ಸುರತ್ಕಲ್, ಜು.13: ಎಲ್ಪಿಜಿ ಅನಿಲವನ್ನು ತುಂಬಿಕೊಳ್ಳಲು ತೆರಳುತ್ತಿದ್ದ ಟ್ಯಾಂಕರ್ ಚಾಲಕರೊಬ್ಬರು ದಿಢೀರ್ ಅನಾರೋಗ್ಯಕ್ಕೆ ಒಳಗಾಗಿ ರಕ್ತ ವಾಂತಿ ಮಾಡಿದ ಘಟನೆ ಭಾನುವಾರ ಮಧ್ಯಾಹ್ನ ಕುಳಾಯಿ ರೈಲ್ವೆ ಸೇತುವೆ ಬಳಿ ನಡೆದಿದೆ.
ಹೆಚ್ಪಿಸಿಎಲ್ ಘಟಕದಿಂದ ಅನಿಲ ಭರ್ತಿಗೆ ಹೊರಟಿದ್ದಾಗ, ಚಾಲಕನಿಗೆ ಅಪ್ರತ್ಯಾಶಿತವಾಗಿ ತೀವ್ರ ಅಸ್ವಸ್ಥತೆ ಉಂಟಾಗಿ ಅವರು ಜೋರಾಗಿ ರಕ್ತ ವಾಂತಿ ಮಾಡಿದರು. ತಕ್ಷಣ ತನ್ನ ಸಮಯ ಪ್ರಜ್ಞೆ ಎಣಿಸಿ ಚಾಲಕನು ಹ್ಯಾಂಡ್ಬ್ರೇಕ್ ಬಳಸಿ ವಾಹನವನ್ನು ಸುರಕ್ಷಿತವಾಗಿ ನಿಲ್ಲಿಸಿದ ಪರಿಣಾಮ ಭಾರೀ ಅಪಘಾತವೊಂದು ತಪ್ಪಿತು.
ಆಘಾತಕರ ಸ್ಥಿತಿಯಲ್ಲಿ ಪ್ರಜ್ಞೆ ತಪ್ಪಿದ್ದ ಚಾಲಕನನ್ನು ಸ್ಥಳೀಯರು ತಕ್ಷಣವೇ ಆಂಬುಲೆನ್ಸ್ ಮೂಲಕ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಘಟನೆಯಿಂದಾಗಿ ಕೆಲಕಾಲ ರಸ್ತೆಯಲ್ಲಿ ಆತಂಕದ ವಾತಾವರಣ ಕಂಡುಬಂದಿತ್ತು.
ಚಾಲಕನ ಜವಾಬ್ದಾರಿಯುತ ನಡೆ, ಅವಶ್ಯಕ ತ್ವರಿತ ಕ್ರಮಗಳಿಂದಾಗಿ ಅನೇಕ ಜೀವಹಾನಿ ಸಂಭವಿಸದಂತಾಯಿತು. ಸ್ಥಳೀಯರು ಮತ್ತು ಪೊಲೀಸರು ಈ ಸಾಹಸದ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…