ಕುಂದಗೋಳ; ತಾಲೂಕಿನ ಹೀರೆನರ್ತಿ ಗ್ರಾಮದ ರಸ್ತೆಯಲ್ಲಿ ಕಸದ ರಾಶಿ ಬಿದ್ದಿದ್ದು, ದಾರಿಹೋಕರು ದುರ್ನಾತ ದಿಂದ ಬೇಸಿತ್ತಿದ್ದಾರೆ. ಸ್ವಚ್ಚತೆ ಎಂಬುದು ಇಲ್ಲಿ ಮರೀಚಿಕೆಯಾಗಿದೆ. ರಸ್ತೆಯ ಎಲ್ಲೆಂದರಲ್ಲಿ ತ್ಯಾಜ್ಯ ರಾಶಿ ಬಿದ್ದಿದೆ. ಇಷ್ಟು ಮಾತ್ರವಲ್ಲದೆ ಹಂದಿಗಳು ಕಸವನ್ನು ಎಳೆದಾಡವುದರಿಂದ ರಸ್ತೆ ತುಂಬೆಲ್ಲ ಹರಡುತ್ತದೆ. ಸ್ಥಳೀಯ ನಿವಾಸಿಗಳು ಹಾಗೂ ಹೋಟೆಲ್ ನವರು ಕಸವನ್ನು ರಸ್ತೆಗೆ ಸುರಿಯತ್ತಿದ್ದು ತ್ಯಾಜ್ಯ ಸಮಸ್ಯೆ ಹೆಚ್ಚಳಕ್ಕೆ ಕಾರಣವಾಗಿದೆ.
ನಿತ್ಯ ನೂರಾರು ಸಾರ್ವಜನಿಕರು ಕುಂದಗೋಳ ಪಟ್ಟಣಕ್ಕೆ ಹೋಗುವು ಜನರಿಗೆ ಮೊದಲು ಕಸದ ರಾಶಿಯ ದರ್ಶನವಾಗುತ್ತಿದೆ. ಹೀಗಾಗಿ ಮೂಗು ಮುಚ್ಚಿಕೊಂಡು ಸಂಚಾರಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿನ ಸಾರ್ವಜನಿಕರು ಅನುಭವಿಸಿದು ಅಷ್ಟಿಷ್ಟಲ್ಲ, ದಿನಬೆಳಗಾದರೆ ಸಾಕು ದುನಾರ್ತದಲ್ಲ ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ದುನಾರ್ತದಿಂದ ಸೊಳ್ಳೆಗಳ ಕಾಟವೋ ಹೆಚ್ಚಾಗಿದ್ದು ಸಾಂಕ್ರಾಮಿಕ ರೋಗ ಹರಡುವ ಬೀತಿ ನಿವಾಸಿಗಳು ಎಡೆಬಿಡದೆ ಕಾಡುತ್ತಿದೆ. ಹಾಗಾದ್ರೆ ಗ್ರಾಮ ಪಂಚಾಯಿತಿ ಕಸ ವಿಲೇವಾರಿ ಮಾಡುವದರಲ್ಲಿ ಎಡೆವಿದೆ ಅಂತ ಸ್ಪಷ್ಟವಾಗಿ ಗೋಚರಿಸುತ್ತದೆ. ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಒಳ್ಳೆಯದಲ್ಲ ಎಂದು ಸ್ಥಳೀಯ ನಿವಾಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕುಂದಗೋಳ ತಾಲೂಕ್ ಸಂಚಾಲಕರು ಬಸವರಾಜ ದೇವರಮನಿ ಎಂದು ದೂರಿದರು.
ಸರಕಾರ ಸ್ವಚ್ಛತಾ ಅಭಿಯಾನ, ಸ್ವಚ್ಛ ಭಾರತ, ಸ್ವಚ್ಛ ಭಾರತ ಮಿಷನ್ ಯೋಜನೆಗಳು ಜಾರಿಗೆ ಬಂದರು ಇದ್ಯಾವುದೂ ಸದ್ಬಳಕೆ ಆಗದೆ ಸ್ಥಳೀಯ ಅಧಿಕಾರಿಗಳು ನಿರ್ಲಕ್ಷ್ಯ ಮಾಡುವುದು ಎಷ್ಟರಮಟ್ಟಿಗೆ ಸರಿ. ಮೂಲಭೂತ ಸೌಕರ್ಯಯದಿಂದ ವಂಚಿತವಾಯಿತ ಅಧಿಕಾರಿಗಳೇ? ಗ್ರಾಮದ ಸ್ವಚ್ಚತೆ ಕೊಂಡೊಯ್ಯುವ ಅಭಿವೃದ್ಧಿ ಅಧಿಕಾರಿ ಕಣ್ಣು ಮುಚ್ಚಿ ಕುಳಿತಿದ್ದಾರೇನೋ? ಒಂದು ಗೊತ್ತಿಲ್ಲ. ಆದರೆ ಗ್ರಾಮದ ಸ್ವಚ್ಚತೆ ಕಾಪಾಡುವಲ್ಲಿ ಈ ಅಧಿಕಾರಿಗಳು ಮನಸೋ ಇಚ್ಚೆ ವರ್ತನೆ ಮಾಡುವುದು ಸರಿಯಲ್ಲ.
ಒಟ್ಟಿನಲ್ಲಿ ಗ್ರಾಮದ ಅನೈರ್ಮಲ್ ಹೊಡೆದೂಡಸಿ ನೈರ್ಮಲ್ಯ ಕಾಪಾಡಿಕೊಳ್ಳಲು ಪ್ರಯತ್ನಸುತ್ತಾರೋ ಇಲ್ಲೋ ಕಾದು ನೋಡಬೇಕು
ವರದಿ; ಶಾನು ಯಲಿಗಾರ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…