ಬಾತ್ ರೂಮ್ ನಲ್ಲಿ ಸ್ನಾನ ಮಾಡುವಾಗ ಉಸಿರುಗಟ್ಟಿ ದಂಪತಿಗಳಿಬ್ಬರು ಮೃತಪಟ್ಟು, 5 ವರ್ಷದ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ದಾರುಣ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಡೆದಿದೆ. ಶಹಾಪುರ ನಿವಾಸಿಗಳಾದ ಶಿವನಾರಾಯಣ ಜಾನ್ವಾರ್ (37), ಅವರ ಪತ್ನಿ ಕವಿತಾ ಜಾನ್ವರ್ (35) ಮೃತ ದಂಪತಿಗಳು. ಮಗ ವಿಹಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದಂಪತಿಗಳು ಹಾಗೂ ಕುಟುಂಬ ಸದಸ್ಯರು ಶೀತಲ ಅಷ್ಟಮಿ ಹಬ್ಬದ ಪ್ರಯುಕ್ತ ಬಣ್ಣದಲ್ಲಿ ಆಡಿದ್ದರು. ಆದಾದ ಬಳಿಕ ಬಣ್ಣವನ್ನು ತೊಳೆಯಲು ತಮ್ಮ 5 ವರ್ಷದ ಮಗನನ್ನು ಕರೆದುಕೊಂಡು ದಂಪತಿಗಳು ಬಾತ್ ರೂಮ್ ಗೆ ತೆರಳಿದ್ದಾರೆ. ಈ ವೇಳೆ ಗೀಸರ್ ಆನ್ ಮಾಡಿದ್ದಾರೆ. ಕೆಲವೇ ಕ್ಷಣದಲ್ಲಿ ಗೀಸರ್ ಅನಿಲ ಸೋರಿಕೆಯಾಗಿದೆ. ಏಕಾಏಕಿ ಗೀಸರ್ ಗ್ಯಾಸ್ ಲೀಕ್ ಆದ ಪರಿಣಾಮ ದಂಪತಿಗಳಿಗೆ ಉಸಿರುಗಟ್ಟಿ ಏನು ಮಾಡಲಾಗದ ಸ್ಥಿತಿ ನಿರ್ಮಾಣವಾಗಿದೆ. ಇದಾದ ಕೆಲ ಸಮಯದ ಬಳಿಕ ಕುಟುಂಬದ ಇತರ ಸದಸ್ಯರು ಬಾಗಿಲು ಬಡಿದು ಕರೆಯಲು ಯತ್ನಿಸಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಬಾಗಿಲು ಒಡೆದು ನೋಡಿದ್ದಾರೆ. ನೋಡುವಾಗ ಮೂವರು ಪ್ರಜ್ಞೆ ತಪ್ಪಿ ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೂವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಇದರಲ್ಲಿ ದಂಪತಿಗಳು ಮೃತಪಟ್ಟಿದ್ದು,ಮಗ ವಿಹಾನ್ ಬದುಕುಳಿದಿದ್ದಾರೆ ಎಂದು ಘಟನೆ ಬಗ್ಗೆ ಪೊಲೀಸರು ಹೇಳಿದ್ದಾರೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…