ಬೆಳಗಾವಿ, ಜನವರಿ 15: ರಾಯಬಾಗ ತಾಲ್ಲೂಕಿನ ಸವಸುದ್ದಿ ಗ್ರಾಮದ ಸಮೀಪದಲ್ಲಿ ಗ್ಯಾಂಗ್ ರೇಪ್ ಪ್ರಕರಣವು ನಡೆಯಿದ್ದು, ಮೂವರು ಆರೋಪಿಗಳು ಬಂಧಿತನಾಗಿದ್ದಾರೆ. ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ ಆರೋಪಿಗಳು ಅಭಿಷೇಕ್, ಆದಿಲ್ ಜಮಾದಾರ್ ಮತ್ತು ಚಾಲಕ ಕೌತುಕ್ ಬಡಿಗೇರ ಎಂದು ಗುರುತಿಸಲಾಗಿದೆ.
ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದ್ದು, "ಆರೋಪಿ ಅಭಿಷೇಕ್ ಇನ್ಸ್ಟಾಗ್ರಾಂನಲ್ಲಿ ಓರ್ವ ಬಾಲಕಿಯನ್ನು ಪರಿಚಯಿಸಿಕೊಂಡಿದ್ದನು. ಅವನು 'ನಾನು ಸವದತ್ತಿಗೆ ಹೋಗುತ್ತಿದ್ದೇನೆ, ನೀನು ಕೂಡ ಬಾ' ಎಂದು ಅವಳನ್ನು ಪ್ರಚೋದಿಸಿದ್ದನು. ನಂಬಿದ ಬಾಲಕಿ ತನ್ನ ಸ್ನೇಹಿತೆಯನ್ನು ಕರೆದುಕೊಂಡು ಹಾರೂಗೇರಿ ಬಸ್ ನಿಲ್ದಾಣಕ್ಕೆ ಹೋಗಿದ್ದಾಳೆ" ಎಂದು ತಿಳಿಸಿದ್ದಾರೆ.
"ಅಲ್ಲಿ, ಆರೋಪಿ ಅಭಿಷೇಕ್, ಕಾರಿನಲ್ಲಿ ಇತರ ಇಬ್ಬರು ಆರೋಪಿಗಳೊಂದಿಗೆ ಸಂತ್ರಸ್ತರನ್ನು ಕರೆದೊಯ್ಯುತ್ತಾನೆ. ಅವರನ್ನು ಎರ್ಟಿಗಾ ಕಾರಿನಲ್ಲಿ ಸವಸುದ್ದಿ ಗ್ರಾಮದ ಗುಡ್ಡಗಾಡು ಪ್ರದೇಶಕ್ಕೆ ತೆಗೆದುಕೊಂಡು ಹೋಗಿ, ಮಧ್ಯಾಹ್ನ 3 ಗಂಟೆ ಸುಮಾರಿಗೆ ಅವರು ಇಬ್ಬರ ಮೇಲೆ ಅತ್ಯಾಚಾರವೆಸಗಿದ್ದಾರೆ" ಎಂದು ಡಾ. ಗುಳೇದ್ ವಿವರಿಸಿದರು.
"ಈ ವೇಳೆ, ಕಾರಿನಲ್ಲಿ ಕುಳಿತಿದ್ದ ಆರೋಪಿ ಆದಿಲ್ ಜಮಾದಾರ್ ಮತ್ತೊಂದು ಬಾಲಕಿಯನ್ನು ಗ್ಯಾಂಗ್ ರೇಪ್ ಮಾಡಿ, ನಂತರ ಅವರು ಸಂತ್ರಸ್ತರಿಗೆ ಬ್ಲ್ಯಾಕ್ಮೇಲ್ ಮಾಡಿದರು. 'ಗೋವಾಕ್ಕೆ ಬರಬೇಕು, ಇಲ್ಲವಾದರೆ ವಿಡಿಯೋವನ್ನು ವೈರಲ್ ಮಾಡುತ್ತೇವೆ' ಎಂದು ಬೆದರಿಕೆ ಹಾಕಿದ್ರು" ಎಂದು ಅವರು ತಿಳಿಸಿದರು.
"ಬಾಲಕಿಯರು ಈ ಕುರಿತು ಮನೆಯಲ್ಲಿ ಮಾಹಿತಿ ನೀಡಿದ್ದು, ಜನವರಿ 13 ರಂದು ಹಾರೂಗೇರಿ ಠಾಣೆಯಲ್ಲಿ ದೂರು ದಾಖಲಿಸಿದರು. 24 ಗಂಟೆಗಳೊಳಗೆ ಇಬ್ಬರು ಆರೋಪಿಗಳು ಬಂಧಿತರಾಗಿದ್ದಾರೆ. ನಂತರ ಮತ್ತೊಬ್ಬ ಆರೋಪಿ ಬಂಧಿಸಲ್ಪಟ್ಟನು" ಎಂದು ಅವರು ಹೇಳಿದರು.
"ಆರೋಪಿಗಳ ಹಿನ್ನಲೆಯನ್ನು ಪರಿಶೀಲಿಸಲಾಗುತ್ತಿದೆ. ಇನ್ಸ್ಟಾಗ್ರಾಂನಲ್ಲಿ ವೀಡಿಯೋಗಳನ್ನು ಅಪ್ಲೋಡ್ ಮಾಡುತ್ತಿದ್ದಳು. ಆರೋಪಿಗಳ ಮೊಬೈಲ್ಗಳನ್ನು ಜಪ್ತಿ ಮಾಡಿದಾಗ, ಗ್ಯಾಂಗ್ ರೇಪ್ ಸಂಬಂಧಿ ವೀಡಿಯೋಗಳು ಪತ್ತೆಯಾಗಿದೆ" ಎಂದು ಅವರು ಕೊನೆಗೆ ತಿಳಿಸಿದ್ದಾರೆ. ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…