ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಕವಿತಾಳ ಪಟ್ಟಣ ಪಂಚಾಯಿತಿಯಲ್ಲಿ ಅಚ್ಚರಿ ಮೂಡಿಸುವ ಘಟನೆ ನಡೆದಿದ್ದು, ಕಚೇರಿ ಆವರಣದಲ್ಲಿ ನಿಲ್ಲಿಸಿದ್ದ ಕಸದ ಲಾರಿಯನ್ನು ಕಳ್ಳರು ಎತ್ತಿಕೊಂಡು ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ.
ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಕಳ್ಳರು ರಾತ್ರಿ ವೇಳೆ ಕಚೇರಿ ಗೇಟ್ನ ಬೀಗ ಮುರಿದು ಒಳನುಗ್ಗಿದ್ದಾರೆ. ಆವರಣದಲ್ಲಿ ನಿಲ್ಲಿಸಿದ್ದ ನಾಲ್ಕು ಕಸದ ವಾಹನಗಳಲ್ಲಿ ಒಂದಾದ ಲಾರಿಯನ್ನು ಎತ್ತಿಕೊಂಡು ಪರಾರಿಯಾದಾಗ, ಗಾಬರಿಯಲ್ಲಿ ಲಾರಿ ಕಚೇರಿಯ ಕಾಂಪೌಂಡ್ ಗೋಡೆಗೆ ಡಿಕ್ಕಿಯಾದರೂ ಕೂಡ ಕಳ್ಳರು ಲಾರಿಯೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ಡೀಸೆಲ್ ಲಭ್ಯತೆಯಲ್ಲಿ ಸಮಸ್ಯೆ ಎದುರಾಗಿದ್ದ ಹಿನ್ನೆಲೆಯಲ್ಲಿ ಎಲ್ಲಾ ಕಸದ ವಾಹನಗಳನ್ನು ಕಚೇರಿ ಆವರಣದಲ್ಲಿ ನಿಲ್ಲಿಸಲಾಗಿತ್ತು. ಅಲ್ಲದೆ, ಇತ್ತೀಚೆಗೆ ಸರ್ಕಾರದಿಂದ ಹಣ ಬಿಡುಗಡೆ ಆಗುತ್ತಿದ್ದಂತೆ ಈ ಲಾರಿಗಳಿಗೆ ಇನ್ಶೂರೆನ್ಸ್ ಮಾಡಲಾಗಿತ್ತು.
ಕಳವಾದ ಲಾರಿಯ ಮೌಲ್ಯ ಸುಮಾರು ₹8 ಲಕ್ಷದಷ್ಟಾಗಿದ್ದು, ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. CCTV ಫೂಟೇಜ್ಗಳ ಪರಿಶೀಲನೆ ಹಾಗೂ ಸ್ಥಳೀಯ ಮಾಹಿತಿ ಆಧಾರಿತ ತನಿಖೆ ಮುಂದುವರೆದಿದೆ.
ಬೆಂಗಳೂರು, ಜುಲೈ 31: ಸಿಲಿಕಾನ್ ಸಿಟಿ ಬೆಂಗಳೂರು ಈಚೆಗೆ ಮತ್ತೊಂದು ಬೆಚ್ಚಿಬೀಳಿಸುವ ಹೃದಯವಿದ್ರಾವಕ ಘಟನೆಯನ್ನು ಕಂಡಿದೆ. ಕೇವಲ 5 ಲಕ್ಷ…
ಉತ್ತರ ಪ್ರದೇಶದ ಫತೇಪುರ ಜಿಲ್ಲೆಯಲ್ಲಿ ನರ್ಬಯಾ ಪ್ರಕರಣವನ್ನು ನೆನಪಿಸುವಂತೆಯೇ ಒಂದು ಹೃದಯವಿದ್ರಾವಕ ಅಪರಾಧ ಬೆಳಕಿಗೆ ಬಂದಿದೆ. ಯುವಕನೊಬ್ಬ ತನ್ನ ಪ್ರೇಮಿಕೆಯನ್ನು…
ಹೈದರಾಬಾದ್, ಜುಲೈ 31: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಬಾಲ್ಯವಿವಾಹದ ಸಂಸ್ಕೃತಿಯ ಕುರಿತಂತೆ ಆತಂಕ ಹೆಚ್ಚಿಸುವ ಘಟನೆ ಬೆಳಕಿಗೆ ಬಂದಿದೆ. ಕೇವಲ…
ಮುಂಡಗೋಡ: ಕರ್ನಾಟಕ ಸರ್ಕಾರದ ಆದೇಶದ ಪ್ರಕಾರ 2025 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ…
ಮುಂಡಗೋಡ: ತಾಲೂಕಿನ ಕಾತೂರ ವಲಯದ ಓರಲಗಿ ಗಸ್ತಿನ ಮಾಲತೇಶ ಗೊಂದಿ ಅವರ ಹೊಲದಲ್ಲಿ ಪೈಪ್ ನಲ್ಲಿ ಸಿಕ್ಕಿಹಾಕಿಕೊಂಡು ಒದ್ದಾಡುತಿದ್ದ ನಾಗರಹಾವನ್ನು…
ಬೆಂಗಳೂರು – ನಟಿ ರಮ್ಯಾ ಮತ್ತು ನಟ ದರ್ಶನ್ ಅವರ ಅಭಿಮಾನಿಗಳ ನಡುವಿನ ಸಾಮಾಜಿಕ ಮಾಧ್ಯಮ ಜಟಾಪಟಿಗೆ ಸಂಬಂಧಿಸಿದಂತೆ ಇದೀಗ…