ಬೆಂಗಳೂರು: ಕೊತ್ತನೂರು ಠಾಣೆ ಪೊಲೀಸರು ಮಾದಕ ವಸ್ತುಗಳ ಮಾರಾಟದಲ್ಲಿ ತೊಡಗಿದ್ದ ಘಾನ ದೇಶದ ಪ್ರಜೆಯೊಬ್ಬನನ್ನು ಬಂಧಿಸಿ, 52 ಲಕ್ಷಕ್ಕೂ ಹೆಚ್ಚು ಮೌಲ್ಯದ ಎಂಡಿಎಂಎ ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತನನ್ನು ಘಾನ ದೇಶದ ಒವುಸು ಕಾಲಿನ್ಸ್ (35) ಎಂದು ಗುರುತಿಸಲಾಗಿದೆ. ಈತ ವೈದ್ಯಕೀಯ ವೀಸಾ ಪಡೆದು ಭಾರತಕ್ಕೆ ಆಗಮಿಸಿದ್ದರೂ, ನಿಜಕ್ಕೂ ಮಾದಕ ದ್ರವ್ಯ ವ್ಯಾಪಾರದಲ್ಲಿ ತೊಡಗಿದ್ದ ಎನ್ನಲಾಗಿದೆ. ಇತ್ತೀಚಿಗೆ ಪೂರ್ವಾಂಕರ ಡಬಲ್ ರಸ್ತೆಯ ಬಳಿ ಕಾರಿನಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಪೊಲೀಸರ ದಾಳಿಗೆ ಸಿಕ್ಕಿಬಿದ್ದಿದ್ದಾನೆ.
ಪೊಲೀಸರು ನೀಡಿದ ಮಾಹಿತಿಯಂತೆ, ಕಾಲಿನ್ಸ್ ಈ ಹಿಂದೆ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಸಂಬಂಧಿತ ಪ್ರಕರಣದಲ್ಲಿ ಬಂಧಿತನಾಗಿದ್ದ. ನಂತರ ಭಾರತದಿಂದ ಗಡೀಪಾರು ಮಾಡಲಾಗಿತ್ತು. ಆದರೆ ನಂತರ ಮತ್ತೆ ಭಾರತಕ್ಕೆ ನುಗ್ಗಿದ ಈತ, ಮತ್ತೊಬ್ಬ ವಿದೇಶಿಯಿಂದ ಕಡಿಮೆ ದರದಲ್ಲಿ ಮಾದಕ ವಸ್ತುಗಳನ್ನು ಖರೀದಿ ಮಾಡುತ್ತಿದ್ದು, ಬೃಹತ್ ಲಾಭಕ್ಕಾಗಿ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದ.
ಬಂಧಿತನಿಂದ ಒಟ್ಟು 416 ಗ್ರಾಂ ಎಂಡಿಎಂಎ, ಒಂದು ಕಾರು, ಒಂದು ದ್ವಿಚಕ್ರ ವಾಹನ ಮತ್ತು ತೂಕದ ಯಂತ್ರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಳ್ಳಲಾದ ಮಾದಕ ವಸ್ತುಗಳ ಮೌಲ್ಯ ಸುಮಾರು 52.15 ಲಕ್ಷ ರೂಪಾಯಿ ಎಷ್ಟು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದ್ದು, ಆರೋಪಿ ಹಿಂದಿನ ಹಿನ್ನೆಲೆ ಮತ್ತು ಸಂಪರ್ಕಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಕರ್ನಾಟಕ ಹೈಕೋರ್ಟ್ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…