Latest

ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಶುಂಠಿ,ಮಾವು,ಅಡಿಕೆಗೆ ಅವಕಾಶ

ಮುಂಡಗೋಡ: ಕರ್ನಾಟಕ ಸರ್ಕಾರದ ಆದೇಶದ ಪ್ರಕಾರ 2025 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು (RWBCIS) ಉತ್ತರ ಕನ್ನಡ ಜಿಲ್ಲೆಯಲ್ಲಿ Reliance General Insurance Company Limited ಅಧಿಸೂಚಿತ ವಿಮಾ ಅನುಷ್ಠಾನ ಸಂಸ್ಥೆಯಾಗಿರುತ್ತದೆ. ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರು ವಿಮಾ ಕಂತನ್ನು ಪಾವತಿಸಲು ದಿ:11-08-2025 ಕೊನೆಯ ದಿನವಾಗಿದ್ದು, ಮುಂಡಗೋಡ ತಾಲೂಕಿನಲ್ಲಿ ಅಡಿಕೆ, ಮಾವು ಮತ್ತು ಶುಂಠಿ ಬೆಳೆಗಳಿಗೆ ಬೆಳೆ ವಿಮಾ ಸೌಲಭ್ಯವಿರುತ್ತದೆ. ವಿಮಾ ಚಂದಾದಾರರಾಗಲು ರೈತರು FID ಯನ್ನು ಹೊಂದುವುದು ಕಡ್ಡಾಯವಾಗಿದ್ದು, ನಿಗದಿತ ಅರ್ಜಿ ನಮೂನೆ, ಬ್ಯಾಂಕ್ ಪಾಸ್ ಪುಸ್ತಕದ ಯಥಾ ಪ್ರತಿ, ಬೆಳೆ ನಮೂದಿರುವ ಪಹಣಿ ಪತ್ರಿಕೆ, ಸ್ವಯಂ ದೃಢೀಕರಣ, ನಾಮಿನಿ ವಿವರ ಮತ್ತು ಆಧಾರ್ ಕಾರ್ಡ್ ನ ಪ್ರತಿಯೊಂದಿಗೆ ಸಂಬಂಧಿತ ಬ್ಯಾಂಕ್/ಸಾಮಾನ್ಯ ಸೇವಾ ಕೇಂದ್ರ/ಗ್ರಾಮ್ ಒನ್ ಗಳಲ್ಲಿ ಅಂತಿಮ ದಿನಾಂಕದ ಒಳಗಾಗಿ ನೋಂದಾವಣೆ ಮಾಡಿಕೊಳ್ಳಬಹುದಾಗಿದೆ. ಅಡಿಕೆ ಬೆಳೆಗೆ ಒಟ್ಟು ವಿಮಾ ಮೊತ್ತ ಪ್ರತೀ ಎಕರೆಗೆ ರೂ 51200 ಇದ್ದು, ರೈತರು ಪಾವತಿಸಬೇಕಾದ ಒಟ್ಟು ವಿಮಾ ಕಂತು ರೂ 2591ಹಾಗೂ ಶುಂಠಿ ಬೆಳೆಗೆ ಒಟ್ಟು ವಿಮಾ ಮೊತ್ತ ಪ್ರತೀ ಎಕರೆಗೆ ರೂ 52000 ಇದ್ದು, ರೈತರು ಪಾವತಿಸಬೇಕಾದ ಒಟ್ಟು ವಿಮಾ ಕಂತು ರೂ 2631 ಹಾಗೂ ಮಾವು ಬೆಳೆಗೆ ಒಟ್ಟು ವಿಮಾ ಮೊತ್ತ ಪ್ರತೀ ಎಕರೆಗೆ ರೂ 32000 ಇದ್ದು, ರೈತರು ಪಾವತಿಸಬೇಕಾದ ಒಟ್ಟು ವಿಮಾ ಕಂತು ರೂ 5505 ಇದ್ದು ಕೊನೆಯ ದಿನಾಂಕ 11-08-2025 ಇರುತ್ತದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮುಂಡಗೋಡ ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ಕಛೇರಿ ಅಥವಾ ಹತ್ತಿರದ ಬ್ಯಾಂಕ್/ಸಾಮಾನ್ಯ ಸೇವಾ ಕೇಂದ್ರ/ಗ್ರಾಮ್ ಒನ್ ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಶ್ರೀ ಕೃಷ್ಣಾ ಟಿ. ಕುಳ್ಳೂರ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ.) ಮುಂಡಗೋಡ ರವರು ತಿಳಿಸಿರುತ್ತಾರೆ. ವರದಿ: ಮಂಜುನಾಥ F H

***

“ಭ್ರಷ್ಟರ ಬೇಟೆ” ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8088070392

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago