Latest

ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಶುಂಠಿ,ಮಾವು,ಅಡಿಕೆಗೆ ಅವಕಾಶ

ಮುಂಡಗೋಡ: ಕರ್ನಾಟಕ ಸರ್ಕಾರದ ಆದೇಶದ ಪ್ರಕಾರ 2025 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು (RWBCIS) ಉತ್ತರ ಕನ್ನಡ ಜಿಲ್ಲೆಯಲ್ಲಿ Reliance General Insurance Company Limited ಅಧಿಸೂಚಿತ ವಿಮಾ ಅನುಷ್ಠಾನ ಸಂಸ್ಥೆಯಾಗಿರುತ್ತದೆ. ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರು ವಿಮಾ ಕಂತನ್ನು ಪಾವತಿಸಲು ದಿ:11-08-2025 ಕೊನೆಯ ದಿನವಾಗಿದ್ದು, ಮುಂಡಗೋಡ ತಾಲೂಕಿನಲ್ಲಿ ಅಡಿಕೆ, ಮಾವು ಮತ್ತು ಶುಂಠಿ ಬೆಳೆಗಳಿಗೆ ಬೆಳೆ ವಿಮಾ ಸೌಲಭ್ಯವಿರುತ್ತದೆ. ವಿಮಾ ಚಂದಾದಾರರಾಗಲು ರೈತರು FID ಯನ್ನು ಹೊಂದುವುದು ಕಡ್ಡಾಯವಾಗಿದ್ದು, ನಿಗದಿತ ಅರ್ಜಿ ನಮೂನೆ, ಬ್ಯಾಂಕ್ ಪಾಸ್ ಪುಸ್ತಕದ ಯಥಾ ಪ್ರತಿ, ಬೆಳೆ ನಮೂದಿರುವ ಪಹಣಿ ಪತ್ರಿಕೆ, ಸ್ವಯಂ ದೃಢೀಕರಣ, ನಾಮಿನಿ ವಿವರ ಮತ್ತು ಆಧಾರ್ ಕಾರ್ಡ್ ನ ಪ್ರತಿಯೊಂದಿಗೆ ಸಂಬಂಧಿತ ಬ್ಯಾಂಕ್/ಸಾಮಾನ್ಯ ಸೇವಾ ಕೇಂದ್ರ/ಗ್ರಾಮ್ ಒನ್ ಗಳಲ್ಲಿ ಅಂತಿಮ ದಿನಾಂಕದ ಒಳಗಾಗಿ ನೋಂದಾವಣೆ ಮಾಡಿಕೊಳ್ಳಬಹುದಾಗಿದೆ. ಅಡಿಕೆ ಬೆಳೆಗೆ ಒಟ್ಟು ವಿಮಾ ಮೊತ್ತ ಪ್ರತೀ ಎಕರೆಗೆ ರೂ 51200 ಇದ್ದು, ರೈತರು ಪಾವತಿಸಬೇಕಾದ ಒಟ್ಟು ವಿಮಾ ಕಂತು ರೂ 2591ಹಾಗೂ ಶುಂಠಿ ಬೆಳೆಗೆ ಒಟ್ಟು ವಿಮಾ ಮೊತ್ತ ಪ್ರತೀ ಎಕರೆಗೆ ರೂ 52000 ಇದ್ದು, ರೈತರು ಪಾವತಿಸಬೇಕಾದ ಒಟ್ಟು ವಿಮಾ ಕಂತು ರೂ 2631 ಹಾಗೂ ಮಾವು ಬೆಳೆಗೆ ಒಟ್ಟು ವಿಮಾ ಮೊತ್ತ ಪ್ರತೀ ಎಕರೆಗೆ ರೂ 32000 ಇದ್ದು, ರೈತರು ಪಾವತಿಸಬೇಕಾದ ಒಟ್ಟು ವಿಮಾ ಕಂತು ರೂ 5505 ಇದ್ದು ಕೊನೆಯ ದಿನಾಂಕ 11-08-2025 ಇರುತ್ತದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮುಂಡಗೋಡ ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ಕಛೇರಿ ಅಥವಾ ಹತ್ತಿರದ ಬ್ಯಾಂಕ್/ಸಾಮಾನ್ಯ ಸೇವಾ ಕೇಂದ್ರ/ಗ್ರಾಮ್ ಒನ್ ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಶ್ರೀ ಕೃಷ್ಣಾ ಟಿ. ಕುಳ್ಳೂರ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ.) ಮುಂಡಗೋಡ ರವರು ತಿಳಿಸಿರುತ್ತಾರೆ. ವರದಿ: ಮಂಜುನಾಥ F H

***

“ಭ್ರಷ್ಟರ ಬೇಟೆ” ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8088070392

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

13 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

13 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

13 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

13 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago