Latest

ಎಲ್ಲೆಡೆ ಕಸದ ರಾಶಿಗಳು: ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾದ ಹಿರೇನರ್ತಿ ರಸ್ತೆಗಳು

ಕುಂದಗೋಳ: ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದಲ್ಲಿ ಸ್ವಚ್ಛತೆಗೆ ಸಂಬಂಧಿಸಿದ ಸಮಸ್ಯೆಗಳು ತೀವ್ರ ಸ್ವರೂಪ ತಾಳುತ್ತಿದ್ದು, ಗ್ರಾಮ ಪಂಚಾಯಿತಿ ಮುಂಭಾಗದ ರಸ್ತೆಗಳು ಕಸದ ರಾಶಿಗಳಿಂದ ಕೂಡಿದ್ದು, ದುರ್ವಾಸನೆಯಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗಿದೆ.  ಹಿರೇನರ್ತಿ ಗ್ರಾಮದಿಂದ ಕುಂದಗೋಳ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಸುತ್ತಮುತ್ತ ಕಸದ ರಾಶಿಗಳು ತುಂಬಿ ನಿಂತಿದ್ದು, ಸ್ವಚ್ಛತೆಯ ಕೊರತೆಯಿಂದ ಗ್ರಾಮೀಣ ಪರಿಸರದ ಸೌಂದರ್ಯ ಹಾಳಾಗಿದೆ. ಶಾಲೆ, ಬಸ್ ನಿಲ್ದಾಣ, ಮತ್ತು ಗ್ರಾಮ ಪಂಚಾಯತಿ ಕಛೇರಿಗಳಂತಹ ಸಾರ್ವಜನಿಕ ಸ್ಥಳಗಳ ಬಳಿಯೇ ಕಸ ಸಂಗ್ರಹಣೆ ನಡೆದಿದ್ದು, ನಿರ್ವಹಣೆ ಕೊರತೆಯ ಕಾರಣವಾಗಿ ಸಮಸ್ಯೆ ತೀವ್ರವಾಗಿದೆ.

ನಿರ್ಲಕ್ಷ್ಯದ ದುರಂತರ ಸ್ವರೂಪ
ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗದಂತೆಯೇ, ಗ್ರಾಮದಲ್ಲಿ ಹಲವೆಡೆ ಕಸದ ರಾಶಿಗಳು ಸಮಯಕ್ಕೆ ಸರಿಯಾಗಿ ವಿಲೇವಾರಿಯಾಗುತ್ತಿಲ್ಲ. ಹಂದಿಗಳ ತಾಣವಾಗಿ ಮಾರ್ಪಟ್ಟಿರುವ ಈ ಸ್ಥಳಗಳು ದುರ್ವಾಸನೆ ಬೀರುತ್ತಿದ್ದು, ಗ್ರಾಮಸ್ಥರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಸ್ವಚ್ಛತೆಯ ಕೊರತೆಯಿಂದ ಗ್ರಾಮಸ್ಥರಲ್ಲಿ ಆಕ್ರೋಶ ತೀವ್ರಗೊಂಡಿದ್ದು, ಗ್ರಾಮ ಪಂಚಾಯತಿ ಆಡಳಿತದ ನಿರ್ಲಕ್ಷ್ಯ ಕುರಿತು ತೀವ್ರವಾಗಿ ಚರ್ಚೆ ನಡೆಯುತ್ತಿದೆ.

ಮಹಿಳಾ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಆರೋಪ
ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯಾದ ಶೈಲಾ ನೀಲಗಾರ ಅವರನ್ನು ಕರ್ತವ್ಯದ ಕುರಿತು ಪ್ರಶ್ನೆ ಮಾಡಿದ್ದಾರೆ. “ಸರ್ಕಾರ ಕೈಗೊಂಡ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ 136 ಲಕ್ಷ ರೂಪಾಯಿ ಕಾರ್ಮಿಕ ವೆಚ್ಚ ಮತ್ತು 101 ಲಕ್ಷ ರೂಪಾಯಿ ಸಾಮಗ್ರಿ ವೆಚ್ಚ ಮೀಸಲಾಗಿದ್ದರೂ, ಈ ಹಣವನ್ನು ಸ್ವಚ್ಛತೆ ಕಾರ್ಯಗಳಿಗೆ ಬಳಕೆ ಮಾಡಲಾಗುತ್ತಿಲ್ಲವಾ?” ಎಂಬ ಪ್ರಶ್ನೆ ಗ್ರಾಮಸ್ಥರು ಮಾಡುತ್ತಿದ್ದಾರೆ.

ಅಧಿಕಾರಿ ಪ್ರತಿಕ್ರಿಯೆ
ಅಧಿಕಾರಿ ಶೈಲಾ ನೀಲಗಾರ ಅವರು, “ಗ್ರಾಮದ ಒಳಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡಿದ್ದೇವೆ. ಹೊರವಲಯದಲ್ಲಿ ಸ್ವಚ್ಛತೆಗಾಗಿ ಸಿಬ್ಬಂದಿಗೆ ಆದೇಶ ನೀಡುತ್ತೇವೆ. ಹಂದಿಗಳನ್ನು ಸ್ಥಳದಿಂದ ಕರೆದುಕೊಂಡು ಹೋಗಲು ಮಾಲೀಕರಿಗೆ ಸೂಚನೆ ನೀಡಿದ್ದೇವೆ,” ಎಂದು ಸ್ಪಷ್ಟನೆ ನೀಡಿದ್ದಾರೆ.

ಪ್ರಶ್ನೆಗಳು ಮತ್ತು ನಿರೀಕ್ಷೆ
ಹಿರೇನರ್ತಿ ಗ್ರಾಮದಲ್ಲಿ ಸ್ಥಳೀಯ ಆಡಳಿತದ ಅವ್ಯವಸ್ಥೆ ಸಂಬಂಧಿಸಿದಂತೆ ಜನರು ಗಂಭೀರ ಪ್ರಶ್ನೆಗಳನ್ನು ಮಾಡುತ್ತಿದ್ದು, ಸರ್ಕಾರದಿಂದ ನೀಡಲಾದ ಅನುದಾನವನ್ನು ಸೂಕ್ತವಾಗಿ ಬಳಸಲಾಗದಿರುವುದರಿಂದ ಗ್ರಾಮದಲ್ಲಿ ಸ್ವಚ್ಛತೆ ಕಾಪಾಡಲು ಆಡಳಿತ ಮಂಡಳಿಯು ಪ್ರಯತ್ನಿಸುತ್ತದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ. ವರದಿ: ಶಾನು ಯಲಿಗಾರ

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

5 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

5 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

5 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

5 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

5 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

5 hours ago