Latest

ಜನರೇಟರ್ ಕಳ್ಳರು ಪೋಲಿಸರ ಬಲೆಗೆ!!!

ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳುವು ಪ್ರಕರಣದಲ್ಲಿ ದಿನಾಂಕ ೧೩/೦೮/೨೦೨೨ ರಂದು ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿ ಇವರುಗಳು ಮೈಸೂರು ನಗರ ನರಸಿಂಹರಾಜ ಪೊಲೀಸ್ ಠಾಣೆ, ಮೇಟಗಳ್ಳಿ ಪೊಲೀಸ್ ಠಾಣೆ ಹಾಗೂ ಮಂಡ್ಯ ಜಿಲ್ಲೆಯ ಮಳವಳ್ಳಿ ಟೌನ್ ಪೊಲೀಸ್ ಠಾಣೆಯ ಸರಹದ್ದಿನಲ್ಲಿರುವ ಕರ್ನಾಟಕ ಬ್ಯಾಂಕ್ ಕಛೇರಿಯ ಹೊರಗೆ ಅಳವಡಿಸಿದ್ದ ಜನರೇಟರ್‌ಗಳನ್ನು ಕನ್ನಕಳವು ಮಾಡಿದ್ದು ಇವರು ನೀಡಿದ ಮಾಹಿತಿಯ ಮೇರೆಗೆ ದಿನಾಂಕ ೧೭/೦೮/೨೦೨೨ ರಂದು ಕಳವು ಮಾಲುಗಳನ್ನು ಸ್ವೀಕರಿಸುತ್ತಿದ್ದ ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಿ ಆತನಿಂದ ೩,೬೬,೦೦೦/- ರೂ ಬೆಲೆಬಾಳುವ ಹೋಂಡಾ ಕಂಪನಿಯ ೩ ಜನರೇಟರ್‌ಗಳನ್ನು ಹಾಗೂ ೨ನೇ ಆರೋಪಿಯ ಸ್ನೇಹಿತನಿಂದ ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಇನೋವಾ ಕಾರನ್ನು ಅಮಾನತ್ತುಪಡಿಸಿಕೊಳ್ಳಲಾಗಿದೆ.
ಈ ಪತ್ತೆ ಕಾರ್ಯದಿಂದ ಮೈಸೂರು ನಗರ ನರಸಿಂಹರಾಜ ಪೊಲೀಸ್ ಠಾಣೆಯ-೦೧, ಮೇಟಗಳ್ಳಿ ಪೊಲೀಸ್ ಠಾಣೆಯ-೦೧ ಕಳವು ಪ್ರಕರಣಗಳು ಮತ್ತು ಮಂಡ್ಯ ಜಿಲ್ಲೆ ಮಳವಳ್ಳಿ ಟೌನ್ ಪೊಲೀಸ್ ಠಾಣೆಯ-೦೧ ಕನ್ನಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ.
ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಡಿಸಿಪಿ ಕೇಂದ್ರಸ್ಥಾನ ಅಪರಾಧ ಮತ್ತು ಸಂಚಾರ ವಿಭಾಗ ರವರಾದ ಶ್ರೀಮತಿ ಗೀತ ಎಂ.ಎಸ್, ಐ.ಪಿ.ಎಸ್ ರವರು ಮತ್ತು ನರಸಿಂಹರಾಜ ವಿಭಾಗದ ಎ.ಸಿ.ಪಿ ರವರಾದ ಶ್ರೀ ಶಿವಶಂಕರ್ ರವರ ಮಾರ್ಗದರ್ಶನದಲ್ಲಿ ನರಸಿಂಹರಾಜ ಪೊಲೀಸ್ ಇನ್ಸ್ಪೆಕ್ಟರ್ ಅಜರುದ್ದೀನ್, ಪಿ.ಎಸ್.ಐ ಜೈಕೀರ್ತಿ, ಪಿ.ಎಸ್.ಐ ಗಂಗಾಧರ್, ಎಎಸ್‌ಐ ರವಿ ಹಾಗೂ ಸಿಬ್ಬಂದಿಗಳಾದ ಮಂಜುನಾಥ, ಮಹೇಶ, ಸುನೀಲ್ ಕುಮಾರ್, ದೊಡ್ಡೇಗೌಡ, ಈರೇಶ ಮತ್ತು ಬಸವರಾಜು ರವರುಗಳು ಮಾಡಿರುತ್ತಾರೆ.
ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ: ಚಂದ್ರಗುಪ್ತ, ಐ.ಪಿ.ಎಸ್. ರವರು ಪ್ರಶಂಸಿಸಿರುತ್ತಾರೆ.

ಭ್ರಷ್ಟರ ಬೇಟೆ

Recent Posts

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

13 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

17 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

17 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

17 hours ago

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…

17 hours ago

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…

17 hours ago