ಬೆಳಗಾವಿ, ಜನವರಿ 15: ರಾಯಬಾಗ ತಾಲ್ಲೂಕಿನ ಸವಸುದ್ದಿ ಗ್ರಾಮದ ಸಮೀಪದಲ್ಲಿ ಗ್ಯಾಂಗ್ ರೇಪ್ ಪ್ರಕರಣವು ನಡೆಯಿದ್ದು, ಮೂವರು ಆರೋಪಿಗಳು ಬಂಧಿತನಾಗಿದ್ದಾರೆ. ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ ಆರೋಪಿಗಳು ಅಭಿಷೇಕ್, ಆದಿಲ್ ಜಮಾದಾರ್ ಮತ್ತು ಚಾಲಕ ಕೌತುಕ್ ಬಡಿಗೇರ ಎಂದು ಗುರುತಿಸಲಾಗಿದೆ.
ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದ್ದು, "ಆರೋಪಿ ಅಭಿಷೇಕ್ ಇನ್ಸ್ಟಾಗ್ರಾಂನಲ್ಲಿ ಓರ್ವ ಬಾಲಕಿಯನ್ನು ಪರಿಚಯಿಸಿಕೊಂಡಿದ್ದನು. ಅವನು 'ನಾನು ಸವದತ್ತಿಗೆ ಹೋಗುತ್ತಿದ್ದೇನೆ, ನೀನು ಕೂಡ ಬಾ' ಎಂದು ಅವಳನ್ನು ಪ್ರಚೋದಿಸಿದ್ದನು. ನಂಬಿದ ಬಾಲಕಿ ತನ್ನ ಸ್ನೇಹಿತೆಯನ್ನು ಕರೆದುಕೊಂಡು ಹಾರೂಗೇರಿ ಬಸ್ ನಿಲ್ದಾಣಕ್ಕೆ ಹೋಗಿದ್ದಾಳೆ" ಎಂದು ತಿಳಿಸಿದ್ದಾರೆ.
"ಅಲ್ಲಿ, ಆರೋಪಿ ಅಭಿಷೇಕ್, ಕಾರಿನಲ್ಲಿ ಇತರ ಇಬ್ಬರು ಆರೋಪಿಗಳೊಂದಿಗೆ ಸಂತ್ರಸ್ತರನ್ನು ಕರೆದೊಯ್ಯುತ್ತಾನೆ. ಅವರನ್ನು ಎರ್ಟಿಗಾ ಕಾರಿನಲ್ಲಿ ಸವಸುದ್ದಿ ಗ್ರಾಮದ ಗುಡ್ಡಗಾಡು ಪ್ರದೇಶಕ್ಕೆ ತೆಗೆದುಕೊಂಡು ಹೋಗಿ, ಮಧ್ಯಾಹ್ನ 3 ಗಂಟೆ ಸುಮಾರಿಗೆ ಅವರು ಇಬ್ಬರ ಮೇಲೆ ಅತ್ಯಾಚಾರವೆಸಗಿದ್ದಾರೆ" ಎಂದು ಡಾ. ಗುಳೇದ್ ವಿವರಿಸಿದರು.
"ಈ ವೇಳೆ, ಕಾರಿನಲ್ಲಿ ಕುಳಿತಿದ್ದ ಆರೋಪಿ ಆದಿಲ್ ಜಮಾದಾರ್ ಮತ್ತೊಂದು ಬಾಲಕಿಯನ್ನು ಗ್ಯಾಂಗ್ ರೇಪ್ ಮಾಡಿ, ನಂತರ ಅವರು ಸಂತ್ರಸ್ತರಿಗೆ ಬ್ಲ್ಯಾಕ್ಮೇಲ್ ಮಾಡಿದರು. 'ಗೋವಾಕ್ಕೆ ಬರಬೇಕು, ಇಲ್ಲವಾದರೆ ವಿಡಿಯೋವನ್ನು ವೈರಲ್ ಮಾಡುತ್ತೇವೆ' ಎಂದು ಬೆದರಿಕೆ ಹಾಕಿದ್ರು" ಎಂದು ಅವರು ತಿಳಿಸಿದರು.
"ಬಾಲಕಿಯರು ಈ ಕುರಿತು ಮನೆಯಲ್ಲಿ ಮಾಹಿತಿ ನೀಡಿದ್ದು, ಜನವರಿ 13 ರಂದು ಹಾರೂಗೇರಿ ಠಾಣೆಯಲ್ಲಿ ದೂರು ದಾಖಲಿಸಿದರು. 24 ಗಂಟೆಗಳೊಳಗೆ ಇಬ್ಬರು ಆರೋಪಿಗಳು ಬಂಧಿತರಾಗಿದ್ದಾರೆ. ನಂತರ ಮತ್ತೊಬ್ಬ ಆರೋಪಿ ಬಂಧಿಸಲ್ಪಟ್ಟನು" ಎಂದು ಅವರು ಹೇಳಿದರು.
"ಆರೋಪಿಗಳ ಹಿನ್ನಲೆಯನ್ನು ಪರಿಶೀಲಿಸಲಾಗುತ್ತಿದೆ. ಇನ್ಸ್ಟಾಗ್ರಾಂನಲ್ಲಿ ವೀಡಿಯೋಗಳನ್ನು ಅಪ್ಲೋಡ್ ಮಾಡುತ್ತಿದ್ದಳು. ಆರೋಪಿಗಳ ಮೊಬೈಲ್ಗಳನ್ನು ಜಪ್ತಿ ಮಾಡಿದಾಗ, ಗ್ಯಾಂಗ್ ರೇಪ್ ಸಂಬಂಧಿ ವೀಡಿಯೋಗಳು ಪತ್ತೆಯಾಗಿದೆ" ಎಂದು ಅವರು ಕೊನೆಗೆ ತಿಳಿಸಿದ್ದಾರೆ. ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…