Latest

ಗೀಸರ್‌ ಗ್ಯಾಸ್ ಸೋರಿಕೆ: ಉಸಿರುಗಟ್ಟಿ ದಂಪತಿ ಸಾವು – ಮಗು ಆಸ್ಪತ್ರೆಗೆ ದಾಖಲು

ಬಾತ್‌ ರೂಮ್‌ ನಲ್ಲಿ ಸ್ನಾನ ಮಾಡುವಾಗ ಉಸಿರುಗಟ್ಟಿ ದಂಪತಿಗಳಿಬ್ಬರು ಮೃತಪಟ್ಟು, 5 ವರ್ಷದ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ದಾರುಣ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಡೆದಿದೆ. ಶಹಾಪುರ ನಿವಾಸಿಗಳಾದ ಶಿವನಾರಾಯಣ ಜಾನ್ವಾರ್ (37), ಅವರ ಪತ್ನಿ ಕವಿತಾ ಜಾನ್ವರ್ (35) ಮೃತ ದಂಪತಿಗಳು. ಮಗ ವಿಹಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದಂಪತಿಗಳು ಹಾಗೂ ಕುಟುಂಬ ಸದಸ್ಯರು ಶೀತಲ ಅಷ್ಟಮಿ ಹಬ್ಬದ ಪ್ರಯುಕ್ತ ಬಣ್ಣದಲ್ಲಿ ಆಡಿದ್ದರು. ಆದಾದ ಬಳಿಕ ಬಣ್ಣವನ್ನು ತೊಳೆಯಲು ತಮ್ಮ 5 ವರ್ಷದ ಮಗನನ್ನು ಕರೆದುಕೊಂಡು ದಂಪತಿಗಳು ಬಾತ್‌ ರೂಮ್‌ ಗೆ ತೆರಳಿದ್ದಾರೆ. ಈ ವೇಳೆ ಗೀಸರ್‌ ಆನ್‌ ಮಾಡಿದ್ದಾರೆ. ಕೆಲವೇ ಕ್ಷಣದಲ್ಲಿ ಗೀಸರ್‌ ಅನಿಲ ಸೋರಿಕೆಯಾಗಿದೆ. ಏಕಾಏಕಿ ಗೀಸರ್‌ ಗ್ಯಾಸ್‌ ಲೀಕ್‌ ಆದ ಪರಿಣಾಮ ದಂಪತಿಗಳಿಗೆ ಉಸಿರುಗಟ್ಟಿ ಏನು ಮಾಡಲಾಗದ ಸ್ಥಿತಿ ನಿರ್ಮಾಣವಾಗಿದೆ. ಇದಾದ ಕೆಲ ಸಮಯದ ಬಳಿಕ ಕುಟುಂಬದ ಇತರ ಸದಸ್ಯರು ಬಾಗಿಲು ಬಡಿದು ಕರೆಯಲು ಯತ್ನಿಸಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಬಾಗಿಲು ಒಡೆದು ನೋಡಿದ್ದಾರೆ. ನೋಡುವಾಗ ಮೂವರು ಪ್ರಜ್ಞೆ ತಪ್ಪಿ ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೂವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಇದರಲ್ಲಿ ದಂಪತಿಗಳು ಮೃತಪಟ್ಟಿದ್ದು,ಮಗ ವಿಹಾನ್‌ ಬದುಕುಳಿದಿದ್ದಾರೆ ಎಂದು ಘಟನೆ ಬಗ್ಗೆ ಪೊಲೀಸರು ಹೇಳಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago