Latest

ಗೀಸರ್‌ ಗ್ಯಾಸ್ ಸೋರಿಕೆ: ಉಸಿರುಗಟ್ಟಿ ದಂಪತಿ ಸಾವು – ಮಗು ಆಸ್ಪತ್ರೆಗೆ ದಾಖಲು

ಬಾತ್‌ ರೂಮ್‌ ನಲ್ಲಿ ಸ್ನಾನ ಮಾಡುವಾಗ ಉಸಿರುಗಟ್ಟಿ ದಂಪತಿಗಳಿಬ್ಬರು ಮೃತಪಟ್ಟು, 5 ವರ್ಷದ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ದಾರುಣ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಡೆದಿದೆ. ಶಹಾಪುರ ನಿವಾಸಿಗಳಾದ ಶಿವನಾರಾಯಣ ಜಾನ್ವಾರ್ (37), ಅವರ ಪತ್ನಿ ಕವಿತಾ ಜಾನ್ವರ್ (35) ಮೃತ ದಂಪತಿಗಳು. ಮಗ ವಿಹಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದಂಪತಿಗಳು ಹಾಗೂ ಕುಟುಂಬ ಸದಸ್ಯರು ಶೀತಲ ಅಷ್ಟಮಿ ಹಬ್ಬದ ಪ್ರಯುಕ್ತ ಬಣ್ಣದಲ್ಲಿ ಆಡಿದ್ದರು. ಆದಾದ ಬಳಿಕ ಬಣ್ಣವನ್ನು ತೊಳೆಯಲು ತಮ್ಮ 5 ವರ್ಷದ ಮಗನನ್ನು ಕರೆದುಕೊಂಡು ದಂಪತಿಗಳು ಬಾತ್‌ ರೂಮ್‌ ಗೆ ತೆರಳಿದ್ದಾರೆ. ಈ ವೇಳೆ ಗೀಸರ್‌ ಆನ್‌ ಮಾಡಿದ್ದಾರೆ. ಕೆಲವೇ ಕ್ಷಣದಲ್ಲಿ ಗೀಸರ್‌ ಅನಿಲ ಸೋರಿಕೆಯಾಗಿದೆ. ಏಕಾಏಕಿ ಗೀಸರ್‌ ಗ್ಯಾಸ್‌ ಲೀಕ್‌ ಆದ ಪರಿಣಾಮ ದಂಪತಿಗಳಿಗೆ ಉಸಿರುಗಟ್ಟಿ ಏನು ಮಾಡಲಾಗದ ಸ್ಥಿತಿ ನಿರ್ಮಾಣವಾಗಿದೆ. ಇದಾದ ಕೆಲ ಸಮಯದ ಬಳಿಕ ಕುಟುಂಬದ ಇತರ ಸದಸ್ಯರು ಬಾಗಿಲು ಬಡಿದು ಕರೆಯಲು ಯತ್ನಿಸಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಬಾಗಿಲು ಒಡೆದು ನೋಡಿದ್ದಾರೆ. ನೋಡುವಾಗ ಮೂವರು ಪ್ರಜ್ಞೆ ತಪ್ಪಿ ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೂವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಇದರಲ್ಲಿ ದಂಪತಿಗಳು ಮೃತಪಟ್ಟಿದ್ದು,ಮಗ ವಿಹಾನ್‌ ಬದುಕುಳಿದಿದ್ದಾರೆ ಎಂದು ಘಟನೆ ಬಗ್ಗೆ ಪೊಲೀಸರು ಹೇಳಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮುಂಡಗೋಡದ ಇಬ್ಬರು ಭ್ರಷ್ಟರಿಗೆ ಲೋಕಾಯುಕ್ತ ಶಾಕ್!

ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…

1 hour ago

ಇಬ್ಬರು ಪತ್ನಿಯರಿದ್ದರೂ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವ್ಯಸಗಿ ಮದುವೆಯಾದ: 45 ವರ್ಷದ ವ್ಯಕ್ತಿ ಪೋಕ್ಸೋ ಅಡಿಯಲ್ಲಿ ಬಂಧನ

ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…

2 hours ago

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

21 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

1 day ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

1 day ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

1 day ago