Latest

ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಶುಂಠಿ,ಮಾವು,ಅಡಿಕೆಗೆ ಅವಕಾಶ

ಮುಂಡಗೋಡ: ಕರ್ನಾಟಕ ಸರ್ಕಾರದ ಆದೇಶದ ಪ್ರಕಾರ 2025 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು (RWBCIS) ಉತ್ತರ ಕನ್ನಡ ಜಿಲ್ಲೆಯಲ್ಲಿ Reliance General Insurance Company Limited ಅಧಿಸೂಚಿತ ವಿಮಾ ಅನುಷ್ಠಾನ ಸಂಸ್ಥೆಯಾಗಿರುತ್ತದೆ. ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರು ವಿಮಾ ಕಂತನ್ನು ಪಾವತಿಸಲು ದಿ:11-08-2025 ಕೊನೆಯ ದಿನವಾಗಿದ್ದು, ಮುಂಡಗೋಡ ತಾಲೂಕಿನಲ್ಲಿ ಅಡಿಕೆ, ಮಾವು ಮತ್ತು ಶುಂಠಿ ಬೆಳೆಗಳಿಗೆ ಬೆಳೆ ವಿಮಾ ಸೌಲಭ್ಯವಿರುತ್ತದೆ. ವಿಮಾ ಚಂದಾದಾರರಾಗಲು ರೈತರು FID ಯನ್ನು ಹೊಂದುವುದು ಕಡ್ಡಾಯವಾಗಿದ್ದು, ನಿಗದಿತ ಅರ್ಜಿ ನಮೂನೆ, ಬ್ಯಾಂಕ್ ಪಾಸ್ ಪುಸ್ತಕದ ಯಥಾ ಪ್ರತಿ, ಬೆಳೆ ನಮೂದಿರುವ ಪಹಣಿ ಪತ್ರಿಕೆ, ಸ್ವಯಂ ದೃಢೀಕರಣ, ನಾಮಿನಿ ವಿವರ ಮತ್ತು ಆಧಾರ್ ಕಾರ್ಡ್ ನ ಪ್ರತಿಯೊಂದಿಗೆ ಸಂಬಂಧಿತ ಬ್ಯಾಂಕ್/ಸಾಮಾನ್ಯ ಸೇವಾ ಕೇಂದ್ರ/ಗ್ರಾಮ್ ಒನ್ ಗಳಲ್ಲಿ ಅಂತಿಮ ದಿನಾಂಕದ ಒಳಗಾಗಿ ನೋಂದಾವಣೆ ಮಾಡಿಕೊಳ್ಳಬಹುದಾಗಿದೆ. ಅಡಿಕೆ ಬೆಳೆಗೆ ಒಟ್ಟು ವಿಮಾ ಮೊತ್ತ ಪ್ರತೀ ಎಕರೆಗೆ ರೂ 51200 ಇದ್ದು, ರೈತರು ಪಾವತಿಸಬೇಕಾದ ಒಟ್ಟು ವಿಮಾ ಕಂತು ರೂ 2591ಹಾಗೂ ಶುಂಠಿ ಬೆಳೆಗೆ ಒಟ್ಟು ವಿಮಾ ಮೊತ್ತ ಪ್ರತೀ ಎಕರೆಗೆ ರೂ 52000 ಇದ್ದು, ರೈತರು ಪಾವತಿಸಬೇಕಾದ ಒಟ್ಟು ವಿಮಾ ಕಂತು ರೂ 2631 ಹಾಗೂ ಮಾವು ಬೆಳೆಗೆ ಒಟ್ಟು ವಿಮಾ ಮೊತ್ತ ಪ್ರತೀ ಎಕರೆಗೆ ರೂ 32000 ಇದ್ದು, ರೈತರು ಪಾವತಿಸಬೇಕಾದ ಒಟ್ಟು ವಿಮಾ ಕಂತು ರೂ 5505 ಇದ್ದು ಕೊನೆಯ ದಿನಾಂಕ 11-08-2025 ಇರುತ್ತದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮುಂಡಗೋಡ ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ಕಛೇರಿ ಅಥವಾ ಹತ್ತಿರದ ಬ್ಯಾಂಕ್/ಸಾಮಾನ್ಯ ಸೇವಾ ಕೇಂದ್ರ/ಗ್ರಾಮ್ ಒನ್ ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಶ್ರೀ ಕೃಷ್ಣಾ ಟಿ. ಕುಳ್ಳೂರ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ.) ಮುಂಡಗೋಡ ರವರು ತಿಳಿಸಿರುತ್ತಾರೆ. ವರದಿ: ಮಂಜುನಾಥ F H

***

“ಭ್ರಷ್ಟರ ಬೇಟೆ” ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8088070392

nazeer ahamad

Recent Posts

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

9 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

9 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

11 hours ago

ವಿಷು ಪೋಸ್ಟರ್ ವಿವಾದ: ಶ್ರೀಕೃಷ್ಣನ ಪಕ್ಕದಲ್ಲಿ ಚಿಕನ್ ಚಿತ್ರ – ರೆಸ್ಟೋರೆಂಟ್ ಮಾಲೀಕ ಆರೆಸ್ಟ್.!!!

ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್‌ನಲ್ಲಿ ಶ್ರೀಕೃಷ್ಣನ…

13 hours ago

ಹಾರ್ಮುಝ್ ಜಲಸಂಧಿ ಮತ್ತೆ ತೆರೆಯಿತು: ಯುದ್ಧ ವಿರಾಮದ ಬಳಿಕ ಜಾಗತಿಕ ತೈಲ ಮಾರುಕಟ್ಟೆಗೆ ನೆಮ್ಮದಿ

ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…

13 hours ago

ಇನ್‌ಸ್ಟಾಗ್ರಾಮ್ ಹನಿಟ್ರ್ಯಾಪ್: 14 ವರ್ಷದ ಬಾಲಕ ಅಪಹರಣ – 1 ಕೋಟಿ ಸುಲಿಗೆ ಯತ್ನ, ಸಂಬಂಧಿಯೇ ಮಾಸ್ಟರ್ ಮೈಂಡ್!

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…

13 hours ago