ಮುಂಡಗೋಡ: ತಾಲೂಕಿನ ದಾಸನಕೊಪ್ಪ ರಸ್ತೆಯ ಧರ್ಮಾ ಜಲಾಶಯದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಇಂದು ಬೆಳಿಗ್ಗೆ ಬಂಧಿಸಿ 2 ಕೆಜಿ ಗಾಂಜಾ ವಶಪಡಿಸಿಕೊಂಡ ಘಟನೆ ನಡೆದಿದೆ.
ದಾಸನಕೊಪ್ಪ ರಸ್ತೆಯ ಧರ್ಮಾ ಜಲಾಶಯದ ಬಳಿ ಕೇಸರಿ ಬಣ್ಣದ ಕೈ ಚೀಲದಲ್ಲಿ 2 ಕೆ.ಜಿ 28 ಗ್ರಾಂ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಮುಂಡಗೋಡ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ 80 ಸಾವಿರ ರೂಪಾಯಿ ಮೌಲ್ಯದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ.
ಹಾನಗಲ್ ತಾಲೂಕಿನ ತಿಳುವಳ್ಳಿ ಗ್ರಾಮದ ಸಲ್ಮಾನ್ ಖಾನ್ ಗೌಸ್ ಖಾನ್ ಆಲೂರು ಎಂಬಾತನೆ ಬಂದಿತ ಆರೋಪಿಯಾಗಿದ್ದಾನೆ.
ಸಿಪಿಐ ಬಿ ಎಸ್ ಲೋಕಾಪುರ ಅವರ ನಿರ್ದೇಶನದಂತೆ ಪಿಎಸ್ಐ ಯಲ್ಲಾಲಿಂಗ ಕುನ್ನೂರು ಮತ್ತು ಹನುಮಂತ ಕುಡುಗುಂಟಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ಗಣಪತಿ ಹೊನ್ನಳ್ಳಿ, ಕೋಟೇಶ್ ನಾಗರೊಳ್ಳಿ,ಅಣ್ಣಪ್ಪ ಬಡಿಗೇರ್, ಬಸವರಾಜ್ ಲಮಾಣಿ,ಸಂಜು ರಾಥೋಡ್,ಗುರುರಾಜ್ ಬಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ವರದಿ:ಮಂಜುನಾಥ ಹರಿಜನ
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…