Latest

ಜನರೇಟರ್ ಕಳ್ಳರು ಪೋಲಿಸರ ಬಲೆಗೆ!!!

ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳುವು ಪ್ರಕರಣದಲ್ಲಿ ದಿನಾಂಕ ೧೩/೦೮/೨೦೨೨ ರಂದು ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿ ಇವರುಗಳು ಮೈಸೂರು ನಗರ ನರಸಿಂಹರಾಜ ಪೊಲೀಸ್ ಠಾಣೆ, ಮೇಟಗಳ್ಳಿ ಪೊಲೀಸ್ ಠಾಣೆ ಹಾಗೂ ಮಂಡ್ಯ ಜಿಲ್ಲೆಯ ಮಳವಳ್ಳಿ ಟೌನ್ ಪೊಲೀಸ್ ಠಾಣೆಯ ಸರಹದ್ದಿನಲ್ಲಿರುವ ಕರ್ನಾಟಕ ಬ್ಯಾಂಕ್ ಕಛೇರಿಯ ಹೊರಗೆ ಅಳವಡಿಸಿದ್ದ ಜನರೇಟರ್‌ಗಳನ್ನು ಕನ್ನಕಳವು ಮಾಡಿದ್ದು ಇವರು ನೀಡಿದ ಮಾಹಿತಿಯ ಮೇರೆಗೆ ದಿನಾಂಕ ೧೭/೦೮/೨೦೨೨ ರಂದು ಕಳವು ಮಾಲುಗಳನ್ನು ಸ್ವೀಕರಿಸುತ್ತಿದ್ದ ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಿ ಆತನಿಂದ ೩,೬೬,೦೦೦/- ರೂ ಬೆಲೆಬಾಳುವ ಹೋಂಡಾ ಕಂಪನಿಯ ೩ ಜನರೇಟರ್‌ಗಳನ್ನು ಹಾಗೂ ೨ನೇ ಆರೋಪಿಯ ಸ್ನೇಹಿತನಿಂದ ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಇನೋವಾ ಕಾರನ್ನು ಅಮಾನತ್ತುಪಡಿಸಿಕೊಳ್ಳಲಾಗಿದೆ.
ಈ ಪತ್ತೆ ಕಾರ್ಯದಿಂದ ಮೈಸೂರು ನಗರ ನರಸಿಂಹರಾಜ ಪೊಲೀಸ್ ಠಾಣೆಯ-೦೧, ಮೇಟಗಳ್ಳಿ ಪೊಲೀಸ್ ಠಾಣೆಯ-೦೧ ಕಳವು ಪ್ರಕರಣಗಳು ಮತ್ತು ಮಂಡ್ಯ ಜಿಲ್ಲೆ ಮಳವಳ್ಳಿ ಟೌನ್ ಪೊಲೀಸ್ ಠಾಣೆಯ-೦೧ ಕನ್ನಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ.
ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಡಿಸಿಪಿ ಕೇಂದ್ರಸ್ಥಾನ ಅಪರಾಧ ಮತ್ತು ಸಂಚಾರ ವಿಭಾಗ ರವರಾದ ಶ್ರೀಮತಿ ಗೀತ ಎಂ.ಎಸ್, ಐ.ಪಿ.ಎಸ್ ರವರು ಮತ್ತು ನರಸಿಂಹರಾಜ ವಿಭಾಗದ ಎ.ಸಿ.ಪಿ ರವರಾದ ಶ್ರೀ ಶಿವಶಂಕರ್ ರವರ ಮಾರ್ಗದರ್ಶನದಲ್ಲಿ ನರಸಿಂಹರಾಜ ಪೊಲೀಸ್ ಇನ್ಸ್ಪೆಕ್ಟರ್ ಅಜರುದ್ದೀನ್, ಪಿ.ಎಸ್.ಐ ಜೈಕೀರ್ತಿ, ಪಿ.ಎಸ್.ಐ ಗಂಗಾಧರ್, ಎಎಸ್‌ಐ ರವಿ ಹಾಗೂ ಸಿಬ್ಬಂದಿಗಳಾದ ಮಂಜುನಾಥ, ಮಹೇಶ, ಸುನೀಲ್ ಕುಮಾರ್, ದೊಡ್ಡೇಗೌಡ, ಈರೇಶ ಮತ್ತು ಬಸವರಾಜು ರವರುಗಳು ಮಾಡಿರುತ್ತಾರೆ.
ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ: ಚಂದ್ರಗುಪ್ತ, ಐ.ಪಿ.ಎಸ್. ರವರು ಪ್ರಶಂಸಿಸಿರುತ್ತಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago