ಬಾತ್ ರೂಮ್ ನಲ್ಲಿ ಸ್ನಾನ ಮಾಡುವಾಗ ಉಸಿರುಗಟ್ಟಿ ದಂಪತಿಗಳಿಬ್ಬರು ಮೃತಪಟ್ಟು, 5 ವರ್ಷದ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ದಾರುಣ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಡೆದಿದೆ. ಶಹಾಪುರ ನಿವಾಸಿಗಳಾದ ಶಿವನಾರಾಯಣ ಜಾನ್ವಾರ್ (37), ಅವರ ಪತ್ನಿ ಕವಿತಾ ಜಾನ್ವರ್ (35) ಮೃತ ದಂಪತಿಗಳು. ಮಗ ವಿಹಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದಂಪತಿಗಳು ಹಾಗೂ ಕುಟುಂಬ ಸದಸ್ಯರು ಶೀತಲ ಅಷ್ಟಮಿ ಹಬ್ಬದ ಪ್ರಯುಕ್ತ ಬಣ್ಣದಲ್ಲಿ ಆಡಿದ್ದರು. ಆದಾದ ಬಳಿಕ ಬಣ್ಣವನ್ನು ತೊಳೆಯಲು ತಮ್ಮ 5 ವರ್ಷದ ಮಗನನ್ನು ಕರೆದುಕೊಂಡು ದಂಪತಿಗಳು ಬಾತ್ ರೂಮ್ ಗೆ ತೆರಳಿದ್ದಾರೆ. ಈ ವೇಳೆ ಗೀಸರ್ ಆನ್ ಮಾಡಿದ್ದಾರೆ. ಕೆಲವೇ ಕ್ಷಣದಲ್ಲಿ ಗೀಸರ್ ಅನಿಲ ಸೋರಿಕೆಯಾಗಿದೆ. ಏಕಾಏಕಿ ಗೀಸರ್ ಗ್ಯಾಸ್ ಲೀಕ್ ಆದ ಪರಿಣಾಮ ದಂಪತಿಗಳಿಗೆ ಉಸಿರುಗಟ್ಟಿ ಏನು ಮಾಡಲಾಗದ ಸ್ಥಿತಿ ನಿರ್ಮಾಣವಾಗಿದೆ. ಇದಾದ ಕೆಲ ಸಮಯದ ಬಳಿಕ ಕುಟುಂಬದ ಇತರ ಸದಸ್ಯರು ಬಾಗಿಲು ಬಡಿದು ಕರೆಯಲು ಯತ್ನಿಸಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಬಾಗಿಲು ಒಡೆದು ನೋಡಿದ್ದಾರೆ. ನೋಡುವಾಗ ಮೂವರು ಪ್ರಜ್ಞೆ ತಪ್ಪಿ ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೂವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಇದರಲ್ಲಿ ದಂಪತಿಗಳು ಮೃತಪಟ್ಟಿದ್ದು,ಮಗ ವಿಹಾನ್ ಬದುಕುಳಿದಿದ್ದಾರೆ ಎಂದು ಘಟನೆ ಬಗ್ಗೆ ಪೊಲೀಸರು ಹೇಳಿದ್ದಾರೆ.
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…
ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…
ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…
ರಾಜ್ಯದಲ್ಲಿ ದಾಂಪತ್ಯ ಸಂಬಂಧಗಳನ್ನು ಬಿಟ್ಟು ಬೇರೊಬ್ಬರ ಜೊತೆ ಓಡಿ ಹೋಗುವ ಘಟನೆಗಳು ಹೆಚ್ಚುತ್ತಿರುವ ನಡುವೆಯೇ, Bengaluruನಲ್ಲಿ ಮತ್ತೊಂದು ಸಂಚಲನಕಾರಿ ಪ್ರಕರಣ…
ಲಂಚ ಸ್ವೀಕರಿಸುತ್ತಿದ್ದ ವೇಳೆ Kerur Police Station ನ ಪಿಎಸ್ಐ Bheemappa Rabakavi ಹಾಗೂ ಪೇದೆ Santosh Biradar ಅವರನ್ನು…
ಒಮ್ಮೆ ತನ್ನ ಪ್ರತಿಭೆಯಿಂದ ರಾಜ್ಯದ ಹೆಮ್ಮೆಯಾಗಿ ಗುರುತಿಸಿಕೊಂಡಿದ್ದ ಯುವ ಅಧಿಕಾರಿ, ಇದೀಗ ಭ್ರಷ್ಟಾಚಾರದ ಆರೋಪದಲ್ಲಿ ಸುದ್ದಿಯಾಗಿದ್ದಾರೆ. Kajal Meena ಎಂಬ…