ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಕವಿತಾಳ ಪಟ್ಟಣ ಪಂಚಾಯಿತಿಯಲ್ಲಿ ಅಚ್ಚರಿ ಮೂಡಿಸುವ ಘಟನೆ ನಡೆದಿದ್ದು, ಕಚೇರಿ ಆವರಣದಲ್ಲಿ ನಿಲ್ಲಿಸಿದ್ದ ಕಸದ ಲಾರಿಯನ್ನು ಕಳ್ಳರು ಎತ್ತಿಕೊಂಡು ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ.
ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಕಳ್ಳರು ರಾತ್ರಿ ವೇಳೆ ಕಚೇರಿ ಗೇಟ್ನ ಬೀಗ ಮುರಿದು ಒಳನುಗ್ಗಿದ್ದಾರೆ. ಆವರಣದಲ್ಲಿ ನಿಲ್ಲಿಸಿದ್ದ ನಾಲ್ಕು ಕಸದ ವಾಹನಗಳಲ್ಲಿ ಒಂದಾದ ಲಾರಿಯನ್ನು ಎತ್ತಿಕೊಂಡು ಪರಾರಿಯಾದಾಗ, ಗಾಬರಿಯಲ್ಲಿ ಲಾರಿ ಕಚೇರಿಯ ಕಾಂಪೌಂಡ್ ಗೋಡೆಗೆ ಡಿಕ್ಕಿಯಾದರೂ ಕೂಡ ಕಳ್ಳರು ಲಾರಿಯೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ಡೀಸೆಲ್ ಲಭ್ಯತೆಯಲ್ಲಿ ಸಮಸ್ಯೆ ಎದುರಾಗಿದ್ದ ಹಿನ್ನೆಲೆಯಲ್ಲಿ ಎಲ್ಲಾ ಕಸದ ವಾಹನಗಳನ್ನು ಕಚೇರಿ ಆವರಣದಲ್ಲಿ ನಿಲ್ಲಿಸಲಾಗಿತ್ತು. ಅಲ್ಲದೆ, ಇತ್ತೀಚೆಗೆ ಸರ್ಕಾರದಿಂದ ಹಣ ಬಿಡುಗಡೆ ಆಗುತ್ತಿದ್ದಂತೆ ಈ ಲಾರಿಗಳಿಗೆ ಇನ್ಶೂರೆನ್ಸ್ ಮಾಡಲಾಗಿತ್ತು.
ಕಳವಾದ ಲಾರಿಯ ಮೌಲ್ಯ ಸುಮಾರು ₹8 ಲಕ್ಷದಷ್ಟಾಗಿದ್ದು, ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. CCTV ಫೂಟೇಜ್ಗಳ ಪರಿಶೀಲನೆ ಹಾಗೂ ಸ್ಥಳೀಯ ಮಾಹಿತಿ ಆಧಾರಿತ ತನಿಖೆ ಮುಂದುವರೆದಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…