Latest

ಪಟ್ಟಣ ಪಂಚಾಯಿತಿ ಕಚೇರಿಯಿಂದ ₹8 ಲಕ್ಷ ಮೌಲ್ಯದ ಕಸದ ಲಾರಿ ಕಳವು

ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಕವಿತಾಳ ಪಟ್ಟಣ ಪಂಚಾಯಿತಿಯಲ್ಲಿ ಅಚ್ಚರಿ ಮೂಡಿಸುವ ಘಟನೆ ನಡೆದಿದ್ದು, ಕಚೇರಿ ಆವರಣದಲ್ಲಿ ನಿಲ್ಲಿಸಿದ್ದ ಕಸದ ಲಾರಿಯನ್ನು ಕಳ್ಳರು ಎತ್ತಿಕೊಂಡು ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ.

ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಕಳ್ಳರು ರಾತ್ರಿ ವೇಳೆ ಕಚೇರಿ ಗೇಟ್‌ನ ಬೀಗ ಮುರಿದು ಒಳನುಗ್ಗಿದ್ದಾರೆ. ಆವರಣದಲ್ಲಿ ನಿಲ್ಲಿಸಿದ್ದ ನಾಲ್ಕು ಕಸದ ವಾಹನಗಳಲ್ಲಿ ಒಂದಾದ ಲಾರಿಯನ್ನು ಎತ್ತಿಕೊಂಡು ಪರಾರಿಯಾದಾಗ, ಗಾಬರಿಯಲ್ಲಿ ಲಾರಿ ಕಚೇರಿಯ ಕಾಂಪೌಂಡ್ ಗೋಡೆಗೆ ಡಿಕ್ಕಿಯಾದರೂ ಕೂಡ ಕಳ್ಳರು ಲಾರಿಯೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ಡೀಸೆಲ್ ಲಭ್ಯತೆಯಲ್ಲಿ ಸಮಸ್ಯೆ ಎದುರಾಗಿದ್ದ ಹಿನ್ನೆಲೆಯಲ್ಲಿ ಎಲ್ಲಾ ಕಸದ ವಾಹನಗಳನ್ನು ಕಚೇರಿ ಆವರಣದಲ್ಲಿ ನಿಲ್ಲಿಸಲಾಗಿತ್ತು. ಅಲ್ಲದೆ, ಇತ್ತೀಚೆಗೆ ಸರ್ಕಾರದಿಂದ ಹಣ ಬಿಡುಗಡೆ ಆಗುತ್ತಿದ್ದಂತೆ ಈ ಲಾರಿಗಳಿಗೆ ಇನ್ಶೂರೆನ್ಸ್ ಮಾಡಲಾಗಿತ್ತು.

ಕಳವಾದ ಲಾರಿಯ ಮೌಲ್ಯ ಸುಮಾರು ₹8 ಲಕ್ಷದಷ್ಟಾಗಿದ್ದು, ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. CCTV ಫೂಟೇಜ್‌ಗಳ ಪರಿಶೀಲನೆ ಹಾಗೂ ಸ್ಥಳೀಯ ಮಾಹಿತಿ ಆಧಾರಿತ ತನಿಖೆ ಮುಂದುವರೆದಿದೆ.

nazeer ahamad

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

4 hours ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

4 hours ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

4 hours ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

4 hours ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

19 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

19 hours ago