Categories: CrimeLatest

ಬೆಚ್ಚಿಬಿದ್ದ ಗೌರಿಬಿದನೂರು ತಾಲೂಕು: ಕೆರೆಯಲ್ಲಿ ತೇಲುತ್ತಿತ್ತು ಮೃತದೇಹ!

ನಗರಗೆರೆ ಹೋಬಳಿಯ ವಾಟದಹೊಸಹಳ್ಳಿಯಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಗ್ರಾಮದ ನಿವಾಸಿ ರಾಮಚಂದ್ರಪ್ಪ (57) ಅವರು ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದರೆಂದು ತಿಳಿದುಬಂದಿದ್ದು, ಶುಕ್ರವಾರ ಗ್ರಾಮದ ಕೆರೆಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಕುಟುಂಬಸ್ಥರು ಮತ್ತು ಗ್ರಾಮಸ್ಥರ ಮಾಹಿತಿ ಪ್ರಕಾರ, ರಾಮಚಂದ್ರಪ್ಪ ಅವರು ಬುಧವಾರದಿಂದಲೇ ಕಾಣೆಯಾಗಿದ್ದರು. ಇಂದು ಬೆಳಿಗ್ಗೆ ಕೆರೆಯಲ್ಲಿ ಶವ ತೇಲುತ್ತಿರುವುದು ಕಂಡುಬಂದಿದ್ದು, ಈ ಘಟನೆ ಗ್ರಾಮದಲ್ಲಿ ಶೋಕ ವಾತಾವರಣ ನಿರ್ಮಿಸಿದೆ.

ರಾಮಚಂದ್ರಪ್ಪ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹರೀಶ್ ಗ್ರಾಮಾಂತರ ಠಾಣೆಯ ಪೊಲೀಸ್ ಉಪನಿರೀಕ್ಷಕರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಕೆರೆಯ ಆಳದಿಂದ ಶವವನ್ನು ಸುರಕ್ಷಿತವಾಗಿ ಹೊರತೆಗೆದರು. ನಂತರ ಮೃತದೇಹವನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಯಿತು.

ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಯೋ ಅಥವಾ ಇತರ ಕಾರಣಗಳೇ ಎಂಬುದರ ಕುರಿತು ತನಿಖೆ ಮುಂದುವರಿದಿದೆ.

ವರದಿ: ಅವಿನಾಶ್

ಭ್ರಷ್ಟರ ಬೇಟೆ

Recent Posts

ಪೊಲೀಸ್ ಅಧಿಕಾರಿ ಡಿವೈಎಸ್ಪಿ ಗೀತಾ ಪಾಟೀಲ, ಪಿಐ ಸೀತಾರಾಮ ಅಮಾನತಿಗೆ ಆಗ್ರಹಿಸಿ ಬೀದಿಗಿಳಿದ ಸಾರ್ವಜನಿಕರು

ಸಿದ್ದಾಪುರ: ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ ಹಾಗೂ ಸಿದ್ದಾಪುರ ಪೊಲೀಸ್ ಠಾಣೆಯ ಪಿಐ ಸೀತಾರಾಮ ಅವರನ್ನು ಅಮಾನತುಗೊಳಿಸಿ ಇಲಾಖಾ ತನಿಖೆ…

11 hours ago

ಬೆಂಗಳೂರಿನ ಪೊಲೀಸರೇ ತಲೆತಗ್ಗಿಸುವ ಕೆಲಸ, ಪೊಲೀಸರೇ ಅರೆಸ್ಟ್ : ಸಿಐಡಿ ಜೀಪ್‌ನಲ್ಲಿ ಬಂದು ₹20 ಲಕ್ಷ ದರೋಡೆ

ಬೆಂಗಳೂರು ನಗರದಲ್ಲಿ ಪೊಲೀಸರ ಮೇಲೆಯೇ ದರೋಡೆ ಆರೋಪ ಕೇಳಿಬಂದಿರುವ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…

19 hours ago

ಗೌರಿಬಿದನೂರಿನಲ್ಲಿ ಭೀಕರ ದರೋಡೆ: ಕಿವಿಯ ಸಮೇತ ಬಂಗಾರದ ವಾಲೆ ಕಿತ್ತುಕೊಂಡ ಕಳ್ಳರು, ವೃದ್ಧೆ ಮೃತ್ಯು

ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಹೋಬಳಿಯ ಬಸವನಹಳ್ಳಿ ಗ್ರಾಮದಲ್ಲಿ ನಡೆದ ಭೀಕರ ದರೋಡೆ ಹಾಗೂ ಹಲ್ಲೆ ಪ್ರಕರಣವು ವೃದ್ಧೆಯ ಸಾವಿನಲ್ಲಿ ಅಂತ್ಯಗೊಂಡಿದ್ದು,…

19 hours ago

ಭಟ್ಕಳ ಘಟನೆಗೆ ಹೊಸ ತಿರುವು: ಯುವತಿಯ ದೂರಿನ ಮೇರೆಗೆ ಮುಸ್ಲಿಂ ಯುವಕ ಬಂಧನ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ಮಹಿಳಾ ಸಹೋದ್ಯೋಗಿಯನ್ನು ಆಕೆಯ ಇಚ್ಛೆಗೆ ವಿರುದ್ಧವಾಗಿ ಕಾರಿನಲ್ಲಿ ಕರೆದೊಯ್ದ ಆರೋಪದ ಹಿನ್ನೆಲೆಯಲ್ಲಿ…

1 day ago

ಅಧಿಕಾರಿಗೆ ಚಪ್ಪಲಿ ಏಟು: 20 ವರ್ಷವಾದರೂ ಭೂ ಪರಿಹಾರ ನೀಡದ ಬಾಗಲಕೋಟೆ ಅಧಿಕಾರಿಗಳಿಗೆ ಲೋಕಾಯುಕ್ತ ಸಮನ್ಸ್

ಬಾಗಲಕೋಟೆ: ಸುಮಾರು 20 ವರ್ಷಗಳ ಹಿಂದೆ ಭೂಸ್ವಾಧೀನಪಡಿಸಿಕೊಂಡ ಜಮೀನಿಗೆ ಇನ್ನೂ ಪರಿಹಾರ ನೀಡದೇ ರೈತನನ್ನು ಅಲೆದಾಡಿಸಿರುವ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ…

2 days ago

ಸಾರ್ವಜನಿಕರ ದೂರುಗಳ ಬೆನ್ನಲ್ಲೇ ದಾಸನಪುರ ಗ್ರಾಮ ಪಂಚಾಯಿತಿ ಪಿಡಿಓ ಉಷಾ ಅಮಾನತು

ಬೆಂಗಳೂರು: ಅಧಿಕೃತ ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಗ್ರಾಮ ಪಂಚಾಯಿತಿಯ ಅಭಿವೃದ್ಧಿ…

2 days ago