಗೇರ ಎಂದು ಗುರುತಿಸಲಾಗಿದೆ.
ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದ್ದು, "ಆರೋಪಿ ಅಭಿಷೇಕ್ ಇನ್‌ಸ್ಟಾಗ್ರಾಂನಲ್ಲಿ ಓರ್ವ ಬಾಲಕಿಯನ್ನು ಪರಿಚಯಿಸಿಕೊಂಡಿದ್ದನು. ಅವನು 'ನಾನು ಸವದತ್ತಿಗೆ ಹೋಗುತ್ತಿದ್ದೇನೆ, ನೀನು ಕೂಡ ಬಾ' ಎಂದು ಅವಳನ್ನು ಪ್ರಚೋದಿಸಿದ್ದನು. ನಂಬಿದ ಬಾಲಕಿ ತನ್ನ ಸ್ನೇಹಿತೆಯನ್ನು ಕರೆದುಕೊಂಡು ಹಾರೂಗೇರಿ ಬಸ್ ನಿಲ್ದಾಣಕ್ಕೆ ಹೋಗಿದ್ದಾಳೆ" ಎಂದು ತಿಳಿಸಿದ್ದಾರೆ.
"ಅಲ್ಲಿ, ಆರೋಪಿ ಅಭಿಷೇಕ್, ಕಾರಿನಲ್ಲಿ ಇತರ ಇಬ್ಬರು ಆರೋಪಿಗಳೊಂದಿಗೆ ಸಂತ್ರಸ್ತರನ್ನು ಕರೆದೊಯ್ಯುತ್ತಾನೆ. ಅವರನ್ನು ಎರ್ಟಿಗಾ ಕಾರಿನಲ್ಲಿ ಸವಸುದ್ದಿ ಗ್ರಾಮದ ಗುಡ್ಡಗಾಡು ಪ್ರದೇಶಕ್ಕೆ ತೆಗೆದುಕೊಂಡು ಹೋಗಿ, ಮಧ್ಯಾಹ್ನ 3 ಗಂಟೆ ಸುಮಾರಿಗೆ ಅವರು ಇಬ್ಬರ ಮೇಲೆ ಅತ್ಯಾಚಾರವೆಸಗಿದ್ದಾರೆ" ಎಂದು ಡಾ. ಗುಳೇದ್ ವಿವರಿಸಿದರು.
"ಈ ವೇಳೆ, ಕಾರಿನಲ್ಲಿ ಕುಳಿತಿದ್ದ ಆರೋಪಿ ಆದಿಲ್ ಜಮಾದಾರ್ ಮತ್ತೊಂದು ಬಾಲಕಿಯನ್ನು ಗ್ಯಾಂಗ್ ರೇಪ್‌ ಮಾಡಿ, ನಂತರ ಅವರು ಸಂತ್ರಸ್ತರಿಗೆ ಬ್ಲ್ಯಾಕ್‌ಮೇಲ್ ಮಾಡಿದರು. 'ಗೋವಾಕ್ಕೆ ಬರಬೇಕು, ಇಲ್ಲವಾದರೆ ವಿಡಿಯೋವನ್ನು ವೈರಲ್ ಮಾಡುತ್ತೇವೆ' ಎಂದು ಬೆದರಿಕೆ ಹಾಕಿದ್ರು" ಎಂದು ಅವರು ತಿಳಿಸಿದರು.
"ಬಾಲಕಿಯರು ಈ ಕುರಿತು ಮನೆಯಲ್ಲಿ ಮಾಹಿತಿ ನೀಡಿದ್ದು, ಜನವರಿ 13 ರಂದು ಹಾರೂಗೇರಿ ಠಾಣೆಯಲ್ಲಿ ದೂರು ದಾಖಲಿಸಿದರು. 24 ಗಂಟೆಗಳೊಳಗೆ ಇಬ್ಬರು ಆರೋಪಿಗಳು ಬಂಧಿತರಾಗಿದ್ದಾರೆ. ನಂತರ ಮತ್ತೊಬ್ಬ ಆರೋಪಿ ಬಂಧಿಸಲ್ಪಟ್ಟನು" ಎಂದು ಅವರು ಹೇಳಿದರು.
"ಆರೋಪಿಗಳ ಹಿನ್ನಲೆಯನ್ನು ಪರಿಶೀಲಿಸಲಾಗುತ್ತಿದೆ. ಇನ್‌ಸ್ಟಾಗ್ರಾಂನಲ್ಲಿ ವೀಡಿಯೋಗಳನ್ನು ಅಪ್ಲೋಡ್ ಮಾಡುತ್ತಿದ್ದಳು. ಆರೋಪಿಗಳ ಮೊಬೈಲ್‌ಗಳನ್ನು ಜಪ್ತಿ ಮಾಡಿದಾಗ, ಗ್ಯಾಂಗ್ ರೇಪ್‌ ಸಂಬಂಧಿ ವೀಡಿಯೋಗಳು ಪತ್ತೆಯಾಗಿದೆ" ಎಂದು ಅವರು ಕೊನೆಗೆ ತಿಳಿಸಿದ್ದಾರೆ.
nazeer ahamad

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

10 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

10 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

10 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

10 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

11 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago