Latest

ತೋಟದ ಮನೆಯಲ್ಲಿ ಗಾಂಜಾ ಸಂಗ್ರಹ: ಅಬಕಾರಿ ಇಲಾಖೆಯ ದಾಳಿ, 4 ಕೆಜಿ ಗಾಂಜಾ ಜಪ್ತಿ

ಚಾಮರಾಜನಗರ: ನಗರ ಪ್ರದೇಶಗಳಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ತೋಟದ ಮನೆಯಲ್ಲಿ ಒಣ ಗಾಂಜಾ ಸಂಗ್ರಹಿಸಿದ್ದ ವ್ಯಕ್ತಿಯನ್ನು ಅಬಕಾರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪಟಸ್: ಹನೂರು ತಾಲ್ಲೂಕಿನ ಪುಷ್ಪಾಪುರ ಗ್ರಾಮದ ನಿವಾಸಿ ದೇವೇಂದ್ರ (48) ಎಂಬಾತನೇ ಬಂಧಿತ ಆರೋಪಿ.

ಘಟನೆ ವಿವರ:
ಮರಿಯಮಂಗಲ-ಪುಷ್ಪಾಪುರ ಗ್ರಾಮ ಮಧ್ಯದಲ್ಲಿರುವ ತೋಟದ ಮನೆಯಲ್ಲಿ ಗಾಂಜಾ ಸಂಗ್ರಹಣೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಅಬಕಾರಿ ಇಲಾಖೆಗೆ ಲಭ್ಯವಾಯಿತು. ಈ ಮಾಹಿತಿಯ ಮೇರೆಗೆ, ಮೈಸೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಬಸವರಾಜ್ ಹಡಪದ ಹಾಗೂ ಉಪ ಆಯುಕ್ತ ಚಂದ್ರ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆಸಲು ತೀರ್ಮಾನಿಸಲಾಯಿತು.

ಕೊಳ್ಳೇಗಾಲ ಅಬಕಾರಿ ನಿರೀಕ್ಷಕ ದಯಾನಂದ್ ಅವರ ನೇತೃತ್ವದಲ್ಲಿ ಉಪ ಅಧೀಕ್ಷಕ ವಿಜಯಕುಮಾರ್ ಅವರ ನಿರ್ದೇಶನದಂತೆ ಸಬ್ ಇನ್ಸ್‌ಪೆಕ್ಟರ್ ಸಿದ್ದಯ್ಯ ಹಾಗೂ ಅವರ ತಂಡ ಕಾರ್ಯಾಚರಣೆ ನಡೆಸಿದರು. ಈ ದಾಳಿಯಲ್ಲಿ ನಾಲ್ಕು ಕೆಜಿ ಒಣ ಗಾಂಜಾ ವಶಪಡಿಸಿಕೊಂಡು ಆರೋಪಿ ದೇವೇಂದ್ರನನ್ನು ಬಂಧಿಸಲಾಯಿತು.

ಪೋಲೀಸ್ ತಂಡದ ಪಾತ್ರ:
ಕಾರ್ಯಾಚರಣೆಯಲ್ಲಿ ಮುಖ್ಯಪೇದೆಗಳಾದ ರಮೇಶ್ ಮತ್ತು ಪ್ರದೀಪ್ ಸೇರಿ ಹಲವು ಸಿಬ್ಬಂದಿಗಳು ಭಾಗವಹಿಸಿದ್ದರು.

ಬಂಧಿತನ ವಿರುದ್ಧ ಪ್ರಕರಣ ದಾಖಲಿಸಿರುವ ಅಬಕಾರಿ ಇಲಾಖೆ, ಹೆಚ್ಚಿನ ತನಿಖೆ ಮುಂದುವರಿಸಿದೆ.

nazeer ahamad

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

14 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

14 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

14 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

14 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

14 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

14 hours ago