ಮುಂಡಗೋಡ: ತಾಲೂಕಿನ ದಾಸನಕೊಪ್ಪ ರಸ್ತೆಯ ಧರ್ಮಾ ಜಲಾಶಯದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಇಂದು ಬೆಳಿಗ್ಗೆ ಬಂಧಿಸಿ 2 ಕೆಜಿ ಗಾಂಜಾ ವಶಪಡಿಸಿಕೊಂಡ ಘಟನೆ ನಡೆದಿದೆ.
ದಾಸನಕೊಪ್ಪ ರಸ್ತೆಯ ಧರ್ಮಾ ಜಲಾಶಯದ ಬಳಿ ಕೇಸರಿ ಬಣ್ಣದ ಕೈ ಚೀಲದಲ್ಲಿ 2 ಕೆ.ಜಿ 28 ಗ್ರಾಂ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಮುಂಡಗೋಡ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ 80 ಸಾವಿರ ರೂಪಾಯಿ ಮೌಲ್ಯದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ.
ಹಾನಗಲ್ ತಾಲೂಕಿನ ತಿಳುವಳ್ಳಿ ಗ್ರಾಮದ ಸಲ್ಮಾನ್ ಖಾನ್ ಗೌಸ್ ಖಾನ್ ಆಲೂರು ಎಂಬಾತನೆ ಬಂದಿತ ಆರೋಪಿಯಾಗಿದ್ದಾನೆ.
ಸಿಪಿಐ ಬಿ ಎಸ್ ಲೋಕಾಪುರ ಅವರ ನಿರ್ದೇಶನದಂತೆ ಪಿಎಸ್ಐ ಯಲ್ಲಾಲಿಂಗ ಕುನ್ನೂರು ಮತ್ತು ಹನುಮಂತ ಕುಡುಗುಂಟಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ಗಣಪತಿ ಹೊನ್ನಳ್ಳಿ, ಕೋಟೇಶ್ ನಾಗರೊಳ್ಳಿ,ಅಣ್ಣಪ್ಪ ಬಡಿಗೇರ್, ಬಸವರಾಜ್ ಲಮಾಣಿ,ಸಂಜು ರಾಥೋಡ್,ಗುರುರಾಜ್ ಬಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ವರದಿ:ಮಂಜುನಾಥ ಹರಿಜನ
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…