ಕುಂದಗೋಳ; ತಾಲೂಕಿನ ಹೀರೆನರ್ತಿ ಗ್ರಾಮದ ರಸ್ತೆಯಲ್ಲಿ ಕಸದ ರಾಶಿ ಬಿದ್ದಿದ್ದು, ದಾರಿಹೋಕರು ದುರ್ನಾತ ದಿಂದ ಬೇಸಿತ್ತಿದ್ದಾರೆ. ಸ್ವಚ್ಚತೆ ಎಂಬುದು ಇಲ್ಲಿ ಮರೀಚಿಕೆಯಾಗಿದೆ. ರಸ್ತೆಯ ಎಲ್ಲೆಂದರಲ್ಲಿ ತ್ಯಾಜ್ಯ ರಾಶಿ ಬಿದ್ದಿದೆ. ಇಷ್ಟು ಮಾತ್ರವಲ್ಲದೆ ಹಂದಿಗಳು ಕಸವನ್ನು ಎಳೆದಾಡವುದರಿಂದ ರಸ್ತೆ ತುಂಬೆಲ್ಲ ಹರಡುತ್ತದೆ. ಸ್ಥಳೀಯ ನಿವಾಸಿಗಳು ಹಾಗೂ ಹೋಟೆಲ್ ನವರು ಕಸವನ್ನು ರಸ್ತೆಗೆ ಸುರಿಯತ್ತಿದ್ದು ತ್ಯಾಜ್ಯ ಸಮಸ್ಯೆ ಹೆಚ್ಚಳಕ್ಕೆ ಕಾರಣವಾಗಿದೆ.
ನಿತ್ಯ ನೂರಾರು ಸಾರ್ವಜನಿಕರು ಕುಂದಗೋಳ ಪಟ್ಟಣಕ್ಕೆ ಹೋಗುವು ಜನರಿಗೆ ಮೊದಲು ಕಸದ ರಾಶಿಯ ದರ್ಶನವಾಗುತ್ತಿದೆ. ಹೀಗಾಗಿ ಮೂಗು ಮುಚ್ಚಿಕೊಂಡು ಸಂಚಾರಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿನ ಸಾರ್ವಜನಿಕರು ಅನುಭವಿಸಿದು ಅಷ್ಟಿಷ್ಟಲ್ಲ, ದಿನಬೆಳಗಾದರೆ ಸಾಕು ದುನಾರ್ತದಲ್ಲ ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ದುನಾರ್ತದಿಂದ ಸೊಳ್ಳೆಗಳ ಕಾಟವೋ ಹೆಚ್ಚಾಗಿದ್ದು ಸಾಂಕ್ರಾಮಿಕ ರೋಗ ಹರಡುವ ಬೀತಿ ನಿವಾಸಿಗಳು ಎಡೆಬಿಡದೆ ಕಾಡುತ್ತಿದೆ. ಹಾಗಾದ್ರೆ ಗ್ರಾಮ ಪಂಚಾಯಿತಿ ಕಸ ವಿಲೇವಾರಿ ಮಾಡುವದರಲ್ಲಿ ಎಡೆವಿದೆ ಅಂತ ಸ್ಪಷ್ಟವಾಗಿ ಗೋಚರಿಸುತ್ತದೆ. ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಒಳ್ಳೆಯದಲ್ಲ ಎಂದು ಸ್ಥಳೀಯ ನಿವಾಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕುಂದಗೋಳ ತಾಲೂಕ್ ಸಂಚಾಲಕರು ಬಸವರಾಜ ದೇವರಮನಿ ಎಂದು ದೂರಿದರು.
ಸರಕಾರ ಸ್ವಚ್ಛತಾ ಅಭಿಯಾನ, ಸ್ವಚ್ಛ ಭಾರತ, ಸ್ವಚ್ಛ ಭಾರತ ಮಿಷನ್ ಯೋಜನೆಗಳು ಜಾರಿಗೆ ಬಂದರು ಇದ್ಯಾವುದೂ ಸದ್ಬಳಕೆ ಆಗದೆ ಸ್ಥಳೀಯ ಅಧಿಕಾರಿಗಳು ನಿರ್ಲಕ್ಷ್ಯ ಮಾಡುವುದು ಎಷ್ಟರಮಟ್ಟಿಗೆ ಸರಿ. ಮೂಲಭೂತ ಸೌಕರ್ಯಯದಿಂದ ವಂಚಿತವಾಯಿತ ಅಧಿಕಾರಿಗಳೇ? ಗ್ರಾಮದ ಸ್ವಚ್ಚತೆ ಕೊಂಡೊಯ್ಯುವ ಅಭಿವೃದ್ಧಿ ಅಧಿಕಾರಿ ಕಣ್ಣು ಮುಚ್ಚಿ ಕುಳಿತಿದ್ದಾರೇನೋ? ಒಂದು ಗೊತ್ತಿಲ್ಲ. ಆದರೆ ಗ್ರಾಮದ ಸ್ವಚ್ಚತೆ ಕಾಪಾಡುವಲ್ಲಿ ಈ ಅಧಿಕಾರಿಗಳು ಮನಸೋ ಇಚ್ಚೆ ವರ್ತನೆ ಮಾಡುವುದು ಸರಿಯಲ್ಲ.
ಒಟ್ಟಿನಲ್ಲಿ ಗ್ರಾಮದ ಅನೈರ್ಮಲ್ ಹೊಡೆದೂಡಸಿ ನೈರ್ಮಲ್ಯ ಕಾಪಾಡಿಕೊಳ್ಳಲು ಪ್ರಯತ್ನಸುತ್ತಾರೋ ಇಲ್ಲೋ ಕಾದು ನೋಡಬೇಕು
ವರದಿ; ಶಾನು ಯಲಿಗಾರ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…