Latest

ಗೀಸರ್‌ ಗ್ಯಾಸ್ ಸೋರಿಕೆ: ಉಸಿರುಗಟ್ಟಿ ದಂಪತಿ ಸಾವು – ಮಗು ಆಸ್ಪತ್ರೆಗೆ ದಾಖಲು

ಬಾತ್‌ ರೂಮ್‌ ನಲ್ಲಿ ಸ್ನಾನ ಮಾಡುವಾಗ ಉಸಿರುಗಟ್ಟಿ ದಂಪತಿಗಳಿಬ್ಬರು ಮೃತಪಟ್ಟು, 5 ವರ್ಷದ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ದಾರುಣ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಡೆದಿದೆ. ಶಹಾಪುರ ನಿವಾಸಿಗಳಾದ ಶಿವನಾರಾಯಣ ಜಾನ್ವಾರ್ (37), ಅವರ ಪತ್ನಿ ಕವಿತಾ ಜಾನ್ವರ್ (35) ಮೃತ ದಂಪತಿಗಳು. ಮಗ ವಿಹಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದಂಪತಿಗಳು ಹಾಗೂ ಕುಟುಂಬ ಸದಸ್ಯರು ಶೀತಲ ಅಷ್ಟಮಿ ಹಬ್ಬದ ಪ್ರಯುಕ್ತ ಬಣ್ಣದಲ್ಲಿ ಆಡಿದ್ದರು. ಆದಾದ ಬಳಿಕ ಬಣ್ಣವನ್ನು ತೊಳೆಯಲು ತಮ್ಮ 5 ವರ್ಷದ ಮಗನನ್ನು ಕರೆದುಕೊಂಡು ದಂಪತಿಗಳು ಬಾತ್‌ ರೂಮ್‌ ಗೆ ತೆರಳಿದ್ದಾರೆ. ಈ ವೇಳೆ ಗೀಸರ್‌ ಆನ್‌ ಮಾಡಿದ್ದಾರೆ. ಕೆಲವೇ ಕ್ಷಣದಲ್ಲಿ ಗೀಸರ್‌ ಅನಿಲ ಸೋರಿಕೆಯಾಗಿದೆ. ಏಕಾಏಕಿ ಗೀಸರ್‌ ಗ್ಯಾಸ್‌ ಲೀಕ್‌ ಆದ ಪರಿಣಾಮ ದಂಪತಿಗಳಿಗೆ ಉಸಿರುಗಟ್ಟಿ ಏನು ಮಾಡಲಾಗದ ಸ್ಥಿತಿ ನಿರ್ಮಾಣವಾಗಿದೆ. ಇದಾದ ಕೆಲ ಸಮಯದ ಬಳಿಕ ಕುಟುಂಬದ ಇತರ ಸದಸ್ಯರು ಬಾಗಿಲು ಬಡಿದು ಕರೆಯಲು ಯತ್ನಿಸಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಬಾಗಿಲು ಒಡೆದು ನೋಡಿದ್ದಾರೆ. ನೋಡುವಾಗ ಮೂವರು ಪ್ರಜ್ಞೆ ತಪ್ಪಿ ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೂವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಇದರಲ್ಲಿ ದಂಪತಿಗಳು ಮೃತಪಟ್ಟಿದ್ದು,ಮಗ ವಿಹಾನ್‌ ಬದುಕುಳಿದಿದ್ದಾರೆ ಎಂದು ಘಟನೆ ಬಗ್ಗೆ ಪೊಲೀಸರು ಹೇಳಿದ್ದಾರೆ.

ಭ್ರಷ್ಟರ ಬೇಟೆ

Recent Posts

ಕೆರೆಗೆ ಬಿದ್ದು ಜೀವ ಕಳೆದುಕೊಂಡ ಮೂರು ವರ್ಷದ ಅವಳಿ ಮಕ್ಕಳು: ಯರಿ ನಾರಾಯಣಪುರದಲ್ಲಿ ದುರ್ಘಟನೆ, ಗ್ರಾಮದಲ್ಲಿ ಆಕ್ರಂದನ

ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿ ನಾರಾಯಣಪುರ ಗ್ರಾಮದಲ್ಲಿ ಮಗುಗಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟುವಂತಾಗಿದೆ. ಮನೆಯ…

2 hours ago

ಪ್ರಚಾರ ವಿವಾದಕ್ಕೆ ರಚಿತಾ ರಾಮ್ ಗಟ್ಟಿ ಪ್ರತಿಕ್ರಿಯೆ: ತಪ್ಪು ಮಾಡಿಲ್ಲ, ಕ್ಷಮೆ ಕೇಳುವುದಿಲ್ಲ!

ಬೆಂಗಳೂರು: 'ಸಂಜು ವೆಡ್ಸ್ ಗೀತಾ-2' ಸಿನಿಮಾ ತಂಡ ಮತ್ತು ನಟಿ ರಚಿತಾ ರಾಮ್ ನಡುವಿನ ವೈಮನಸ್ಸು ಬಹಿರಂಗಗೊಂಡಿದ್ದು, ಸಾಮಾಜಿಕ ಮಾಧ್ಯಮಗಳಿಂದ…

2 hours ago

ಭಟ್ಕಳದಲ್ಲಿ ಜೂಜಾಟದ ಕ್ಲಬ್ ಮೇಲೆ ದಾಳಿ : 25 ಮಂದಿ ವಿರುದ್ಧ ಪೊಲೀಸ್ ಕ್ರಮ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳ್ಕೆ ಗ್ರಾಮದ ಕಲ್ಬಂಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಂದು ಖಾಸಗಿ ಕ್ಲಬ್‌ನಲ್ಲಿ ಜೂಜಾಟ ನಡೆಯುತ್ತಿತ್ತು ಎಂಬ…

2 hours ago

30 ವರ್ಷದ ಹಿಂದಿನ ಲಂಚ ಪ್ರಕರಣ: ನಿವೃತ್ತಿಗೆ 10 ವರ್ಷವಾದ ಮೇಲೆ ಗ್ರಾಮ ಲೆಕ್ಕಾಧಿಕಾರಿಗೆ ಜೈಲುದಂಡ

ಬೆಳಗಾವಿ: ಮೂರು ದಶಕಗಳ ಹಿಂದಿನ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಿವೃತ್ತವಾಗಿರುವ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಜೈಲು ಸೇರುವ ಅಪರೂಪದ ಪ್ರಕರಣ…

6 hours ago

“ಶೇ.100ಫಲಿತಾಂಶದ ನಾಟಕದ ಹಿಂದೆ ಸುಳ್ಳು ಆಟ: ಖಾಸಗಿ ಶಾಲೆಗಳ ಮೂಲಕ ಸರ್ಕಾರಿ ಶಾಲೆಗಳ ದುರ್ಬಳಕೆ”

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…

13 hours ago

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

1 day ago