ಸುರತ್ಕಲ್, ಜು.13: ಎಲ್ಪಿಜಿ ಅನಿಲವನ್ನು ತುಂಬಿಕೊಳ್ಳಲು ತೆರಳುತ್ತಿದ್ದ ಟ್ಯಾಂಕರ್ ಚಾಲಕರೊಬ್ಬರು ದಿಢೀರ್ ಅನಾರೋಗ್ಯಕ್ಕೆ ಒಳಗಾಗಿ ರಕ್ತ ವಾಂತಿ ಮಾಡಿದ ಘಟನೆ ಭಾನುವಾರ ಮಧ್ಯಾಹ್ನ ಕುಳಾಯಿ ರೈಲ್ವೆ ಸೇತುವೆ ಬಳಿ ನಡೆದಿದೆ.
ಹೆಚ್ಪಿಸಿಎಲ್ ಘಟಕದಿಂದ ಅನಿಲ ಭರ್ತಿಗೆ ಹೊರಟಿದ್ದಾಗ, ಚಾಲಕನಿಗೆ ಅಪ್ರತ್ಯಾಶಿತವಾಗಿ ತೀವ್ರ ಅಸ್ವಸ್ಥತೆ ಉಂಟಾಗಿ ಅವರು ಜೋರಾಗಿ ರಕ್ತ ವಾಂತಿ ಮಾಡಿದರು. ತಕ್ಷಣ ತನ್ನ ಸಮಯ ಪ್ರಜ್ಞೆ ಎಣಿಸಿ ಚಾಲಕನು ಹ್ಯಾಂಡ್ಬ್ರೇಕ್ ಬಳಸಿ ವಾಹನವನ್ನು ಸುರಕ್ಷಿತವಾಗಿ ನಿಲ್ಲಿಸಿದ ಪರಿಣಾಮ ಭಾರೀ ಅಪಘಾತವೊಂದು ತಪ್ಪಿತು.
ಆಘಾತಕರ ಸ್ಥಿತಿಯಲ್ಲಿ ಪ್ರಜ್ಞೆ ತಪ್ಪಿದ್ದ ಚಾಲಕನನ್ನು ಸ್ಥಳೀಯರು ತಕ್ಷಣವೇ ಆಂಬುಲೆನ್ಸ್ ಮೂಲಕ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಘಟನೆಯಿಂದಾಗಿ ಕೆಲಕಾಲ ರಸ್ತೆಯಲ್ಲಿ ಆತಂಕದ ವಾತಾವರಣ ಕಂಡುಬಂದಿತ್ತು.
ಚಾಲಕನ ಜವಾಬ್ದಾರಿಯುತ ನಡೆ, ಅವಶ್ಯಕ ತ್ವರಿತ ಕ್ರಮಗಳಿಂದಾಗಿ ಅನೇಕ ಜೀವಹಾನಿ ಸಂಭವಿಸದಂತಾಯಿತು. ಸ್ಥಳೀಯರು ಮತ್ತು ಪೊಲೀಸರು ಈ ಸಾಹಸದ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಂಗಳೂರು ನಗರದಲ್ಲಿ ಮರಳು ಕಳ್ಳ ಸಾಗಾಟದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕಂಕನಾಡಿ ನಗರ ಠಾಣೆ ಪೊಲೀಸರು ನಡೆಸಿದ ತಪಾಸಣೆಯ ವೇಳೆ…
ಭಟ್ಕಳ, ಜುಲೈ 30 – ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಸಮೀಪದ ಸಮುದ್ರದಲ್ಲಿ ಭೀಕರ ದುರಂತ ಸಂಭವಿಸಿದ್ದು,…
ಸಕಲೇಶಪುರ (ಹಾಸನ ಜಿಲ್ಲೆ), ಜುಲೈ 30 – ಬೆಳಗೋಡು ಹೋಬಳಿಯ ಲಕ್ಮೀಪುರ ಗ್ರಾಮದಲ್ಲಿ ಪತ್ನಿಯ ಅಕ್ರಮ ಸಂಬಂಧ ಪತ್ತೆಹಚ್ಚಿದ ಪತಿಯ…
ಮಹಾರಾಷ್ಟ್ರದ ನವಿ ಮುಂಬೈನಲ್ಲಿ ಶಾಲಾ ಶಿಕ್ಷಕಿಯೊಬ್ಬಳು ತನ್ನ ಅಪ್ರಾಪ್ತ ವಿದ್ಯಾರ್ಥಿಗೆ ಅರೆನಗ್ನವಾಗಿ ವಿಡಿಯೋ ಕಾಲ್ ಮಾಡಿರುವ ತೀವ್ರ ಆರೋಪದ ಮೇಲೆ…
ರಾಣೆಬೆನ್ನೂರು ತಾಲೂಕು ಮಾಕನೂರು ಗ್ರಾಮದ ಸಮೀಪದ ಲಾಟೇರ್ ಜಮೀನಿನ ಬಳಿ ನಿರ್ಮಾಣದಲ್ಲಿರುವ ಮನೆಯೊಂದರಲ್ಲಿ ನಡೆಯುತ್ತಿದ್ದ ಜೂಜಾಟಕ್ಕೆ ಪೊಲೀಸರು ಸೋಮವಾರ ರಾತ್ರಿ…
ಬೆಂಗಳೂರು, ಜುಲೈ 30: ಹಿರಿಯ ನಟ ಹಾಗೂ ನಿರ್ದೇಶಕ ಎಸ್. ನಾರಾಯಣ ಅವರು ತಮ್ಮ ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣ…