ಸುರತ್ಕಲ್, ಜು.13: ಎಲ್ಪಿಜಿ ಅನಿಲವನ್ನು ತುಂಬಿಕೊಳ್ಳಲು ತೆರಳುತ್ತಿದ್ದ ಟ್ಯಾಂಕರ್ ಚಾಲಕರೊಬ್ಬರು ದಿಢೀರ್ ಅನಾರೋಗ್ಯಕ್ಕೆ ಒಳಗಾಗಿ ರಕ್ತ ವಾಂತಿ ಮಾಡಿದ ಘಟನೆ ಭಾನುವಾರ ಮಧ್ಯಾಹ್ನ ಕುಳಾಯಿ ರೈಲ್ವೆ ಸೇತುವೆ ಬಳಿ ನಡೆದಿದೆ.
ಹೆಚ್ಪಿಸಿಎಲ್ ಘಟಕದಿಂದ ಅನಿಲ ಭರ್ತಿಗೆ ಹೊರಟಿದ್ದಾಗ, ಚಾಲಕನಿಗೆ ಅಪ್ರತ್ಯಾಶಿತವಾಗಿ ತೀವ್ರ ಅಸ್ವಸ್ಥತೆ ಉಂಟಾಗಿ ಅವರು ಜೋರಾಗಿ ರಕ್ತ ವಾಂತಿ ಮಾಡಿದರು. ತಕ್ಷಣ ತನ್ನ ಸಮಯ ಪ್ರಜ್ಞೆ ಎಣಿಸಿ ಚಾಲಕನು ಹ್ಯಾಂಡ್ಬ್ರೇಕ್ ಬಳಸಿ ವಾಹನವನ್ನು ಸುರಕ್ಷಿತವಾಗಿ ನಿಲ್ಲಿಸಿದ ಪರಿಣಾಮ ಭಾರೀ ಅಪಘಾತವೊಂದು ತಪ್ಪಿತು.
ಆಘಾತಕರ ಸ್ಥಿತಿಯಲ್ಲಿ ಪ್ರಜ್ಞೆ ತಪ್ಪಿದ್ದ ಚಾಲಕನನ್ನು ಸ್ಥಳೀಯರು ತಕ್ಷಣವೇ ಆಂಬುಲೆನ್ಸ್ ಮೂಲಕ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಘಟನೆಯಿಂದಾಗಿ ಕೆಲಕಾಲ ರಸ್ತೆಯಲ್ಲಿ ಆತಂಕದ ವಾತಾವರಣ ಕಂಡುಬಂದಿತ್ತು.
ಚಾಲಕನ ಜವಾಬ್ದಾರಿಯುತ ನಡೆ, ಅವಶ್ಯಕ ತ್ವರಿತ ಕ್ರಮಗಳಿಂದಾಗಿ ಅನೇಕ ಜೀವಹಾನಿ ಸಂಭವಿಸದಂತಾಯಿತು. ಸ್ಥಳೀಯರು ಮತ್ತು ಪೊಲೀಸರು ಈ ಸಾಹಸದ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…
163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…
ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…