ಮುಂಡಗೋಡ: ತಾಲೂಕಿನ ದಾಸನಕೊಪ್ಪ ರಸ್ತೆಯ ಧರ್ಮಾ ಜಲಾಶಯದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಇಂದು ಬೆಳಿಗ್ಗೆ ಬಂಧಿಸಿ 2 ಕೆಜಿ ಗಾಂಜಾ ವಶಪಡಿಸಿಕೊಂಡ ಘಟನೆ ನಡೆದಿದೆ.
ದಾಸನಕೊಪ್ಪ ರಸ್ತೆಯ ಧರ್ಮಾ ಜಲಾಶಯದ ಬಳಿ ಕೇಸರಿ ಬಣ್ಣದ ಕೈ ಚೀಲದಲ್ಲಿ 2 ಕೆ.ಜಿ 28 ಗ್ರಾಂ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಮುಂಡಗೋಡ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ 80 ಸಾವಿರ ರೂಪಾಯಿ ಮೌಲ್ಯದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ.
ಹಾನಗಲ್ ತಾಲೂಕಿನ ತಿಳುವಳ್ಳಿ ಗ್ರಾಮದ ಸಲ್ಮಾನ್ ಖಾನ್ ಗೌಸ್ ಖಾನ್ ಆಲೂರು ಎಂಬಾತನೆ ಬಂದಿತ ಆರೋಪಿಯಾಗಿದ್ದಾನೆ.
ಸಿಪಿಐ ಬಿ ಎಸ್ ಲೋಕಾಪುರ ಅವರ ನಿರ್ದೇಶನದಂತೆ ಪಿಎಸ್ಐ ಯಲ್ಲಾಲಿಂಗ ಕುನ್ನೂರು ಮತ್ತು ಹನುಮಂತ ಕುಡುಗುಂಟಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ಗಣಪತಿ ಹೊನ್ನಳ್ಳಿ, ಕೋಟೇಶ್ ನಾಗರೊಳ್ಳಿ,ಅಣ್ಣಪ್ಪ ಬಡಿಗೇರ್, ಬಸವರಾಜ್ ಲಮಾಣಿ,ಸಂಜು ರಾಥೋಡ್,ಗುರುರಾಜ್ ಬಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ವರದಿ:ಮಂಜುನಾಥ ಹರಿಜನ
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…
ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…
ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…
ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…
ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…