Latest

ಗಂಗೊಳ್ಳಿ ದೋಣಿ ದುರಂತ: ಇನ್ನೊಬ್ಬ ಮೀನುಗಾರನ ಶವ ಪತ್ತೆ, ಶೋಧ ಕಾರ್ಯ ಮುಂದುವರೆಯುತ್ತಿದೆ

ಉಡುಪಿ: ಗಂಗೊಳ್ಳಿ ಸಮೀಪದ ಸಮುದ್ರದಲ್ಲಿ ಜುಲೈ 15 ರಂದು ಸಂಭವಿಸಿದ್ದ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮತ್ತೊಬ್ಬ ಮೀನುಗಾರನ ಶವ ಪತ್ತೆಯಾಗಿರುವ ದುಃಖದ ಘಟನೆ ಬುಧವಾರ ನಡೆದಿದೆ. ಜಗನ್ನಾಥ ಖಾರ್ವಿ ಎಂಬವರು ಕೋಡಿ ಸಮೀಪದ ಕಡಲ್ಕಿನಾರಿನಲ್ಲಿ ಮೃತರಾಗಿರುವ ಸ್ಥಿತಿಯಲ್ಲಿ ಸಿಕ್ಕಿದ್ದಾರೆ.

ಜುಲೈ 15ರ ಬೆಳಿಗ್ಗೆ ಗಂಗೊಳ್ಳಿ ಬಂದರಿನಿಂದ ನಾಲ್ವರು ಮೀನುಗಾರರು ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಆದರೆ ತೀವ್ರ ಅಲೆಗಳ ರಭಸಕ್ಕೆ ದೋಣಿ ಮಗುಚಿದ್ದು, ಈ ಘಟನೆ ಮಹದಾಯವಾಗಿ ಪರಿಣಮಿಸಿತು. ನಾಲ್ವರಲ್ಲಿ ಓರ್ವನು ಈಜು ಮೂಲಕ ಜೀವ ಉಳಿಸಿಕೊಂಡರೆ, ಉಳಿದ ಮೂವರು ನಾಪತ್ತೆಯಾಗಿದ್ದರು.

ಶೋಧ ಕಾರ್ಯಾಚರಣೆ ಸಂದರ್ಭದಲ್ಲಿ ಬುಧವಾರ ಬೆಳಿಗ್ಗೆ ಲೋಹಿತ್ ಖಾರ್ವಿ (38) ಎಂಬವರ ಶವ ಕುಂದಾಪುರದ ಕೋಡಿ ಲೈಟ್ ಹೌಸ್ ಬಳಿಯ ಕಡಲ ತೀರದಲ್ಲಿ ಪತ್ತೆಯಾಗಿತ್ತು. ಅದೇ ದಿನ ಸಂಜೆ ಜಗನ್ನಾಥ ಖಾರ್ವಿಯ ಶವವೂ ಕೋಡಿಯ ಸಮೀಪದಲ್ಲಿ ಕಂಡುಬಂದಿದೆ.

ಇನ್ನುಳಿದ ಸುರೇಶ್ ಖಾರ್ವಿ ಎಂಬವರು ಇನ್ನೂ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿಯುತ್ತಿದೆ. ಕರಾವಳಿ ರಕ್ಷಣಾ ಪಡೆಯ ಜತೆಗೂಡಿ ಡ್ರೋನ್ ತಂತ್ರಜ್ಞಾನ ಸಹ ಉಪಯೋಗಿಸಿ ಕಡಲ ತೀರ ಮತ್ತು ಸಮುದ್ರದ ಒಳಗಿನ ಭಾಗಗಳಲ್ಲಿ ಹುಡುಕಾಟ ನಡೆಸಲಾಗುತ್ತಿದೆ.

ಸ್ಥಳೀಯ ಮೀನುಗಾರರು, ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಪರಶ್ರಮದಿಂದ ಶೋಧ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಘಟನೆ ಮತ್ಸ್ಯ ಕಾರ್ಮಿಕ ಸಮುದಾಯದಲ್ಲಿ ಭಾರೀ ಆಘಾತ ಮೂಡಿಸಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

11 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

11 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

11 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

11 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago